AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಲೆಯಲ್ಲಿ ಸಿಲುಕಿದ್ದ ಕಾಗೆಯನ್ನು ರಕ್ಷಿಸಿದ ಪುಟ್ಟ ಬಾಲಕ, ಇಲ್ಲಿದೆ ನೋಡಿ ವಿಡಿಯೋ

ಶಾಲೆಯ ಕ್ರೀಡಾ ಆವರಣದ ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕಾಗೆಯನ್ನು ಬಲೆಯಿಂದ ಬಿಡಿಸಿ ಹಾರಲು ಬಿಟ್ಟ ವಿಡಿಯೋ ಒಂದು ಟ್ವಿಟರ್‌ನಲ್ಲಿ ವೈರಲ್ ಆಗಿದೆ.

Viral Video: ಬಲೆಯಲ್ಲಿ ಸಿಲುಕಿದ್ದ ಕಾಗೆಯನ್ನು ರಕ್ಷಿಸಿದ ಪುಟ್ಟ ಬಾಲಕ, ಇಲ್ಲಿದೆ ನೋಡಿ ವಿಡಿಯೋ
ಬಲೆಯಲ್ಲಿ ಸಿಲುಕಿದ್ದ ಕಾಗೆಯನ್ನು ರಕ್ಷಿಸಿದ ಪುಟ್ಟ ಬಾಲಕImage Credit source: Twitter
ಅಕ್ಷತಾ ವರ್ಕಾಡಿ
|

Updated on:Mar 03, 2023 | 6:29 PM

Share

ಅಯ್ಯೋ ಕಾಗೆಯನ್ನು ಮುಟ್ಟಿದರೆ ಅಪಶಕುನ ಎನ್ನುವವರು ನಮ್ಮ ಸುತ್ತಮುತ್ತಲೇ ಸಾಕಷ್ಟು ಜನರಿದ್ದಾರೆ. ಆದರೆ ಮಕ್ಕಳು ಮನಸ್ಸು ನಿಷ್ಕಲ್ಮಶ, ಅದರಲ್ಲಿ ಯಾವುದೇ ಅಸೂಯೆ , ಕ್ರೂರತನವಿರುವುದಿಲ್ಲ. ಇದಕ್ಕೆ ಉತ್ತಮ ನಿದರ್ಶನವೆಂಬಂತೆ ಇಲ್ಲೊಬ್ಬ ಪುಟ್ಟ ಹುಡುಗ ಶಾಲೆಯ ಕ್ರೀಡಾ ಆವರಣದ ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕಾಗೆಯನ್ನು ಬಲೆಯಿಂದ ಬಿಡಿಸಿ ಹಾರಲು ಬಿಟ್ಟಿದ್ದಾನೆ. ಕಾಗೆಯನ್ನು ಬಲೆಯಿಂದ ಸಾಕಷ್ಟು ಕಷ್ಟ ಪಡುತ್ತಿರುವುದನ್ನು ಜೊತೆಗೆ ಆತನ ಸಹಪಾಠಿ ನಿಂತು ನೋಡುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ಇದೀಗಾ ಟ್ವಿಟರ್‌ನಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನು ಸಬಿತಾ ಚಂದಾ ಎಂಬ ಬಳಕೆದಾರರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟ್‌ನ ಶೀರ್ಷಿಕೆಯಲ್ಲಿ, “ಕರುಣಾಮಯಿ ಹೃದಯವು ಅಸಂಖ್ಯಾತ ಜೀವನವನ್ನು ಸ್ಪರ್ಶಿಸುತ್ತದೆ” ಎಂದು ಬರೆದಿದ್ದಾರೆ. ಈ ವಿಡಿಯೋ ಇಲ್ಲಿದೆ ನೋಡಿ.

ಇದನ್ನು ಓದಿ: ಈ ಶ್ವಾನದ ದೇಶಪ್ರೇಮ ನೋಡಿ, ಇದು ಭಾರತೀಯರಿಗೆ ಹೆಮ್ಮೆಯ ವಿಚಾರ

ಶಾಲಾ ಸಮವಸ್ತ್ರವನ್ನು ಧರಿಸಿರುವ ಹುಡುಗ ಕಾಗೆಯನ್ನು ನೆಟ್‌ನಿಂದ ಬಿಡಿಸಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಹುಡುಗ ನಿಧಾನವಾಗಿ ಹಕ್ಕಿಯನ್ನು ಬಿಡುಗಡೆ ಮಾಡಿ ತನ್ನ ಅಂಗೈಗಳಲ್ಲಿ ಹಿಡಿಯುತ್ತಾನೆ. ಅವನ ಸ್ನೇಹಿತರು ಅವನನ್ನು ಸುತ್ತುವರಿದಿರುವುದನ್ನು ಕಾಣಬಹುದು. ಈ ವಿಡಿಯೋವನ್ನು ಎರಡು ದಿನಗಳ ಹಿಂದೆ ಶೇರ್ ಮಾಡಲಾಗಿತ್ತು. ಪೋಸ್ಟ್ ಮಾಡಿದ ನಂತರ, ಇದು 2,000 ಕ್ಕೂ ಹೆಚ್ಚು ಬಾರಿ ಲೈಕ್ ಪಡೆದುಕೊಂಡಿದೆ. ಜೊತೆಗೆ 88 ಸಾವಿರ ವೀಕ್ಷಣೆ ಪಡೆದುಕೊಂಡಿದೆ. ಈ ಪುಟ್ಟ ಬಾಲಕನಿಗೆ ಸದಾ ದೇವರ ಆರ್ಶೀವಾದ ಇರಲಿ ಎಂದು ಸಾಕಷ್ಟು ಬಳಕೆದಾರರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:28 pm, Fri, 3 March 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ