Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನೆಯೊಳಗೆ ಬಂದು ಹಾಯಾಗಿ ಕುಳಿತು ಧಾರಾವಾಹಿ ವೀಕ್ಷಿಸಿದ ಹಾವು; ಇದು ಸೀರಿಯಲ್‌ ಎಫೆಕ್ಟ್‌

ಸೋಷಿಯಲ್‌ ಮೀಡಿಯಾದಲ್ಲಿ ಸ್ವಾರಸ್ಯಕರ ಘಟನೆಗಳ ಕುರಿತ ಕುರಿತ ವಿಡಿಯೋಗಳು ಆಗಾಗ್ಗೆ ಹರಿದಾಡುತ್ತಿರುತ್ತವೆ. ಇದೀಗ ಅಂತಹದೇ ವಿಡಿಯೋವೊಂದು ವೈರಲ್‌ ಆಗಿದ್ದು, ಮನೆಯೊಳಗೆ ನುಗ್ಗಿದ ಹಾವೊಂದು ಎಡೆ ಎತ್ತಿ ಕುಳಿತು ಸತತ 2 ಗಂಟೆಗಳ ಕಾಲ ಜೀ ಕನ್ನಡ ವಾಹಿನಿಯ ಸಿರಿಯಲ್‌ಗಳನ್ನು ವೀಕ್ಷಿಸಿದೆ. ಬಹುಶಃ ಇದು ನಾಗಿಣಿ ಸಿರಿಯಲ್ ಗೆ ಆಡಿಷನ್‌ ಕೊಡಲು ಬಂದಿರ್ಬೇಕು ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

Viral Video: ಮನೆಯೊಳಗೆ ಬಂದು ಹಾಯಾಗಿ ಕುಳಿತು ಧಾರಾವಾಹಿ ವೀಕ್ಷಿಸಿದ ಹಾವು; ಇದು ಸೀರಿಯಲ್‌ ಎಫೆಕ್ಟ್‌
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 01, 2024 | 11:31 AM

ವಿಶೇಷವಾಗಿ ಹೆಂಗಳೆಯರಿಗೆ ಸೀರಿಯಲ್‌ ಎಂದರೆ ಅಚ್ಚುಮೆಚ್ಚು. ಧಾರಾವಾಗಿ ನೋಡಲು ಕೂತರೆ ಪ್ರಪಂಚವೇ ಮುಳುಗಿ ಹೋದರೂ ಅವರಿಗೆ ಗೊತ್ತಾಗುವುದಿಲ್ಲ. ಅಷ್ಟು ಇಷ್ಟಪಟ್ಟು ಮಹಿಳೆಯರು ತಮ್ಮ ನೆಚ್ಚಿನ ಸೀರಿಯಲ್‌ಗಳನ್ನು ನೋಡುತ್ತಾರೆ. ಆದರೆ ಇಲ್ಲೊಂದು ಸ್ವಾರಸ್ಯಕರ ಘಟನೆ ನಡೆದಿದ್ದು, ಮನೆಯೊಳಗೆ ಬಂದ ಹಾವೊಂದು ಎಡೆ ಎತ್ತಿ ಕುಳಿತು ಸತತ ಎರಡು ಗಂಟೆಗಳ ಕಾಲ ಒಂದು ಚೂರು ಅಲ್ಲಾಡದೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸೀರಿಯಲ್‌ಗಳನ್ನು ಕುತೂಹಲದಿಂದ ವೀಕ್ಷಿಸಿದೆ. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಬಹುಶಃ ಇದು ಹೆಣ್ಣು ಹಾವು ಇರಬೇಕು, ಹಾಗಾಗಿ ಸೀರಿಯಲ್‌ ನೋಡುತ್ತಾ ಕುಳಿತಿದೆ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಸ್ನೇಕ್‌ ಶಿವು (snakeshivu) ಎಂಬವರು ಈ ಕುರಿತ ಪೋಸ್ಟ್‌ ಒಂದನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಜೀ ಟಿವಿ ಅಭಿಮಾನಿ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಮನೆಯೊಳಗೆ ನುಗ್ಗಿದ ಹಾವೊಂದು ಎಡೆ ಎತ್ತಿ ಕುಳಿತು ಸೀರಿಯಲ್‌ ವೀಕ್ಷಿಸುತ್ತಿರುವ ದೃಶ್ಯವನ್ನು ಕಾಣಬಹುದು. ಮನೆ ಯಜಮಾನಿ ಸ್ನೇಕ್‌ ಶಿವು ಅವರ ಬಳಿ ಬರೋಬ್ಬರಿ ಒಂದುವರೆ ಗಂಟೆಯಿಂದ ಒಂದು ಚೂರು ಅಲ್ಲಾಡದೆ ಟಿವಿ ನೋಡುತ್ತಾ ಕುಳಿತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ; ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ;

View this post on Instagram

A post shared by Snakeshivu (@snakeshivu)

ಮೂರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಬಹುಶಃ ನಾಗಿಣಿ ಸೀರಿಯಲ್‌ಗೆ ಆಡಿಷನ್‌ ಕೊಡಲು ಬಂದಿರಬೇಕು ಎಂದು ನೋಡುಗರು ತಮಾಷೆಯ ಕಾಮೆಂಟ್ಸ್‌ಗಳನ್ನು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್