AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊನೆಗೂ ಸಿಕ್ಕೆ ಬಿಡ್ತು ಕರಿಮಣಿ ಮಾಲೀಕನ ಊರು…

ಇತ್ತೀಚಿಗೆ ಸೋಷಿಯಲ್ ಮೀಡಿಯಾದಲ್ಲಿ ಕರಿಮಣಿ ಮಾಲೀಕ ನೀ ನಲ್ಲ ಹಾಗೂ ಕರಿಮಣಿ ಮಾಲೀಕ ರಾಹುಲ್ಲಾ ಹಾಡು ಸಖತ್ ಹವಾ ಸೃಷ್ಟಿಸಿತ್ತು. ಈಗಂತೂ ಎಲ್ಲಿ ನೋಡಿದ್ರೂ ಈ ಹಾಡಿನ ರೀಲ್ಸ್ ವಿಡಿಯೋ, ಟ್ರೋಲ್ ಮೀಮ್ಸ್ ಗಳು ಹರಿದಾಡುತ್ತಿವೆ. ಈ ಮಧ್ಯೆ ಕರಿಮಣಿ ಮಾಲೀಕನ ಊರಿನ ಕುರಿತ ಟ್ರೋಲ್ ವಿಡಿಯೋವೊಂದು ಸಖತ್ ವೈರಲ್ ಆಗಿದ್ದು, ಓಹೋ ಹಾಗಾದ್ರೆ ಕರಿಮಣಿ ಮಾಲೀಕನ ಊರು ಇದೇನಾ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

Viral Video: ಕೊನೆಗೂ ಸಿಕ್ಕೆ ಬಿಡ್ತು ಕರಿಮಣಿ ಮಾಲೀಕನ ಊರು…
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Mar 08, 2024 | 6:30 PM

ಇಂದಿನ ಡಿಜಿಟಲ್ ಯುಗ. ಇಲ್ಲಿ ಯಾವುದಾರೂ ಒಂದು ಸಾಂಗ್ ಅಥವಾ ವಿಡಿಯೋ ವೈರಲ್ ಆದ್ರೆ ಸಾಕು, ಪ್ರತಿಯೊಬ್ಬರೂ ಅದೇ ಹಾಡಿಗೆ ರೀಲ್ಸ್ ಮಾಡಿ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಿರುತ್ತಾರೆ. ಇದಕ್ಕೆ ಕರಿಮಣಿ ಮಾಲೀಕ ಹಾಡು ಸೂಕ್ತ ನಿದರ್ಶನ ಅಂತಾನೇ ಹೇಳಬಹುದು. ಹೌದು ಓ ನಲ್ಲ… ನೀ… ನಲ್ಲ ಕರಿಮಣಿ ಮಾಲೀಕ ನೀ ನಲ್ಲ… ಹಾಡು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟ್ರೆಂಡ್ ಕ್ರಿಯೇಟ್ ಮಾಡಿರುವ ಹಾಡು. ಇನ್ಸ್ಟಾಗ್ರಾಮ್, ಫೇಸ್ ಬುಕ್, ಯುಟ್ಯೂಬ್ ಎಲ್ಲಾ ರೀತಿಯ ಸಾಮಜಿಕ ಮಾಧ್ಯಮ ಫ್ಲಾಟ್ಫಾರ್ಮ್ ಗಳಲ್ಲೂ ಈ ಹಾಡಿನದ್ದೇ ಹವಾ. ಇತ್ತೀಚಿಗಂತೂ ಕರಿಮಣಿ ಮಾಲೀಕ ನೀ ನಲ್ಲ… ಹಾಗೂ ಕರಿಮಣಿ ಮಾಲೀಕ ರಾಹುಲ್ಲಾ ಹಾಡಿನ ರೀಲ್ಸ್ ವಿಡಿಯೋಗಳು ಮತ್ತು ಟ್ರೋಲ್, ಮೀಮ್ಸ್ ಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಈ ನಡುವೆ ಕರಿಮಣಿ ಮಾಲೀಕನ ಊರಿನ ಬಗ್ಗೆಯೂ ಟ್ರೋಲ್ ವಿಡಿಯೋಗಳು ಹರಿದಾಡುತ್ತಿದ್ದು, ಅಬ್ಬಬ್ಬಾ ಕೊನೆಗೂ ಸಿಕ್ಕೇ ಬಿಡ್ತಲ್ಲಾ ಕರಿಮಣಿ ಮಾಲೀಕನ ಊರು ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋವನ್ನು ಬಾನದಾರಿ ಮಿಮ್ಸ್ (@baanadaari_memes) ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದು, “ಕರಿಮಣಿ ಮಾಲೀಕನ ಊರು ಸಿಕ್ಬಿಡ್ತು” ಎಂಬ ತಮಾಷೆಯ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್ ವಿಡಿಯೋದಲ್ಲಿ ಯಾವುದೋ ಒಂದು ಊರಿನ ರಸ್ತೆಯ ಪಕ್ಕದಲ್ಲಿರುವ ನಾಮಫಲಕದಲ್ಲಿ ಕರಿಮಣೀಲು ಎಂಬ ಹೆಸರನ್ನು ಬರೆದಿರುವುದನ್ನು ಕಾಣಬಹುದು. ʼಕರಿಮಣೇಲುʼ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಎಂಬ ಊರಿಗೆ ಸಮೀಪದಲ್ಲಿರುವ ಒಂದು ಸಣ್ಣ ಗ್ರಾಮವಾಗಿದೆ.

ಇದನ್ನೂ ಓದಿ: ಇಲ್ಲಿ ಪುರುಷರು ಕಡ್ಡಾಯವಾಗಿ ಎರಡು ಮದುವೆಯಾಗಲೇಬೇಕು! ʼನೋʼ ಅಂದ್ರೆ ಕಠಿಣ ಶಿಕ್ಷೆ

ಮೂರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2.2 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಅಂತೂ ಇಂತೂ ಕರಿಮಣಿ ಮಾಲೀಕನ ಊರನ್ನು ಹುಡುಕಿದ್ರಲ್ಲಾʼ ಎಂಬ ತಮಾಷೆಯ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಕರಿಮಣೇಲು ಇದು ನಮ್ಮ ಗ್ರಾಮʼ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼನಮ್ ಜನ ಸಾಕ್ಷಿ ಎಲ್ಲಿದ್ರೂ ಬಿಡಲ್ಲ ಹುಡ್ಕಿ ಕೇಸ್ ಕ್ಲೋಸ್ ಮಾಡ್ತಾರೆʼ ಎಂಬ ತಮಾಷೆಯ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ಅಬ್ಬಬ್ಬಾ ಕೊನೆಗೂ ಸಿಕ್ತಲ್ಲಾ ಕರಿಮಣಿ ಮಾಲೀಕನ ಊರು ಎಂದು ತಮಾಷೆ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ