Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಬೇಗ ಬೇಗ ಕಿಟಕಿ ಹತ್ರ ಬನ್ನಿ, ಇಲ್ಲಾಂದ್ರೆ ರೈಲಿನಲ್ಲಿ ಸೀಟ್ ಸಿಗಲ್ಲ, ವಿಡಿಯೋ ವೈರಲ್

ಭಾರತೀಯ ರೈಲ್ವೆ ಹಾಗೂ ರೈಲ್ವೆ ಪ್ರಯಾಣಿಕರಿಗೆ ಸಂಬಂಧಿಸಿದ ಕೆಲವೊಂದು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಕಾಣಸಿಗುತ್ತಿರುತ್ತವೆ. ಇದೀಗ ಅಂತಹದೊಂದು ವಿಡಿಯೋ ವೈರಲ್ ಆಗಿದ್ದು, ವ್ಯಕ್ತಿಯೊಬ್ಬನು, ಪ್ರಯಾಣಿಕರನ್ನು ಕಿಟಕಿಯ ಮೂಲಕ ಬೋಗಿಯೊಳಗೆ ತಳ್ಳುತ್ತಿದ್ದಾನೆ. ಈ ವಿಡಿಯೋ ನೋಡಿದ ನೆಟ್ಟಿಗರು ಕೂಲಿ ಕಾರ್ಮಿಕನ ಬುದ್ಧಿವಂತಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Nov 16, 2024 | 6:20 PM

ಸಾಮಾಜಿಕ ಜಾಲತಾಣದಲ್ಲಿ ರೈಲ್ವೆ ಸ್ಟೇಷನ್, ರೈಲಿನಲ್ಲಿ ನಡೆಯುವ ಕೆಲವು ಚಿತ್ರ ವಿಚಿತ್ರ ಘಟನೆಗಳ ಬಗೆಗಿನ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಕೆಲವೊಮ್ಮೆ ಪ್ರಯಾಣಿಕರ ನಡುವಿನ ವಾದ ವಿವಾದಗಳು, ಸೀಟಿಗಾಗಿ ನಡೆಯುವ ಜಗಳಗಳು, ರೀಲ್ಸ್ ಹುಚ್ಚಾಟ ಇಂತಹ ಹತ್ತಾರು ವಿಡಿಯೋಗಳು ನೆಟ್ಟಿಗರ ಗಮನ ಸೆಳೆಯುತ್ತದೆ. ಕೆಲವೊಮ್ಮೆ ಜನಜಂಗುಳಿಯಿದ್ದಾಗ ಸೀಟು ಸಿಗಲ್ಲ ಎನ್ನುವ ಕಾರಣಕ್ಕೆ ಪ್ರಯಾಣಿಕರು ಕಿಟಕಿ ಮೂಲಕ ರೈಲು, ಬಸ್ಸನ್ನು ಹತ್ತುವುದನ್ನು ನೋಡಬಹುದು. ಆದರೆ ಇಲ್ಲೊಬ್ಬ ಕೂಲಿ ಕಾರ್ಮಿಕನು ಪ್ರಯಾಣಿಕರನ್ನು ಕಿಟಕಿಯ ಮೂಲಕ ರೈಲ್ವೆ ಬೋಗಿಯೊಳಗೆ ತಳ್ಳುತ್ತಿದ್ದು, ದೃಶ್ಯವೂ ನೆಟ್ಟಿಗರ ಗಮನ ಸೆಳೆದಿದೆ.

Hasna Zaroori Hai ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಕೂಲಿ ನಂಬರ್ ಒನ್ ಎಂದು ಶೀರ್ಷಿಕೆ ನೀಡಲಾಗಿದೆ. ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು, ರೈಲ್ವೆ ಪ್ರಯಾಣಿಕರನ್ನು ಕಿಟಕಿಯ ಮೂಲಕ ಹತ್ತಿಸುವುದನ್ನು ನೋಡಬಹುದು. ಸ್ವತಃ ತಾನೇ ಪ್ರಯಾಣಿಕರನ್ನು ಮೇಲೆತ್ತಿ ಕಿಟಕಿಯ ಮೂಲಕ ಬೋಗಿಯೊಳಗೆ ತಳ್ಳುತ್ತಿದ್ದಾನೆ. ಅಷ್ಟೇ ಪ್ರಯಾಣಿಕರಿಗೆ ಸಂಬಂಧ ಪಟ್ಟ ಲಗೇಜ್ ಬ್ಯಾಗ್ ಗಳನ್ನು ಕಿಟಕಿಯಿಂದಲೇ ಒಳಗೆ ಹಾಕುತ್ತಿದ್ದಾನೆ.

ಇದನ್ನೂ ಓದಿ: ‘ಬ್ರ್ಯಾಂಡ್ ಬೆಂಗಳೂರು’ ಥೀಮ್ ಗೆ ತದ್ವಿರುದ್ಧ ಬೆಂಗಳೂರ್ ರೋಡ್, ರಸ್ತೆಗುಂಡಿಗಳಿಂದ ವಾಹನಗಳು ಪಲ್ಟಿ, ವಿಡಿಯೋ ವೈರಲ್

ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ, ಒಂದೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ಈ ವಿಡಿಯೋಗೆ ನೆಟ್ಟಿಗರು ಕಾಮೆಂಟ್ ಗಳನ್ನು ಮಾಡಿದ್ದು ಬಳಕೆದಾರರೊಬ್ಬರು, ‘ಶಕ್ತಿಶಾಲಿ ಕೂಲಿ ಕಾರ್ಮಿಕ’ ಎಂದಿದ್ದಾರೆ. ಮತ್ತೊಬ್ಬರು, ‘ಈ ವ್ಯಕ್ತಿಗೆ ನ್ಯಾಷನಲ್ ಅವಾರ್ಡ್ ನೀಡಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಸೂಪರ್, ಸ್ಮಾರ್ಟ್ ವರ್ಕ್ ಎಂದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎಕ್ಸ್​ಪೋ ಉದ್ಘಾಟಿಸಿದ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್​ಡಿ
ಎಕ್ಸ್​ಪೋ ಉದ್ಘಾಟಿಸಿದ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್​ಡಿ
ವಕ್ಫ್ ಪ್ರತಿಭಟನೆ;ಬಂಗಾಳದ ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಜನರ ಬಂಧನ
ವಕ್ಫ್ ಪ್ರತಿಭಟನೆ;ಬಂಗಾಳದ ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಜನರ ಬಂಧನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ನಟ ಶಿವರಾಜ್ ಕುಮಾರ್
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ನಟ ಶಿವರಾಜ್ ಕುಮಾರ್
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್