AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮರಿಗಳನ್ನು ಮುಟ್ಟಿದಕ್ಕೆ ವ್ಯಕ್ತಿಯನ್ನು ಅಟ್ಟಾಡಿಸಿ ದಾಳಿ ಮಾಡಿದ ವಿಡಿಯೋ ಸಖತ್ ವೈರಲ್

ಈ ವಿಡಿಯೋ ಒಮ್ಮೆ ನೋಡಿದಾಗ ನಿಮಗೆ ಹಾಸ್ಯಾಸ್ಪದ ಎನಿಸದರೂ ಕೂಡ, ತಾಯಿ ಬಾತುಕೋಳಿ ತನ್ನ ಮರಿಗಳಿಗೆ ಹೇಗೆ ರಕ್ಷಣೆಯನ್ನು ನೀಡಿದ್ದಾಳೆ ಎಂಬುದನ್ನು ಇಲ್ಲಿ ಕಾಣಬಹುದು.

Viral Video: ಮರಿಗಳನ್ನು ಮುಟ್ಟಿದಕ್ಕೆ ವ್ಯಕ್ತಿಯನ್ನು ಅಟ್ಟಾಡಿಸಿ ದಾಳಿ ಮಾಡಿದ ವಿಡಿಯೋ ಸಖತ್ ವೈರಲ್
Goose Attacks Man
TV9 Web
| Updated By: ಅಕ್ಷತಾ ವರ್ಕಾಡಿ|

Updated on: Nov 30, 2022 | 4:19 PM

Share

ತಾಯಿ ಪ್ರೀತಿಯೆಂದರೆ ಹಾಗೇ ಎಲ್ಲಕ್ಕಿಂತ ಶ್ರೇಷ್ಠವಾದುದು. ಅದು ಮನುಷ್ಯನೇ ಆಗಿರಲಿ ಅಥವಾ ಪ್ರಾಣಿಯಾಗಿರಲಿ ತಾಯಿಯಾದವಳು ಯಾವಾಗಲೂ ತನ್ನ ಮಗುವಿಗೆ ರಕ್ಷ ಕವಚವಾಗಿರುತ್ತಾಳೆ. ತನ್ನ ಮಗುವಿನ ತಂಟೆಗೆ ಬಂದರೆ ಅವರನ್ನು ಬಿಡುವ ಮಾತೇ ಇಲ್ಲ. ಅಂಥದ್ದೇ ಘಟನೆ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಗಿ ವೈರಲ್ ಆಗಿದೆ.

ಈ ವಿಡಿಯೋ ಒಮ್ಮೆ ನೋಡಿದಾಗ ನಿಮಗೆ ಹಾಸ್ಯಾಸ್ಪದ ಎನಿಸದರೂ ಕೂಡ, ತಾಯಿ ಬಾತುಕೋಳಿ ತನ್ನ ಮರಿಗಳಿಗೆ ಹೇಗೆ ರಕ್ಷಣೆಯನ್ನು ನೀಡಿದ್ದಾಳೆ ಎಂಬುದನ್ನು ಇಲ್ಲಿ ಕಾಣಬಹುದು. ಈ ವಿಡಿಯೋವನ್ನು ನೀವೇ ಒಮ್ಮೆ ನೋಡಿ.

ಎರಡು ದೊಡ್ಡ ಬಾತುಕೋಳಿಗಳು ಜೊತೆಗೆ ಅದರ ಮರಿಗಳು ರಸ್ತೆ ಬದಿಯಲ್ಲಿ ಅವರ ಪಾಡಿಗೆ ಗುಂಪಾಗಿ ಹೋಗುತ್ತಿದೆ. ಇದನ್ನು ನೋಡಿದ ವ್ಯಕ್ತಿಯೊಬ್ಬ ಮರಿಗಳನ್ನು ಮುಟ್ಟಲು ಹೋಗುತ್ತಾನೆ. ಮರಿಗಳನ್ನು ಮುಟ್ಟಲು ಬಂದ ವ್ಯಕ್ತಿಯನ್ನು ನೋಡಿದ ಕೂಡಲೇ ದೊಡ್ಡ ಬಾತುಕೋಳಿಗಳೆರಡು ವ್ಯಕ್ತಿಯನ್ನು ರೋಡಿನಲ್ಲಿ ಕುಕ್ಕಿ, ಅಟ್ಟಾಡಿಸಿ ಓಡಾಡಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನು ಓದಿ: ಹಿಮತುಂಬಿದ ರಸ್ತೆಯಲ್ಲಿ ನಾಯಿಯೊಂದಿಗೆ ವಾಕಿಂಗ್ ಹೊರಟರೆ ಏನಾಗುತ್ತದೆ ನೋಡಿ

ಇಲ್ಲಿ ತಾಯಿ ಬಾತುಕೋಳಿ ತನ್ನ ಮರಿಗಳನ್ನು ಯಾರೋ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ತಿಳಿದು ಗಾಬರಿಗೊಂಡು ತನ್ನ ಮರಿಗಳನ್ನು ಮುಟ್ಟಲು ಬಂದ ವ್ಯಕ್ತಿಯ ಮೇಲೆ ಕೋಪಗೊಂಡು ಸಾಕಷ್ಟು ದೂರದ ವರೆಗೆ ಆತನನ್ನು ಓಡಾಡಿಸಿಕೊಂಡು ಹೋಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದಂತೆ ಸಾಕಷ್ಟು ವೀಕ್ಷಕರೂ ತಾಯಿಯ ಪ್ರೀತಿಯೇ ವಿಶೇಷವಾದುದು ಎಂದು ಕಮೆಂಟ್ ಮಾಡಿದ್ದಾರೆ. ಜೊತೆಗೆ ಸಾಕಷ್ಟು ಪ್ರಾಣಿ ಪ್ರಿಯರೂ ತಮ್ಮ ಖಾತೆಗಳಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವೀಡಿಯೊವನ್ನು ಚಿತ್ರೀಕರಿಸುತ್ತಿದ್ದ ಮಹಿಳೆ ಈ ಅನೀರಿಕ್ಷಿತ ಪ್ರಸಂಗವನ್ನು ಕಂಡು ನಗುತ್ತಿರುವುದು ವಿಡಿಯೋದ ಮೂಲಕ ಕೇಳಬಹುದು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ:

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!