Viral Video: ಮನೆಯೊಳಗೆ ಬಂದು ಹಾಯಾಗಿ ಕುಳಿತು ಧಾರಾವಾಹಿ ವೀಕ್ಷಿಸಿದ ಹಾವು; ಇದು ಸೀರಿಯಲ್‌ ಎಫೆಕ್ಟ್‌

ಸೋಷಿಯಲ್‌ ಮೀಡಿಯಾದಲ್ಲಿ ಸ್ವಾರಸ್ಯಕರ ಘಟನೆಗಳ ಕುರಿತ ಕುರಿತ ವಿಡಿಯೋಗಳು ಆಗಾಗ್ಗೆ ಹರಿದಾಡುತ್ತಿರುತ್ತವೆ. ಇದೀಗ ಅಂತಹದೇ ವಿಡಿಯೋವೊಂದು ವೈರಲ್‌ ಆಗಿದ್ದು, ಮನೆಯೊಳಗೆ ನುಗ್ಗಿದ ಹಾವೊಂದು ಎಡೆ ಎತ್ತಿ ಕುಳಿತು ಸತತ 2 ಗಂಟೆಗಳ ಕಾಲ ಜೀ ಕನ್ನಡ ವಾಹಿನಿಯ ಸಿರಿಯಲ್‌ಗಳನ್ನು ವೀಕ್ಷಿಸಿದೆ. ಬಹುಶಃ ಇದು ನಾಗಿಣಿ ಸಿರಿಯಲ್ ಗೆ ಆಡಿಷನ್‌ ಕೊಡಲು ಬಂದಿರ್ಬೇಕು ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

Viral Video: ಮನೆಯೊಳಗೆ ಬಂದು ಹಾಯಾಗಿ ಕುಳಿತು ಧಾರಾವಾಹಿ ವೀಕ್ಷಿಸಿದ ಹಾವು; ಇದು ಸೀರಿಯಲ್‌ ಎಫೆಕ್ಟ್‌
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 01, 2024 | 11:31 AM

ವಿಶೇಷವಾಗಿ ಹೆಂಗಳೆಯರಿಗೆ ಸೀರಿಯಲ್‌ ಎಂದರೆ ಅಚ್ಚುಮೆಚ್ಚು. ಧಾರಾವಾಗಿ ನೋಡಲು ಕೂತರೆ ಪ್ರಪಂಚವೇ ಮುಳುಗಿ ಹೋದರೂ ಅವರಿಗೆ ಗೊತ್ತಾಗುವುದಿಲ್ಲ. ಅಷ್ಟು ಇಷ್ಟಪಟ್ಟು ಮಹಿಳೆಯರು ತಮ್ಮ ನೆಚ್ಚಿನ ಸೀರಿಯಲ್‌ಗಳನ್ನು ನೋಡುತ್ತಾರೆ. ಆದರೆ ಇಲ್ಲೊಂದು ಸ್ವಾರಸ್ಯಕರ ಘಟನೆ ನಡೆದಿದ್ದು, ಮನೆಯೊಳಗೆ ಬಂದ ಹಾವೊಂದು ಎಡೆ ಎತ್ತಿ ಕುಳಿತು ಸತತ ಎರಡು ಗಂಟೆಗಳ ಕಾಲ ಒಂದು ಚೂರು ಅಲ್ಲಾಡದೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸೀರಿಯಲ್‌ಗಳನ್ನು ಕುತೂಹಲದಿಂದ ವೀಕ್ಷಿಸಿದೆ. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಬಹುಶಃ ಇದು ಹೆಣ್ಣು ಹಾವು ಇರಬೇಕು, ಹಾಗಾಗಿ ಸೀರಿಯಲ್‌ ನೋಡುತ್ತಾ ಕುಳಿತಿದೆ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಸ್ನೇಕ್‌ ಶಿವು (snakeshivu) ಎಂಬವರು ಈ ಕುರಿತ ಪೋಸ್ಟ್‌ ಒಂದನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಜೀ ಟಿವಿ ಅಭಿಮಾನಿ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಮನೆಯೊಳಗೆ ನುಗ್ಗಿದ ಹಾವೊಂದು ಎಡೆ ಎತ್ತಿ ಕುಳಿತು ಸೀರಿಯಲ್‌ ವೀಕ್ಷಿಸುತ್ತಿರುವ ದೃಶ್ಯವನ್ನು ಕಾಣಬಹುದು. ಮನೆ ಯಜಮಾನಿ ಸ್ನೇಕ್‌ ಶಿವು ಅವರ ಬಳಿ ಬರೋಬ್ಬರಿ ಒಂದುವರೆ ಗಂಟೆಯಿಂದ ಒಂದು ಚೂರು ಅಲ್ಲಾಡದೆ ಟಿವಿ ನೋಡುತ್ತಾ ಕುಳಿತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ; ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ;

View this post on Instagram

A post shared by Snakeshivu (@snakeshivu)

ಮೂರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಬಹುಶಃ ನಾಗಿಣಿ ಸೀರಿಯಲ್‌ಗೆ ಆಡಿಷನ್‌ ಕೊಡಲು ಬಂದಿರಬೇಕು ಎಂದು ನೋಡುಗರು ತಮಾಷೆಯ ಕಾಮೆಂಟ್ಸ್‌ಗಳನ್ನು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು