AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking: 6ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದ 11ರ ಬಾಲಕ

ಟ್ಯೂಷನ್​​ ಕ್ಲಾಸ್​ ಮುಗಿಸಿ ಮನೆ ಬಂದ ಬಾಲಕಿಯ ಬಟ್ಟೆಯಿಂದ ರಕ್ತಸ್ರಾವವಾಗುತ್ತಿರುವುದನ್ನು ಕಂಡು ಪೋಷಕರಿಗೆ ಅನುಮಾನ ಹುಟ್ಟಿಕೊಂಡಿದೆ. ಮಗಳನ್ನು ಸಮಾಧಾನಿಸಿ ವಿಚಾರಿಸಿದ ವೇಳೆ ಏನಾಯ್ತು ಎಂಬುದನ್ನು ಆಕೆ ಪೋಷಕರಿಗೆ ಹೇಳಿದ್ದಾಳೆ.ವೈದ್ಯಕೀಯ ಪರೀಕ್ಷೆಯ ವೇಳೆ ಅತ್ಯಾಚಾರ ದೃಢಪಟ್ಟಿದ್ದು, ಪೋಕ್ಸೊ ಕಾಯ್ದೆ ಸೇರಿದಂತೆ ಕಾನೂನಿನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಬಾಲಕನ ಮೇಲೆ ಕೇಸು ದಾಖಲಾಗಿದೆ.

Shocking: 6ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದ 11ರ ಬಾಲಕ
6ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದ 11ರ ಬಾಲಕ
ಅಕ್ಷತಾ ವರ್ಕಾಡಿ
|

Updated on: Apr 12, 2024 | 11:33 AM

Share

ಆಗ್ರಾ: ಆರು ವರ್ಷದ ಬಾಲಕಿಯ ಮೇಲೆ 11 ವರ್ಷದ ಬಾಲಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಬಾಲಕಿಯ ತಂದೆಯ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿ 4ನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯು ಪೊಲೀಸ್ ಠಾಣೆಯಲ್ಲಿದ್ದು, ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ವರದಿಯ ಪ್ರಕಾರ ಏಪ್ರಿಲ್ 8 ರಂದು ರಾತ್ರಿ 7:30 ರ ಸುಮಾರಿಗೆ ಬಾಲಕಿ ಟ್ಯೂಷನ್​​ ಕ್ಲಾಸ್​​ ಮುಗಿಸಿ ಬರುವ ಹೊತ್ತಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಏನೂ ಅರಿಯದ ಆರು ವರ್ಷದ ಬಾಲಕಿಯನ್ನು ಬಾಲಕ ತನ್ನೊಂದೊಗೆ ನಿರ್ಜನ ಪ್ರದೇಶಕ್ಕೆ ಕರೆದೊಯ್ಯದು ಅತ್ಯಾಚಾರ ವೆಸಗಿರುವುದು ತನಿಖೆಯ ವೇಳೆ ತಿಳಿದುಬಂದಿದೆ. ಟ್ಯೂಷನ್​​ ಕ್ಲಾಸ್​ ಮುಗಿಸಿ ಮನೆ ಬಂದ ಬಾಲಕಿಯ ಬಟ್ಟೆಯಲ್ಲಿ ರಕ್ತಸ್ರಾವ ಕಂಡು ಪೋಷಕರಿಗೆ ಅನುಮಾನ ಹುಟ್ಟಿಕೊಂಡಿದ್ದು, ವಿಚಾರಿಸಿದ ವೇಳೆ ಏನಾಯ್ತು ಎಂಬುದನ್ನು ಆಕೆ ಪೋಷಕರಿಗೆ ಹೇಳಿದ್ದಾಳೆ.

ಮತ್ತಷ್ಟು ಓದಿ: ಕಾಲ್​​ ಗರ್ಲ್​ಗಾಗಿ ಕರೆ ಮಾಡಿ ಎಂದು ಫೇಸ್​​ಬುಕ್​ನಲ್ಲಿ ಪತ್ನಿಯ ಫೋಟೊ, ಮೊಬೈಲ್ ನಂಬರ್ ಪೋಸ್ಟ್ ಮಾಡಿದ ವ್ಯಕ್ತಿ!

ಬಾಲಕ ಪರಿಚಯಸ್ಥನೇ ಎಂದು ಬಾಲಕಿ ಪೋಷಕರಿಗೆ ತಿಳಿದಿದ್ದು, ಬಾಲಕನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಘಟನೆ ಕುರಿತು ಮಾತನಾಡಿದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಸುಕನ್ಯಾ ಶರ್ಮಾ, “ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು, ಆರೋಪಿಯು ಪೊಲೀಸ್ ಠಾಣೆಯಲ್ಲಿದ್ದು, ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ವೈದ್ಯಕೀಯ ಪರೀಕ್ಷೆಯ ವೇಳೆ ಅತ್ಯಾಚಾರ ದೃಢಪಟ್ಟಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಸೇರಿದಂತೆ ಕಾನೂನಿನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಬಾಲಕನ ಮೇಲೆ ಕೇಸು ದಾಖಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಆತನನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ