AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಾಕು ತೋರಿಸಿ ಹೆದರಿಸಿದ ಕಳ್ಳನನ್ನು ಅಂಗಡಿಯೊಳಗೆ ಬಂಧಿಸಿದ ಮಾಲೀಕ

ಚಾಕು ಹಿಡಿದು ಬೆದರಿಸಿದ ದರೋಡೆಕೋರನನ್ನು ಅಂಗಡಿಯ ಮಾಲೀಕ ಉಪಾಯದಿಂದ ಅಂಗಡಿಯೊಳಗೆ ಬಂಧಿಸಿದ್ದಾನೆ. ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗಾ ಈ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

Viral Video: ಚಾಕು ತೋರಿಸಿ ಹೆದರಿಸಿದ ಕಳ್ಳನನ್ನು ಅಂಗಡಿಯೊಳಗೆ ಬಂಧಿಸಿದ ಮಾಲೀಕ
ಚಾಕು ತೋರಿಸಿ ಹೆದರಿಸಿದ ಕಳ್ಳನನ್ನು ಅಂಗಡಿಯೊಳಗೆ ಬಂಧಿಸಿದ ಮಾಲೀಕ Image Credit source: Facebook
ಅಕ್ಷತಾ ವರ್ಕಾಡಿ
|

Updated on: Jun 22, 2023 | 3:59 PM

Share

ಇತ್ತೀಚೆಗೆ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಈ ಕುರಿತಾದ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿರುತ್ತವೆ. ಅಂತಹ ಘಟನೆಗಳಿಗೆ ಪೂರಕ ಎಂಬಂತೆ ಇಲ್ಲೊಂದು ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಚರ್ಚೆಯಲ್ಲಿದೆ.  ಚಾಕು ಹಿಡಿದು ಬೆದರಿಸಿದ ದರೋಡೆಕೋರನನ್ನು ಅಂಗಡಿಯ ಮಾಲೀಕ ಉಪಾಯದಿಂದ ಅಂಗಡಿಯೊಳಗೆ ಬಂಧಿಸಿದ್ದಾನೆ. ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗಾ ಈ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಅಂಗಡಿ ಮಾಲೀಕನ ಸಮಯ ಪ್ರಜ್ಞೆ ಹಾಗೂ ಧೈರ್ಯಕ್ಕೆ ನೆಟ್ಟಿಗರಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ.

ವಿಡಿಯೋದಲ್ಲಿ ದರೋಡೆಕೋರ ಜನ ಸಾಮಾನ್ಯರಂತೆ ಸಾಮಾಗ್ರಿ ಖರೀದಿಸಲು ಬಂದಿರುವುದನ್ನು ಕಾಣಬಹುದು. ಕೆಲಹೊತ್ತಿನಲ್ಲೇ ಬಿಲ್​​ ಕೌಂಟರ್​​​​ಗೆ ಬಿಲ್​ ಮಾಡಲು ಬಂದಿದ್ದಾನೆ. ಇದಕ್ಕಿದ್ದ ಹಾಗೆ ಜೇಬಿನಿಂದ ಚಾಕು ತೆಗೆಯುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಜೊತೆಗೆ ಅಂಗಡಿ ಮಾಲೀಕನಿಗೆ ಚಾಕು ತೋರಿಸಿ ಹೆದರಿಸಿರುವುದು ಕಾಣಬಹುದು. ಸ್ಪಲ್ಪ ಹೊತ್ತಿನಲ್ಲೇ ಅಂಗಡಿ ಮಾಲೀಕ ಹೊರಗೆ ಓಡಿ ಅಂಗಡಿಯ ಬಾಗಿಲು ಹಾಕಿದ್ದಾನೆ. ತಪ್ಪಿಸಲು ಯತ್ನಿಸಿದ ಕಳ್ಳ ಬಾಗಿಲಿನ ಎಡೆಯಲ್ಲಿ ಸಿಕ್ಕಿ ಹಾಕಿಕೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ಓದಿ: ಟಿವಿಯಲ್ಲಿ ಫುಟ್ಬಾಲ್ ಪಂದ್ಯ ವೀಕ್ಷಿಸುತ್ತ ಈ ಬೆಕ್ಕಿನ ಮರಿ ಮಾಡಿದೇನು ನೋಡಿ? ಈ ಬೆಕ್ಕು ಅತ್ಯುತ್ತಮ ಗೋಲ್ ಕೀಪರ್ ಎಂದ ನೆಟ್ಟಿಗರು

ವೀಡಿಯೊವನ್ನು ಜೂನ್ 15 ರಂದು ಪೋಸ್ಟ್ ಮಾಡಲಾಗಿದೆ. ಹಂಚಿಕೊಂಡ ನಂತರ, ವಿಡಿಯೋ ಸುಮಾರು 46,000 ವೀಕ್ಷಣೆಗಳನ್ನು ಪಡೆದುಕೊಂಡಿದೆ. ಜೊತೆಗೆ 1,100 ಕ್ಕೂ ಹೆಚ್ಚು ಲೈಕುಗಳನ್ನು ಕಾಣಬಹುದು. ವೀಡಿಯೋಗೆ ಸಾಕಷ್ಟು ನೆಟ್ಟಿಗರು ಪ್ರತಿಕ್ರಿಯಿಸಿದ್ದು, ಅಂಗಡಿ ಮಾಲೀಕನ ಧೈರ್ಯಕ್ಕೆ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ