AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಬೇಗ ಬೇಗ ಕಿಟಕಿ ಹತ್ರ ಬನ್ನಿ, ಇಲ್ಲಾಂದ್ರೆ ರೈಲಿನಲ್ಲಿ ಸೀಟ್ ಸಿಗಲ್ಲ, ವಿಡಿಯೋ ವೈರಲ್

ಭಾರತೀಯ ರೈಲ್ವೆ ಹಾಗೂ ರೈಲ್ವೆ ಪ್ರಯಾಣಿಕರಿಗೆ ಸಂಬಂಧಿಸಿದ ಕೆಲವೊಂದು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಕಾಣಸಿಗುತ್ತಿರುತ್ತವೆ. ಇದೀಗ ಅಂತಹದೊಂದು ವಿಡಿಯೋ ವೈರಲ್ ಆಗಿದ್ದು, ವ್ಯಕ್ತಿಯೊಬ್ಬನು, ಪ್ರಯಾಣಿಕರನ್ನು ಕಿಟಕಿಯ ಮೂಲಕ ಬೋಗಿಯೊಳಗೆ ತಳ್ಳುತ್ತಿದ್ದಾನೆ. ಈ ವಿಡಿಯೋ ನೋಡಿದ ನೆಟ್ಟಿಗರು ಕೂಲಿ ಕಾರ್ಮಿಕನ ಬುದ್ಧಿವಂತಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಯಿನಂದಾ
| Edited By: |

Updated on: Nov 16, 2024 | 6:20 PM

Share

ಸಾಮಾಜಿಕ ಜಾಲತಾಣದಲ್ಲಿ ರೈಲ್ವೆ ಸ್ಟೇಷನ್, ರೈಲಿನಲ್ಲಿ ನಡೆಯುವ ಕೆಲವು ಚಿತ್ರ ವಿಚಿತ್ರ ಘಟನೆಗಳ ಬಗೆಗಿನ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಕೆಲವೊಮ್ಮೆ ಪ್ರಯಾಣಿಕರ ನಡುವಿನ ವಾದ ವಿವಾದಗಳು, ಸೀಟಿಗಾಗಿ ನಡೆಯುವ ಜಗಳಗಳು, ರೀಲ್ಸ್ ಹುಚ್ಚಾಟ ಇಂತಹ ಹತ್ತಾರು ವಿಡಿಯೋಗಳು ನೆಟ್ಟಿಗರ ಗಮನ ಸೆಳೆಯುತ್ತದೆ. ಕೆಲವೊಮ್ಮೆ ಜನಜಂಗುಳಿಯಿದ್ದಾಗ ಸೀಟು ಸಿಗಲ್ಲ ಎನ್ನುವ ಕಾರಣಕ್ಕೆ ಪ್ರಯಾಣಿಕರು ಕಿಟಕಿ ಮೂಲಕ ರೈಲು, ಬಸ್ಸನ್ನು ಹತ್ತುವುದನ್ನು ನೋಡಬಹುದು. ಆದರೆ ಇಲ್ಲೊಬ್ಬ ಕೂಲಿ ಕಾರ್ಮಿಕನು ಪ್ರಯಾಣಿಕರನ್ನು ಕಿಟಕಿಯ ಮೂಲಕ ರೈಲ್ವೆ ಬೋಗಿಯೊಳಗೆ ತಳ್ಳುತ್ತಿದ್ದು, ದೃಶ್ಯವೂ ನೆಟ್ಟಿಗರ ಗಮನ ಸೆಳೆದಿದೆ.

Hasna Zaroori Hai ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಕೂಲಿ ನಂಬರ್ ಒನ್ ಎಂದು ಶೀರ್ಷಿಕೆ ನೀಡಲಾಗಿದೆ. ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು, ರೈಲ್ವೆ ಪ್ರಯಾಣಿಕರನ್ನು ಕಿಟಕಿಯ ಮೂಲಕ ಹತ್ತಿಸುವುದನ್ನು ನೋಡಬಹುದು. ಸ್ವತಃ ತಾನೇ ಪ್ರಯಾಣಿಕರನ್ನು ಮೇಲೆತ್ತಿ ಕಿಟಕಿಯ ಮೂಲಕ ಬೋಗಿಯೊಳಗೆ ತಳ್ಳುತ್ತಿದ್ದಾನೆ. ಅಷ್ಟೇ ಪ್ರಯಾಣಿಕರಿಗೆ ಸಂಬಂಧ ಪಟ್ಟ ಲಗೇಜ್ ಬ್ಯಾಗ್ ಗಳನ್ನು ಕಿಟಕಿಯಿಂದಲೇ ಒಳಗೆ ಹಾಕುತ್ತಿದ್ದಾನೆ.

ಇದನ್ನೂ ಓದಿ: ‘ಬ್ರ್ಯಾಂಡ್ ಬೆಂಗಳೂರು’ ಥೀಮ್ ಗೆ ತದ್ವಿರುದ್ಧ ಬೆಂಗಳೂರ್ ರೋಡ್, ರಸ್ತೆಗುಂಡಿಗಳಿಂದ ವಾಹನಗಳು ಪಲ್ಟಿ, ವಿಡಿಯೋ ವೈರಲ್

ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ, ಒಂದೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ಈ ವಿಡಿಯೋಗೆ ನೆಟ್ಟಿಗರು ಕಾಮೆಂಟ್ ಗಳನ್ನು ಮಾಡಿದ್ದು ಬಳಕೆದಾರರೊಬ್ಬರು, ‘ಶಕ್ತಿಶಾಲಿ ಕೂಲಿ ಕಾರ್ಮಿಕ’ ಎಂದಿದ್ದಾರೆ. ಮತ್ತೊಬ್ಬರು, ‘ಈ ವ್ಯಕ್ತಿಗೆ ನ್ಯಾಷನಲ್ ಅವಾರ್ಡ್ ನೀಡಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಸೂಪರ್, ಸ್ಮಾರ್ಟ್ ವರ್ಕ್ ಎಂದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು