Viral Video: ಕುಸಿದು ಬಿದ್ದ ನಾಯಿಗೆ ಮರುಜೀವ ತುಂಬಿದ ಆಪತ್ಭಾಂದವ, ವಿಡಿಯೋ ನೋಡಿ

ರಸ್ತೆಯ ಮೇಲೆ ಕುಸಿದು ಬಿದ್ದು ನಿರ್ಜೀವವಾದಂತೆ ಇದ್ದ ನಾಯಿಗೆ ತುರ್ತು ಜೀವ ಉಳಿಸುವ ವಿಧಾನ ಸಿಪಿಆರ್ ಮೂಲಕ ಮರುಜೀವ ನೀಡಿದ ವ್ಯಕ್ತಿಯ ವಿಡಿಯೋ ವೈರಲ್ ಆಗುತ್ತಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Viral Video: ಕುಸಿದು ಬಿದ್ದ ನಾಯಿಗೆ ಮರುಜೀವ ತುಂಬಿದ ಆಪತ್ಭಾಂದವ, ವಿಡಿಯೋ ನೋಡಿ
ನಾಯಿಗೆ ಮರುಜೀವ ತುಂಬಿದ ವ್ಯಕ್ತಿImage Credit source: Twitter
Follow us
| Updated By: Rakesh Nayak Manchi

Updated on:Jun 03, 2022 | 10:25 PM

ಮನುಷ್ಯರಂತೆ ಬುದ್ಧಿವಂತಿಕೆಯನ್ನು ಹೊಂದಿರದ ಪ್ರಾಣಿಗಳಿಗೆ ದಯೆ ತೋರುವುದು ಮಹಾನ್​ ಕಾರ್ಯವೇ ಸರಿ. ಅಂತಹ ದಯೆಯ ವಿಡಿಯೋವೊಂದು ವೈರಲ್ ಆಗುತ್ತಿದೆ. ನಾಯಿಯೊಂದು ಕುಸಿದುಬಿದ್ದಾಗ ಆಪದ್ಬಾಂದವನಾಗಿ ಬಂದ ವ್ಯಕ್ತಿಯೊಬ್ಬರು ನಾಯಿಗೆ ಮರುಜೀವ ತುಂಬಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವೈರಲ್ ವಿಡಿಯೋ (Viral Video)ದಲ್ಲಿ ಇರುವಂತೆ, ನಾಯಿ (Dog)ಯೊಂದು ರಸ್ತೆಯ ಮೇಲೆ ಕುಸಿದು ಬಿದ್ದು ನಿರ್ಜೀವವಾದಂತೆ ಇರುತ್ತದೆ. ಕೂಡಲೇ ಸ್ಥಳಕ್ಕೆ ಬಂದ ವ್ಯಕ್ತಿಯೊಬ್ಬರು ನಾಯಿಗೆ ತುರ್ತು ಸಿಪಿಆರ್ (ಕಾರ್ಡಿಯೋಪಲ್ಮನರಿ ರೆಸಸಿಟೇಶನ್) ನೀಡಿ ಜೀವ ತುಂಬಿದ್ದಾರೆ. ಅದರಂತೆ ನಿರ್ಜೀವವಾಗಿ ಬಿದ್ದಿದ್ದ ನಾಯಿ ಎದ್ದು ಓಡಾಡಲು ಪ್ರಾರಂಭಿಸಿದೆ.

ಇದನ್ನೂ ಓದಿ: Trending: ತಂದೆಯ ಹಾಡಿಗೆ ಇ ಐ ಇ ಐ ಓ… ಎಂದ ಮುದ್ದಾದ ಮಗು, ವಿಡಿಯೋ ವೈರಲ್

ಹೃದಯ ಮುಟ್ಟುವ ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೀಕ್ಷಿಸಿ:

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮನಸೋತಿದ್ದು, ನಾಯಿಯನ್ನು ರಕ್ಷಿಸಿದ ವ್ಯಕ್ತಿಗೆ ಧನ್ಯವಾದ ಅರ್ಪಿಸಿದ್ದಾರೆ. “CPR ಅತ್ಯಗತ್ಯ ಜೀವ ಉಳಿಸುವ ಕ್ರಮವಾಗಿದೆ, ನಮ್ಮಲ್ಲಿ ಪ್ರತಿಯೊಬ್ಬರೂ ಅದರಲ್ಲಿ ಪರಿಣತರಾಗಿರಬೇಕು ಮತ್ತು ಪ್ರಾಣಿಗಳು ಕೂಡ ಈ ವಿಷಯದಲ್ಲಿ ನಮ್ಮ ದಯೆಗೆ ಅರ್ಹವಾಗಿವೆ” ಎಂದು ಓರ್ವ ಬಳಕೆದಾರ ಅಭಿಪ್ರಾಯ ಹಂಚಿಕೊಂಡಿದ್ದಾನೆ. ಇನ್ನೊಬ್ಬರು, “ಯಾರ ಹೃದಯವು ಇತರರಿಗಾಗಿ ನೆಲೆಸುತ್ತದೆಯೋ ಅವರು ಧನ್ಯರು” ಎಂದು ಹೇಳಿದ್ದಾರೆ. “ಮಾನವೀಯತೆಯ ಮೇಲಿನ ನಂಬಿಕೆಯನ್ನು ಪುನಃಸ್ಥಾಪಿಸಲಾಗಿದೆ” ಎಂದು ಮತ್ತೊಬ್ಬರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: R Madhavan Birthday: ಮಾಧವನ್​ ಜನ್ಮದಿನ; ಬಹುಭಾಷಾ ನಟನ ಈ 5 ಅತ್ಯುತ್ತಮ ಸಿನಿಮಾಗಳನ್ನು ಮಿಸ್​ ಮಾಡಲೇಬೇಡಿ

ಸಿಪಿಆರ್ ತುರ್ತು ಜೀವ ಉಳಿಸುವ ವಿಧಾನವಾಗಿದ್ದು, ಹೃದಯ ಬಡಿತ ನಿಂತಾಗ ಆ ವ್ಯಕ್ತಿಯ ಅಥವಾ ಪ್ರಾಣಿಯ ಹೃದಯದ ಭಾಗವನ್ನು ಒತ್ತಬೇಕು, ಆ ಮೂಲಕ ಹೃದಯ್ಕಕೆ ಒತ್ತಡ ಹಾಕಬೇಕು. ಈ ವಿಧಾನವನ್ನು ಭಾರತದ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಕಲಿಸಬೇಕು ಎಂದು ಸಾಮಾಜಿಕ ಮಾಧ್ಯಮದಲ್ಲಿ ನೆಟ್ಟಿಗರು ಮನವಿ ಮಾಡಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:25 pm, Fri, 3 June 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು