AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸಂತೋಷವನ್ನು ನೀವು ಇತರರಿಂದ ನಿರೀಕ್ಷಿಸಬೇಕಿಲ್ಲ, ಈ ವಿಡಿಯೋ ನೋಡಿ

ಇತ್ತೀಚೆಗಷ್ಟೆ ಮುದ್ದಾದ ಶ್ವಾನದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ತನ್ನೊಂದಿಗೆ ಆಡಲು ಯಾರಿಲ್ಲ ಎಂಬ ಬೇಜಾರು ಇದಕ್ಕಿಲ್ಲ. ಬದಲಾಗಿ ತನ್ನ ಪಾಡಿಗೆ ಚೆಂಡಿನೊಂದಿಗೆ ಮುದ್ದಾಗಿ ಆಡುತ್ತಿದೆ. ಈ ಮುದ್ದಾದ ವಿಡಿಯೋಗೆ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಇಲ್ಲಿದೆ ನೋಡಿ ವೈರಲ್​ ವಿಡಿಯೋ.

ನಿಮ್ಮ ಸಂತೋಷವನ್ನು ನೀವು ಇತರರಿಂದ ನಿರೀಕ್ಷಿಸಬೇಕಿಲ್ಲ, ಈ ವಿಡಿಯೋ ನೋಡಿ
ಶ್ವಾನದ ಮುದ್ದಾದ ವೈರಲ್​ ವಿಡಿಯೋImage Credit source: Twitter
ಅಕ್ಷತಾ ವರ್ಕಾಡಿ
|

Updated on: Apr 20, 2023 | 12:33 PM

Share

ಪ್ರತೀ ಬಾರಿ ನಿಮ್ಮ ಸಂತೋಷಕ್ಕಾಗಿ ನೀವು ಇತರರನ್ನು ಅವಲಂಬಿಸಬೇಕಿಲ್ಲ. ನಿಮ್ಮನ್ನು ನೀವು ಸಂತೋಷವಾಗಿಟ್ಟು ಕೊಳ್ಳುವುದು ನಿಮ್ಮದೇ ಜವಾಬ್ದಾರಿಯಾಗಿದೆ. ಇತರರಿಂದ ಸಂತೋಷವನ್ನು ಬಯಸುವುದು ದೊಡ್ಡ ಮೂರ್ಖತನ. ಯಾಕೆಂದರೆ ಅತಿಯಾದ ನಿರೀಕ್ಷೆ ನೋವುಂಟು ಮಾಡಬಹುದು. ಇತ್ತೀಚೆಗಷ್ಟೆ ಮುದ್ದಾದ ಶ್ವಾನದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ತನ್ನೊಂದಿಗೆ ಆಡಲು ಯಾರಿಲ್ಲ ಎಂಬ ಬೇಜಾರು ಇದಕ್ಕಿಲ್ಲ. ಬದಲಾಗಿ ತನ್ನ ಪಾಡಿಗೆ ಚೆಂಡಿನೊಂದಿಗೆ ಮುದ್ದಾಗಿ ಆಡುತ್ತಿದೆ. ಈ ಮುದ್ದಾದ ವಿಡಿಯೋಗೆ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಇಲ್ಲಿದೆ ನೋಡಿ ವೈರಲ್​ ವಿಡಿಯೋ.

ವಿಡಿಯೋದಲ್ಲಿ  ಸಾರ್ವಜನಿಕ ಪ್ರದೇಶದಲ್ಲಿ ಮುದ್ದಾದ ಶ್ವಾನವೊಂದು ಆಡುತ್ತಿರುವುದು ಕಂಡುಬರುತ್ತಿದೆ. ಮೆಟ್ಟಿಲುಗಳ ಮೇಲಿನಿಂದ ಚೆಂಡೊಂದನ್ನು ಕೆಳಕ್ಕೆ ಬಿಸಾಕಿ, ಮತ್ತೇ ಅದೇ ಅದೇ ಚೆಂಡನ್ನು ಮೇಲಕ್ಕೆ ತಂದು, ಮತ್ತೆ ಅದೇ ರೀತಿ ಮೆಟ್ಟಿಲಿನಿಂದ ಕೆಳಗೆ ಹಾಕಿ ಒಂಟಿಯಾಗಿ ತನ್ನ ಪಾಡಿಗೆ ಆಡುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ಸೋಶಿಯಲ್​​ ಮಿಡಿಯಾಗಳಲ್ಲಿ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ಬಳಕೆದಾರರು ಎಷ್ಟು ಮುದ್ದಾಗಿದೆ, ಒಂದು ಉತ್ತಮ ಸಂದೇಶ ನೀಡುತ್ತಿದೆ ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ಮಕ್ಕಳನ್ನು ದುಷ್ಟ ಶಕ್ತಿಯಿಂದ ರಕ್ಷಿಸಲು ಶ್ವಾನಗಳೊಂದಿಗೆ ವಿವಾಹ

ಎರಡು ದಿನಗಳ ಹಿಂದೆಯಷ್ಟೇ ಈ ವಿಡಿಯೋವನ್ನು ಶೇರ್ ಮಾಡಲಾಗಿದೆ. ಪೋಸ್ಟ್ ಮಾಡಿದ ನಂತರ, ಇದನ್ನು 21,000 ಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ. ಜೊತೆಗೆ ಸಾಕಷ್ಟು ಲೈಕು, ಕಾಮೆಂಟ್​​​ಗಳನ್ನು ಕಾಣಬಹುದು. ಇದು ನಮ್ಮ ಸಂತೋಷಕ್ಕೆ ನಾವೇ ಜವಾಬ್ದಾರರು ಎಂದು ಸಾಬೀತುಪಡಿಸುತ್ತದೆ, ನಮ್ಮನ್ನು ಸಂತೋಷಪಡಿಸಲು ಯಾರೂ ಅಗತ್ಯವಿಲ್ಲ ಎಂದು ಬಳಕೆದಾರರೊಬ್ಬರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ. ನಾವು ನಮ್ಮ ಜೀವನವನ್ನು ಹೇಗೆ ಬದುಕಬೇಕು ಎಂಬುದನ್ನು ಈ ವಿಡಿಯೋ ತಿಳಿಸಿಕೊಡುತ್ತಿದೆ ಎಂದು ಕಾಮೆಂಟ್​​ನಲ್ಲಿ ಮತ್ತೊಬ್ಬ ಬಳಕೆದಾರರು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ