AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ ಕ್ಲಿನಿಕ್ ನಲ್ಲಿ ನಾಯಿಯನ್ನು ಮನಸೋ ಇಚ್ಛೆ ಥಳಿಸಿದ ಪ್ರಕರಣ; ಸಿಬ್ಬಂದಿಗಳ ಬಂಧನ

ಥಾಣೆಯಲ್ಲಿರುವ ಪೆಟ್ ಕ್ಲಿನಿಕ್‌ನಲ್ಲಿ ಇಬ್ಬರು ಸಿಬ್ಬಂದಿಗಳು ಚೌ ಚೌ ತಳಿಯ ನಾಯಿಯನ್ನು ಹೊಡೆದು ಗುದ್ದುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗಾ ಥಾಣೆ ಪೊಲೀಸರು ಇಬ್ಬರು ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ.

ಪೆಟ್ ಕ್ಲಿನಿಕ್ ನಲ್ಲಿ ನಾಯಿಯನ್ನು ಮನಸೋ ಇಚ್ಛೆ ಥಳಿಸಿದ ಪ್ರಕರಣ; ಸಿಬ್ಬಂದಿಗಳ ಬಂಧನ
Vetic clinic thaneImage Credit source: Twitter
ಅಕ್ಷತಾ ವರ್ಕಾಡಿ
|

Updated on:Feb 14, 2024 | 4:32 PM

Share

ಮಹಾರಾಷ್ಟ್ರದ ಥಾಣೆಯ ಆರ್ ಮಾಲ್ ಬಳಿ ಇರುವ ವೆಟಿಕ್ ಪೆಟ್ ಕ್ಲಿನಿಕ್​​​ಗೆ ತನ್ನ ನಾಯಿಯನ್ನು ಗ್ರೂಮಿಂಗ್​​ಗಾಗಿ ಕರೆದುಕೊಂಡು ಬಂದಿದ್ದ ವ್ಯಕ್ತಿ. ಪೆಟ್ ಕ್ಲಿನಿಕ್​​​ನ ಸಿಬ್ಬಂದಿಗೆ ತನ್ನ ಸಾಕು ನಾಯಿಯನ್ನು ಒಪ್ಪಿಸಿ ಹೋಗಿದ್ದ. ಆದರೆ ಪೆಟ್ ಕ್ಲಿನಿಕ್ ನ ಸಿಬ್ಬಂದಿಗಳು ನಾಯಿಯನ್ನು ಮನಸೋ ಇಚ್ಛೆ ಥಳಿಸಿದ್ದಾರೆ. ಇದಲ್ಲದೇ ಈ ಹೀನಾಯ ಕೃತ್ಯವನ್ನು ಮೊಬೈಲ್​ ಫೋನಿನಲ್ಲಿ ಸೆರೆಹಿಡಿದ್ದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗುತ್ತಿದ್ದಂತೆ, ಬಾಲಿವುಡ್ ನಟರು ಸೇರಿದಂತೆ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗಾ ಥಾಣೆ ಪೊಲೀಸರು ಇಬ್ಬರೂ ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಬಂಧಿತರಿಬ್ಬರ ಹೆಸರು ಇನ್ನಷ್ಟೇ ಗೊತ್ತಾಗಬೇಕಿದೆ.

ನಾಯಿಯನ್ನು ಮನಸೋ ಇಚ್ಛೆ ಥಳಿಸಿದ ವಿಡಿಯೋ:

ವೀಡಿಯೊದಲ್ಲಿ, ಪೆಟ್ ಕ್ಲಿನಿಕ್ ಸಿಬ್ಬಂದಿ ಚೌ ಚೌ ತಳಿಯ ನಾಯಿಯ ಮುಖ ಮತ್ತು ಬೆನ್ನಿನ ಮೇಲೆ ಪದೇ ಪದೇ ಗುದ್ದುತ್ತಿರುವುದು ಕಂಡುಬಂದಿದೆ. ಈ ಕೃತ್ಯವನ್ನು ಚಿತ್ರೀಕರಿಸುತ್ತಿರುವ ವ್ಯಕ್ತಿಯೊಬ್ಬರು ನಾಯಿಯ ಮೇಲೆ ಏಟು ಹಾಕುತ್ತಿರುವುದನ್ನು ಕೂಡ ಕಾಣಬಹುದು. ನಂತರ, ನಾಯಿ ಸ್ಟ್ರೆಚರ್‌ನಿಂದ ಕೆಳಗಿಳಿದು ಕೋಣೆಯಿಂದ ಹೊರಗೆ ಹೋಗುತ್ತಿದ್ದಂತೆ, ಸಿಬ್ಬಂದಿ ಒದೆಯುತ್ತಾನೆ. ವೈರಲ್ ಆಗಿರುವ ವಿಡಿಯೋ ಬಾಲಿವುಡ್ ನಟರು ಸೇರಿದಂತೆ ವಿವಿಧ ಜನರಿಂದ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಮೋದಿ ಕಟೌಟ್‌ ತಬ್ಬಿಕೊಂಡು, ಸೊಂಟ ಬಳುಕಿಸುತ್ತಾ ರೀಲ್ಸ್​​ ಮಾಡಿದ ಮಹಿಳೆ

ಪೆಟ್ ಕ್ಲಿನಿಕ್ ಸಿಬ್ಬಂದಿಗಳಿಬ್ಬರ ಬಂಧನ:

ಇಷ್ಟೆಲ್ಲಾ ಘಟನೆ ನಡೆಯುತ್ತಿದ್ದಂತೆ “ಮೊದಲ ಹಂತವಾಗಿ, ನಾವು ತಕ್ಷಣ ಇಬ್ಬರು ಸಿಬ್ಬಂದಿಗಳನ್ನು ವಜಾಗೊಳಿಸಿದ್ದೇವೆ. ಈ ಈ ಹೀನಾಯ ಕೃತ್ಯಕ್ಕೆ ನಾವು ಕ್ಷಮೆಯಾಚಿಸುತ್ತಿದ್ದೇವೆ” ಎಂದು ವೆಟಿಕ್ ವಕ್ತಾರರು ಫ್ರೀ ಪ್ರೆಸ್ ಜರ್ನಲ್‌ಗೆ ತಿಳಿಸಿದ್ದಾರೆ .

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:31 pm, Wed, 14 February 24

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ