AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನೆಯೊಳಗೆ ಬಂದು ಹಾಯಾಗಿ ಕುಳಿತು ಧಾರಾವಾಹಿ ವೀಕ್ಷಿಸಿದ ಹಾವು; ಇದು ಸೀರಿಯಲ್‌ ಎಫೆಕ್ಟ್‌

ಸೋಷಿಯಲ್‌ ಮೀಡಿಯಾದಲ್ಲಿ ಸ್ವಾರಸ್ಯಕರ ಘಟನೆಗಳ ಕುರಿತ ಕುರಿತ ವಿಡಿಯೋಗಳು ಆಗಾಗ್ಗೆ ಹರಿದಾಡುತ್ತಿರುತ್ತವೆ. ಇದೀಗ ಅಂತಹದೇ ವಿಡಿಯೋವೊಂದು ವೈರಲ್‌ ಆಗಿದ್ದು, ಮನೆಯೊಳಗೆ ನುಗ್ಗಿದ ಹಾವೊಂದು ಎಡೆ ಎತ್ತಿ ಕುಳಿತು ಸತತ 2 ಗಂಟೆಗಳ ಕಾಲ ಜೀ ಕನ್ನಡ ವಾಹಿನಿಯ ಸಿರಿಯಲ್‌ಗಳನ್ನು ವೀಕ್ಷಿಸಿದೆ. ಬಹುಶಃ ಇದು ನಾಗಿಣಿ ಸಿರಿಯಲ್ ಗೆ ಆಡಿಷನ್‌ ಕೊಡಲು ಬಂದಿರ್ಬೇಕು ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

Viral Video: ಮನೆಯೊಳಗೆ ಬಂದು ಹಾಯಾಗಿ ಕುಳಿತು ಧಾರಾವಾಹಿ ವೀಕ್ಷಿಸಿದ ಹಾವು; ಇದು ಸೀರಿಯಲ್‌ ಎಫೆಕ್ಟ್‌
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jul 01, 2024 | 11:31 AM

Share

ವಿಶೇಷವಾಗಿ ಹೆಂಗಳೆಯರಿಗೆ ಸೀರಿಯಲ್‌ ಎಂದರೆ ಅಚ್ಚುಮೆಚ್ಚು. ಧಾರಾವಾಗಿ ನೋಡಲು ಕೂತರೆ ಪ್ರಪಂಚವೇ ಮುಳುಗಿ ಹೋದರೂ ಅವರಿಗೆ ಗೊತ್ತಾಗುವುದಿಲ್ಲ. ಅಷ್ಟು ಇಷ್ಟಪಟ್ಟು ಮಹಿಳೆಯರು ತಮ್ಮ ನೆಚ್ಚಿನ ಸೀರಿಯಲ್‌ಗಳನ್ನು ನೋಡುತ್ತಾರೆ. ಆದರೆ ಇಲ್ಲೊಂದು ಸ್ವಾರಸ್ಯಕರ ಘಟನೆ ನಡೆದಿದ್ದು, ಮನೆಯೊಳಗೆ ಬಂದ ಹಾವೊಂದು ಎಡೆ ಎತ್ತಿ ಕುಳಿತು ಸತತ ಎರಡು ಗಂಟೆಗಳ ಕಾಲ ಒಂದು ಚೂರು ಅಲ್ಲಾಡದೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸೀರಿಯಲ್‌ಗಳನ್ನು ಕುತೂಹಲದಿಂದ ವೀಕ್ಷಿಸಿದೆ. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಬಹುಶಃ ಇದು ಹೆಣ್ಣು ಹಾವು ಇರಬೇಕು, ಹಾಗಾಗಿ ಸೀರಿಯಲ್‌ ನೋಡುತ್ತಾ ಕುಳಿತಿದೆ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಸ್ನೇಕ್‌ ಶಿವು (snakeshivu) ಎಂಬವರು ಈ ಕುರಿತ ಪೋಸ್ಟ್‌ ಒಂದನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಜೀ ಟಿವಿ ಅಭಿಮಾನಿ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಮನೆಯೊಳಗೆ ನುಗ್ಗಿದ ಹಾವೊಂದು ಎಡೆ ಎತ್ತಿ ಕುಳಿತು ಸೀರಿಯಲ್‌ ವೀಕ್ಷಿಸುತ್ತಿರುವ ದೃಶ್ಯವನ್ನು ಕಾಣಬಹುದು. ಮನೆ ಯಜಮಾನಿ ಸ್ನೇಕ್‌ ಶಿವು ಅವರ ಬಳಿ ಬರೋಬ್ಬರಿ ಒಂದುವರೆ ಗಂಟೆಯಿಂದ ಒಂದು ಚೂರು ಅಲ್ಲಾಡದೆ ಟಿವಿ ನೋಡುತ್ತಾ ಕುಳಿತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ; ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ;

View this post on Instagram

A post shared by Snakeshivu (@snakeshivu)

ಮೂರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಬಹುಶಃ ನಾಗಿಣಿ ಸೀರಿಯಲ್‌ಗೆ ಆಡಿಷನ್‌ ಕೊಡಲು ಬಂದಿರಬೇಕು ಎಂದು ನೋಡುಗರು ತಮಾಷೆಯ ಕಾಮೆಂಟ್ಸ್‌ಗಳನ್ನು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ