Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಂಡೀಪುರ; ಸ್ಕ್ರೀನ್ ಬಿಟ್ಟು ಕಾಡಿನ ದಾರಿ ಹಿಡಿಯಬೇಕು ಎನ್ನಿಸುತ್ತಿಲ್ಲವೆ?

Tiger : ಗುಬ್ಬಿಯಿಂದ ಆನೆಯವರೆಗೂ ಮಳೆ ಎನ್ನುವುದು ಪುಳಕ ತರುವಂಥದ್ದು. ಈಗ ಬಂಡೀಪುರಕ್ಕೆ ಹೋದರೆ ಹುಲಿ, ಚಿರತೆ, ಕರಡಿಯಂಥ ದೈತ್ಯಪ್ರಾಣಿಗಳು ಮಳೆಗಾಲವನ್ನು ಹೇಗೆ ಕಳೆಯುತ್ತಿವೆ ಎಂದು ನೋಡಬಹುದಾಗಿದೆ.

Viral Video: ಬಂಡೀಪುರ; ಸ್ಕ್ರೀನ್ ಬಿಟ್ಟು ಕಾಡಿನ ದಾರಿ ಹಿಡಿಯಬೇಕು ಎನ್ನಿಸುತ್ತಿಲ್ಲವೆ?
ಬಂಡೀಪುರದ ರಾಷ್ಟ್ರೀಯ ಉದ್ಯಾನವನದಲ್ಲಿ ಮಳೆನೀರು ಕುಡಿಯುತ್ತಿರುವ ಹುಲಿ
Follow us
ಶ್ರೀದೇವಿ ಕಳಸದ
|

Updated on:Jul 29, 2023 | 2:06 PM

Bandipur : ಬಾಲ್ಯದಲ್ಲಿ ಧೋ ಎಂದು ಸುರಿದು ನಿಂತ ಮಳೆಗೆ ಅಂಗಳದಲ್ಲಿ ಅಲ್ಲಲ್ಲಿ ಸಣ್ಣಸಣ್ಣ ನೀರಗುಂಡಿಗಳು ಸೃಷ್ಟಿಯಾಗುತ್ತಿದ್ದವು. ಆಕಾಶ ಕಾಣುವಷ್ಟು ತಿಳಿಯಾದ ಆ ನೀರಿನಲ್ಲಿ ಗುಬ್ಬಚ್ಚಿಗಳು ಸ್ನಾನ ಮಾಡಿ ನೀರು ಕುಡಿದು ಪುರ್ ಎಂದು ಹಾರಿ ಹೋಗುತ್ತಿದ್ದವು. ಪ್ರಕೃತಿಯ ಇಂಥ ಸಣ್ಣಪುಟ್ಟ ಬೆರಗು  ಮೈಮನಸ್ಸೆಲ್ಲ ಪುಳಕಗೊಳಿಸುತ್ತಿತ್ತು. ಈ ದೃಶ್ಯಗಳು ಈಗಲೂ ಇವೆ. ಆದರೆ ನಾವು ಎಲ್ಲಿ ಕಳೆದುಹೋಗಿದ್ದೇವೆ? ಮತ್ತೆ ಮತ್ತೆ ಹೇಳಬೇಕಿಲ್ಲ. ಚೈತನ್ಯ ತುಂಬುವ ಇಂಥ ದೃಶ್ಯಗಳಿಗಾಗಿ ಖಂಡಿತ ಸಮಯ ಮಾಡಿಕೊಳ್ಳಲೇಬೇಕು. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ, ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ (Bandkpur National Park) ಬಿದ್ದ ಮಳೆ ಮತ್ತು ಅದರಿಂದ ಉಂಟಾದ ನೀರಗುಂಡಿಯಲ್ಲಿ ಹುಲಿಯೊಂದು ನೀರು ಕುಡಿಯುತ್ತಿದೆ.

ಐಎಫ್‌ಎಸ್ ಅಧಿಕಾರಿ ರಮೇಶ್ ಪಾಂಡೆ ಇದನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಈತನಕ 3,000ಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದು, ಸುಮಾರು 400 ಜನರು ರೀಟ್ವೀಟ್ ಮಾಡಿದ್ದಾರೆ. ಮಳೆಗಾಲದಲ್ಲಿ ವನ್ಯಜೀವಿಗಳನ್ನು ಮತ್ತು ಅವುಗಳ ಜೀವನಶೈಲಿಯನ್ನು ನೋಡಬೇಕೆಂದರೆ ಬಂಡೀಪುರಕ್ಕೆ ಹೋಗಲೇಬೇಕು ಎನ್ನುವಂತಿದೆ ಈ ವಿಡಿಯೋ.

ಇದನ್ನೂ ಓದಿ : Viral Video: ಡಿಜಿಟಲ್ ಭಿಕ್ಷೆ; ಸ್ಲೀಪರ್ ಕೋಚ್​ನಲ್ಲಿಯೂ ರೀಲಿಗರ ಹಾವಳಿ; ಕಿಡಿಕಾರಿದ ನೆಟ್ಟಿಗರು

ಇಡೀ ದೇಶದಲ್ಲಿ ಅತೀ ಹೆಚ್ಚು ಹುಲಿಗಳನ್ನು ಹೊಂದಿದ ರಾಜ್ಯ ಕರ್ನಾಟಕ. ಅಷ್ಟೇ ಏಕೆ ಚಿರತೆ, ಆನೆ, ಕರಡಿ, ಸಾಂಬಾರ್​​ ಪ್ರಾಣಿಗಳನ್ನು ಬಂಡೀಪುರ ಅರಣ್ಯದಲ್ಲಿ ಕಾಣಬಹುದು. ಹಲವಾರು ಥರದ ಪಕ್ಷಿಗಳನ್ನೂ. ತಂಪಾದ ವಾತಾವರಣ ಮತ್ತು ಪ್ರಯಾಣ ಜೊತೆಗೆ ಪ್ರಾಣಿ ಪಕ್ಷಿಗಳ ಅಪರೂಪದ ದೃಶ್ಯಗಳನ್ನೂ ಇಲ್ಲಿ ನೋಡಬಹುದಾಗಿದೆ.

ಇದನ್ನೂ ಓದಿ : Viral Video: ವೈಪರ್ ವಿಥ್ ಸ್ಟಿಕರ್​; ಈ ಕಾರ್​ನಿಂದ ಅದೆಷ್ಟು ಅಪಘಾತಗಳಾಗಿವೆಯೋ

ಈ ವಿಡಿಯೋ ನೋಡಿದ ನೆಟ್ಟಿಗರು ಅಚ್ಚರಿಗೊಳಗಾಗಿದ್ದಾರೆ. ಇದು ಅಪರೂಪದ ದೃಶ್ಯ, ಹೀಗೆ ಸೆರೆಹಿಡಿದಿರುವ ಅರಣ್ಯ ಸಿಬ್ಬಂದಿ ಕಾರ್ಯ ಮೆಚ್ಚುವಂಥದ್ದು. ಕಾಡಿನ ಸೌಂದರ್ಯವನ್ನು ಸೆರೆಹಿಡಿಯಲು ಅಪಾರ ತಾಳ್ಮೆ ಮತ್ತು ಜ್ಞಾನ ಬೇಕು, ಇದು ಕೆಲವರಿಗಷ್ಟೇ ಸಿದ್ಧಿಸುತ್ತದೆ. ಈ ವಿಡಿಯೋಗಾಗಿ ಧನ್ಯವಾದ ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:03 pm, Sat, 29 July 23

ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ