Viral Video: ಗಜರಾಜ ಬರುವುದನ್ನು ನೋಡಿ ಜನ ದಿಕ್ಕಾಪಾಲು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ನಗರವೊಂದರಲ್ಲಿ ರಾಜಾರೋಷವಾಗಿ ಕಾಡಾನೆಯೊಂದು ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Viral Video: ಗಜರಾಜ ಬರುವುದನ್ನು ನೋಡಿ ಜನ ದಿಕ್ಕಾಪಾಲು
ಬೀದಿಯಲ್ಲಿ ರಾಜಾರೋಷವಾಗಿ ಓಡಾಡಿದ ಗಜರಾಜImage Credit source: Twitter
Follow us
|

Updated on:Mar 11, 2023 | 1:36 PM

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ನಗರವೊಂದರಲ್ಲಿ ರಾಜಾರೋಷವಾಗಿ ಕಾಡಾನೆಯೊಂದು ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಮಾರ್ಚ್​ 9 ರಂದು ಟ್ವಿಟರ್​​ನಲ್ಲಿ ಪೋಸ್ಟ್ ಮಾಡಲಾದ ಈ ವಿಡಿಯೋ ಎರಡೇ ದಿನಗಳಲ್ಲಿ 2.6 ಮಿಲಿಯನ್​​ ವೀಕ್ಷಣೆ ಪಡೆದುಕೊಂಡಿದೆ. ಊರಿಗೆ ಬಂದ ಕಾಡಾನೆಯ ವಿಡಿಯೋ ಬೀದಿ ಬದಿಯ ಕಟ್ಟಡದ ಹೊರಗೆ ಇರಿಸಲಾಗಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ಹೋಳಿ ಆಚರಣೆಯ ವೇಳೆ ಜಪಾನಿ ಯುವತಿಗೆ ಕಿರುಕುಳ, ವಿಡಿಯೋ ವೈರಲ್​​

ಪುಟ್ಟ ಬೀದಿ, ರಸ್ತೆಯ ಎರಡು ಬದಿಗಳಲ್ಲಿ ಗಾಡಿಗಳನ್ನು ಪಾರ್ಕ್​ ಮಾಡಲಾಗಿದೆ. ಜೊತೆಗೆ ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಅಂಗಡಿಯೊಂದರ ಮುಂದೆ ನಿಂತಿರುವುದನ್ನು ಕಾಣಬಹುದು.ಸ್ವಲ್ಪ ಸಮಯದಲ್ಲಿಯೇ ಜನರು ಗಾಬರಿಯಿಂದ ಓಡಲು ಪ್ರಾರಂಭಿಸುತ್ತಾರೆ. ಆ ಸಮಯದಲ್ಲಿಯೇ ಆನೆಯೊಂದು ಅಡ್ಡದಿಡ್ಡಿಯಾಗಿ ರಭಸದಲ್ಲಿ ಬಂದು ಬೀದಿಗೆ ನುಗ್ಗಿದೆ. ಜೊತೆಗೆ ಪಾರ್ಕ್​ ಮಾಡಲಾಗಿದ್ದ ವಾಹನಗಳಿಗೆ ಹಾನಿಗೊಳಿಸಿದೆ. ಈ ಘಟನೆ ಬೀದಿ ಬದಿಯ ಕಟ್ಟಡದ ಹೊರಗೆ ಇರಿಸಲಾಗಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲವು ವರದಿಗಳ ಪ್ರಕಾರ, ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಈ ವಿಡಿಯೋವನ್ನು ಎರಡು ದಿನಗಳ ಹಿಂದೆ (ಮಾರ್ಚ್​ 9) ಟ್ವಿಟರ್​​ನಲ್ಲಿ ಶೇರ್ ಮಾಡಲಾಗಿದೆ. ಪೋಸ್ಟ್ ಮಾಡಿದ ಎರಡೇ ದಿನಗಳಲ್ಲಿ 2.6 ಮಿಲಿಯನ್​​ ವೀಕ್ಷಣೆ ಪಡೆದುಕೊಂಡಿದೆ. 18 ಸಾವಿರ ಲೈಕುಗಳು, 3060 ರೀಟ್ವಿಟ್​​ಗಳನ್ನು ಕಾಣಬಹುದು. ಜೊತೆಗೆ ಸಾಕಷ್ಟು ಕಾಮೆಂಟ್​​​ಗಳನ್ನು ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:35 pm, Sat, 11 March 23

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​