AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ ಕ್ಲಿನಿಕ್ ನಲ್ಲಿ ನಾಯಿಯನ್ನು ಮನಸೋ ಇಚ್ಛೆ ಥಳಿಸಿದ ಪ್ರಕರಣ; ಸಿಬ್ಬಂದಿಗಳ ಬಂಧನ

ಥಾಣೆಯಲ್ಲಿರುವ ಪೆಟ್ ಕ್ಲಿನಿಕ್‌ನಲ್ಲಿ ಇಬ್ಬರು ಸಿಬ್ಬಂದಿಗಳು ಚೌ ಚೌ ತಳಿಯ ನಾಯಿಯನ್ನು ಹೊಡೆದು ಗುದ್ದುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗಾ ಥಾಣೆ ಪೊಲೀಸರು ಇಬ್ಬರು ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ.

ಪೆಟ್ ಕ್ಲಿನಿಕ್ ನಲ್ಲಿ ನಾಯಿಯನ್ನು ಮನಸೋ ಇಚ್ಛೆ ಥಳಿಸಿದ ಪ್ರಕರಣ; ಸಿಬ್ಬಂದಿಗಳ ಬಂಧನ
Vetic clinic thaneImage Credit source: Twitter
ಅಕ್ಷತಾ ವರ್ಕಾಡಿ
|

Updated on:Feb 14, 2024 | 4:32 PM

Share

ಮಹಾರಾಷ್ಟ್ರದ ಥಾಣೆಯ ಆರ್ ಮಾಲ್ ಬಳಿ ಇರುವ ವೆಟಿಕ್ ಪೆಟ್ ಕ್ಲಿನಿಕ್​​​ಗೆ ತನ್ನ ನಾಯಿಯನ್ನು ಗ್ರೂಮಿಂಗ್​​ಗಾಗಿ ಕರೆದುಕೊಂಡು ಬಂದಿದ್ದ ವ್ಯಕ್ತಿ. ಪೆಟ್ ಕ್ಲಿನಿಕ್​​​ನ ಸಿಬ್ಬಂದಿಗೆ ತನ್ನ ಸಾಕು ನಾಯಿಯನ್ನು ಒಪ್ಪಿಸಿ ಹೋಗಿದ್ದ. ಆದರೆ ಪೆಟ್ ಕ್ಲಿನಿಕ್ ನ ಸಿಬ್ಬಂದಿಗಳು ನಾಯಿಯನ್ನು ಮನಸೋ ಇಚ್ಛೆ ಥಳಿಸಿದ್ದಾರೆ. ಇದಲ್ಲದೇ ಈ ಹೀನಾಯ ಕೃತ್ಯವನ್ನು ಮೊಬೈಲ್​ ಫೋನಿನಲ್ಲಿ ಸೆರೆಹಿಡಿದ್ದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗುತ್ತಿದ್ದಂತೆ, ಬಾಲಿವುಡ್ ನಟರು ಸೇರಿದಂತೆ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗಾ ಥಾಣೆ ಪೊಲೀಸರು ಇಬ್ಬರೂ ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಬಂಧಿತರಿಬ್ಬರ ಹೆಸರು ಇನ್ನಷ್ಟೇ ಗೊತ್ತಾಗಬೇಕಿದೆ.

ನಾಯಿಯನ್ನು ಮನಸೋ ಇಚ್ಛೆ ಥಳಿಸಿದ ವಿಡಿಯೋ:

ವೀಡಿಯೊದಲ್ಲಿ, ಪೆಟ್ ಕ್ಲಿನಿಕ್ ಸಿಬ್ಬಂದಿ ಚೌ ಚೌ ತಳಿಯ ನಾಯಿಯ ಮುಖ ಮತ್ತು ಬೆನ್ನಿನ ಮೇಲೆ ಪದೇ ಪದೇ ಗುದ್ದುತ್ತಿರುವುದು ಕಂಡುಬಂದಿದೆ. ಈ ಕೃತ್ಯವನ್ನು ಚಿತ್ರೀಕರಿಸುತ್ತಿರುವ ವ್ಯಕ್ತಿಯೊಬ್ಬರು ನಾಯಿಯ ಮೇಲೆ ಏಟು ಹಾಕುತ್ತಿರುವುದನ್ನು ಕೂಡ ಕಾಣಬಹುದು. ನಂತರ, ನಾಯಿ ಸ್ಟ್ರೆಚರ್‌ನಿಂದ ಕೆಳಗಿಳಿದು ಕೋಣೆಯಿಂದ ಹೊರಗೆ ಹೋಗುತ್ತಿದ್ದಂತೆ, ಸಿಬ್ಬಂದಿ ಒದೆಯುತ್ತಾನೆ. ವೈರಲ್ ಆಗಿರುವ ವಿಡಿಯೋ ಬಾಲಿವುಡ್ ನಟರು ಸೇರಿದಂತೆ ವಿವಿಧ ಜನರಿಂದ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಮೋದಿ ಕಟೌಟ್‌ ತಬ್ಬಿಕೊಂಡು, ಸೊಂಟ ಬಳುಕಿಸುತ್ತಾ ರೀಲ್ಸ್​​ ಮಾಡಿದ ಮಹಿಳೆ

ಪೆಟ್ ಕ್ಲಿನಿಕ್ ಸಿಬ್ಬಂದಿಗಳಿಬ್ಬರ ಬಂಧನ:

ಇಷ್ಟೆಲ್ಲಾ ಘಟನೆ ನಡೆಯುತ್ತಿದ್ದಂತೆ “ಮೊದಲ ಹಂತವಾಗಿ, ನಾವು ತಕ್ಷಣ ಇಬ್ಬರು ಸಿಬ್ಬಂದಿಗಳನ್ನು ವಜಾಗೊಳಿಸಿದ್ದೇವೆ. ಈ ಈ ಹೀನಾಯ ಕೃತ್ಯಕ್ಕೆ ನಾವು ಕ್ಷಮೆಯಾಚಿಸುತ್ತಿದ್ದೇವೆ” ಎಂದು ವೆಟಿಕ್ ವಕ್ತಾರರು ಫ್ರೀ ಪ್ರೆಸ್ ಜರ್ನಲ್‌ಗೆ ತಿಳಿಸಿದ್ದಾರೆ .

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:31 pm, Wed, 14 February 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?