AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಾಕು ತೋರಿಸಿ ಹೆದರಿಸಿದ ಕಳ್ಳನನ್ನು ಅಂಗಡಿಯೊಳಗೆ ಬಂಧಿಸಿದ ಮಾಲೀಕ

ಚಾಕು ಹಿಡಿದು ಬೆದರಿಸಿದ ದರೋಡೆಕೋರನನ್ನು ಅಂಗಡಿಯ ಮಾಲೀಕ ಉಪಾಯದಿಂದ ಅಂಗಡಿಯೊಳಗೆ ಬಂಧಿಸಿದ್ದಾನೆ. ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗಾ ಈ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

Viral Video: ಚಾಕು ತೋರಿಸಿ ಹೆದರಿಸಿದ ಕಳ್ಳನನ್ನು ಅಂಗಡಿಯೊಳಗೆ ಬಂಧಿಸಿದ ಮಾಲೀಕ
ಚಾಕು ತೋರಿಸಿ ಹೆದರಿಸಿದ ಕಳ್ಳನನ್ನು ಅಂಗಡಿಯೊಳಗೆ ಬಂಧಿಸಿದ ಮಾಲೀಕ Image Credit source: Facebook
ಅಕ್ಷತಾ ವರ್ಕಾಡಿ
|

Updated on: Jun 22, 2023 | 3:59 PM

Share

ಇತ್ತೀಚೆಗೆ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಈ ಕುರಿತಾದ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿರುತ್ತವೆ. ಅಂತಹ ಘಟನೆಗಳಿಗೆ ಪೂರಕ ಎಂಬಂತೆ ಇಲ್ಲೊಂದು ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಚರ್ಚೆಯಲ್ಲಿದೆ.  ಚಾಕು ಹಿಡಿದು ಬೆದರಿಸಿದ ದರೋಡೆಕೋರನನ್ನು ಅಂಗಡಿಯ ಮಾಲೀಕ ಉಪಾಯದಿಂದ ಅಂಗಡಿಯೊಳಗೆ ಬಂಧಿಸಿದ್ದಾನೆ. ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗಾ ಈ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಅಂಗಡಿ ಮಾಲೀಕನ ಸಮಯ ಪ್ರಜ್ಞೆ ಹಾಗೂ ಧೈರ್ಯಕ್ಕೆ ನೆಟ್ಟಿಗರಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ.

ವಿಡಿಯೋದಲ್ಲಿ ದರೋಡೆಕೋರ ಜನ ಸಾಮಾನ್ಯರಂತೆ ಸಾಮಾಗ್ರಿ ಖರೀದಿಸಲು ಬಂದಿರುವುದನ್ನು ಕಾಣಬಹುದು. ಕೆಲಹೊತ್ತಿನಲ್ಲೇ ಬಿಲ್​​ ಕೌಂಟರ್​​​​ಗೆ ಬಿಲ್​ ಮಾಡಲು ಬಂದಿದ್ದಾನೆ. ಇದಕ್ಕಿದ್ದ ಹಾಗೆ ಜೇಬಿನಿಂದ ಚಾಕು ತೆಗೆಯುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಜೊತೆಗೆ ಅಂಗಡಿ ಮಾಲೀಕನಿಗೆ ಚಾಕು ತೋರಿಸಿ ಹೆದರಿಸಿರುವುದು ಕಾಣಬಹುದು. ಸ್ಪಲ್ಪ ಹೊತ್ತಿನಲ್ಲೇ ಅಂಗಡಿ ಮಾಲೀಕ ಹೊರಗೆ ಓಡಿ ಅಂಗಡಿಯ ಬಾಗಿಲು ಹಾಕಿದ್ದಾನೆ. ತಪ್ಪಿಸಲು ಯತ್ನಿಸಿದ ಕಳ್ಳ ಬಾಗಿಲಿನ ಎಡೆಯಲ್ಲಿ ಸಿಕ್ಕಿ ಹಾಕಿಕೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ಓದಿ: ಟಿವಿಯಲ್ಲಿ ಫುಟ್ಬಾಲ್ ಪಂದ್ಯ ವೀಕ್ಷಿಸುತ್ತ ಈ ಬೆಕ್ಕಿನ ಮರಿ ಮಾಡಿದೇನು ನೋಡಿ? ಈ ಬೆಕ್ಕು ಅತ್ಯುತ್ತಮ ಗೋಲ್ ಕೀಪರ್ ಎಂದ ನೆಟ್ಟಿಗರು

ವೀಡಿಯೊವನ್ನು ಜೂನ್ 15 ರಂದು ಪೋಸ್ಟ್ ಮಾಡಲಾಗಿದೆ. ಹಂಚಿಕೊಂಡ ನಂತರ, ವಿಡಿಯೋ ಸುಮಾರು 46,000 ವೀಕ್ಷಣೆಗಳನ್ನು ಪಡೆದುಕೊಂಡಿದೆ. ಜೊತೆಗೆ 1,100 ಕ್ಕೂ ಹೆಚ್ಚು ಲೈಕುಗಳನ್ನು ಕಾಣಬಹುದು. ವೀಡಿಯೋಗೆ ಸಾಕಷ್ಟು ನೆಟ್ಟಿಗರು ಪ್ರತಿಕ್ರಿಯಿಸಿದ್ದು, ಅಂಗಡಿ ಮಾಲೀಕನ ಧೈರ್ಯಕ್ಕೆ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!