AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನೆಯೊಳಗೆ ಬಂದು ಹಾಯಾಗಿ ಕುಳಿತು ಧಾರಾವಾಹಿ ವೀಕ್ಷಿಸಿದ ಹಾವು; ಇದು ಸೀರಿಯಲ್‌ ಎಫೆಕ್ಟ್‌

ಸೋಷಿಯಲ್‌ ಮೀಡಿಯಾದಲ್ಲಿ ಸ್ವಾರಸ್ಯಕರ ಘಟನೆಗಳ ಕುರಿತ ಕುರಿತ ವಿಡಿಯೋಗಳು ಆಗಾಗ್ಗೆ ಹರಿದಾಡುತ್ತಿರುತ್ತವೆ. ಇದೀಗ ಅಂತಹದೇ ವಿಡಿಯೋವೊಂದು ವೈರಲ್‌ ಆಗಿದ್ದು, ಮನೆಯೊಳಗೆ ನುಗ್ಗಿದ ಹಾವೊಂದು ಎಡೆ ಎತ್ತಿ ಕುಳಿತು ಸತತ 2 ಗಂಟೆಗಳ ಕಾಲ ಜೀ ಕನ್ನಡ ವಾಹಿನಿಯ ಸಿರಿಯಲ್‌ಗಳನ್ನು ವೀಕ್ಷಿಸಿದೆ. ಬಹುಶಃ ಇದು ನಾಗಿಣಿ ಸಿರಿಯಲ್ ಗೆ ಆಡಿಷನ್‌ ಕೊಡಲು ಬಂದಿರ್ಬೇಕು ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

Viral Video: ಮನೆಯೊಳಗೆ ಬಂದು ಹಾಯಾಗಿ ಕುಳಿತು ಧಾರಾವಾಹಿ ವೀಕ್ಷಿಸಿದ ಹಾವು; ಇದು ಸೀರಿಯಲ್‌ ಎಫೆಕ್ಟ್‌
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jul 01, 2024 | 11:31 AM

Share

ವಿಶೇಷವಾಗಿ ಹೆಂಗಳೆಯರಿಗೆ ಸೀರಿಯಲ್‌ ಎಂದರೆ ಅಚ್ಚುಮೆಚ್ಚು. ಧಾರಾವಾಗಿ ನೋಡಲು ಕೂತರೆ ಪ್ರಪಂಚವೇ ಮುಳುಗಿ ಹೋದರೂ ಅವರಿಗೆ ಗೊತ್ತಾಗುವುದಿಲ್ಲ. ಅಷ್ಟು ಇಷ್ಟಪಟ್ಟು ಮಹಿಳೆಯರು ತಮ್ಮ ನೆಚ್ಚಿನ ಸೀರಿಯಲ್‌ಗಳನ್ನು ನೋಡುತ್ತಾರೆ. ಆದರೆ ಇಲ್ಲೊಂದು ಸ್ವಾರಸ್ಯಕರ ಘಟನೆ ನಡೆದಿದ್ದು, ಮನೆಯೊಳಗೆ ಬಂದ ಹಾವೊಂದು ಎಡೆ ಎತ್ತಿ ಕುಳಿತು ಸತತ ಎರಡು ಗಂಟೆಗಳ ಕಾಲ ಒಂದು ಚೂರು ಅಲ್ಲಾಡದೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸೀರಿಯಲ್‌ಗಳನ್ನು ಕುತೂಹಲದಿಂದ ವೀಕ್ಷಿಸಿದೆ. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಬಹುಶಃ ಇದು ಹೆಣ್ಣು ಹಾವು ಇರಬೇಕು, ಹಾಗಾಗಿ ಸೀರಿಯಲ್‌ ನೋಡುತ್ತಾ ಕುಳಿತಿದೆ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಸ್ನೇಕ್‌ ಶಿವು (snakeshivu) ಎಂಬವರು ಈ ಕುರಿತ ಪೋಸ್ಟ್‌ ಒಂದನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಜೀ ಟಿವಿ ಅಭಿಮಾನಿ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಮನೆಯೊಳಗೆ ನುಗ್ಗಿದ ಹಾವೊಂದು ಎಡೆ ಎತ್ತಿ ಕುಳಿತು ಸೀರಿಯಲ್‌ ವೀಕ್ಷಿಸುತ್ತಿರುವ ದೃಶ್ಯವನ್ನು ಕಾಣಬಹುದು. ಮನೆ ಯಜಮಾನಿ ಸ್ನೇಕ್‌ ಶಿವು ಅವರ ಬಳಿ ಬರೋಬ್ಬರಿ ಒಂದುವರೆ ಗಂಟೆಯಿಂದ ಒಂದು ಚೂರು ಅಲ್ಲಾಡದೆ ಟಿವಿ ನೋಡುತ್ತಾ ಕುಳಿತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ; ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ;

View this post on Instagram

A post shared by Snakeshivu (@snakeshivu)

ಮೂರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಬಹುಶಃ ನಾಗಿಣಿ ಸೀರಿಯಲ್‌ಗೆ ಆಡಿಷನ್‌ ಕೊಡಲು ಬಂದಿರಬೇಕು ಎಂದು ನೋಡುಗರು ತಮಾಷೆಯ ಕಾಮೆಂಟ್ಸ್‌ಗಳನ್ನು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ