AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲು ಬಂದ ಶಾಸಕನಿಗೆ ಕಪಾಳಮೋಕ್ಷ ಮಾಡಿದ ಮಹಿಳೆ

ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲು ಶಾಸಕ ಈಶ್ವರ್ ಸಿಂಗ್‌ ಗ್ರಾಮಕ್ಕೆ ಭೇಟಿ ನೀಡಿರುವ ವೇಳೆ ಮಹಿಳೆಯೊಬ್ಬರು ಶಾಸಕನಿಗೆ ಕಪಾಳಮೋಕ್ಷ ಮಾಡಿದ್ದು, ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲು ಬಂದ ಶಾಸಕನಿಗೆ ಕಪಾಳಮೋಕ್ಷ ಮಾಡಿದ ಮಹಿಳೆ
ಶಾಸಕನಿಗೆ ಕಪಾಳಮೋಕ್ಷ ಮಾಡಿದ ಮಹಿಳೆImage Credit source: Twitter
Follow us
ಅಕ್ಷತಾ ವರ್ಕಾಡಿ
|

Updated on: Jul 13, 2023 | 11:45 AM

ಹರಿಯಾಣ: ಕಳೆದ ಕೆಲವು ದಿನಗಳಿಂದ ಉತ್ತರ ಭಾರತದಾದ್ಯಂತ ಭಾರೀ ಮಳೆಯಾಗಿದ್ದು, ಹಠಾತ್​​ ಭೂಕುಸಿತ, ಪ್ರವಾಹಗಳು ಸಂಭವಿಸಿದೆ. ಈ ಹಿನ್ನೆಯಲ್ಲಿ ಹರಿಯಾಣದ ಕೈತಾಲ್​​​ನ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲು ಆ ಕ್ಷೇತ್ರದ ಜೆಜೆಪಿ ಶಾಸಕ ಈಶ್ವರ್ ಸಿಂಗ್‌ ಗ್ರಾಮಕ್ಕೆ ಭೇಟಿ ನೀಡಿರುವ ವೇಳೆ ಮಹಿಳೆಯೊಬ್ಬರು ಶಾಸಕನಿಗೆ ಕಪಾಳಮೋಕ್ಷ ಮಾಡಿದ್ದು, ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಂಜಾಬ್ ಮತ್ತು ಹರಿಯಾಣದ ಹಲವಾರು ಗ್ರಾಮಗಳು ಬಿಟ್ಟು ಬಿಡದೇ ಸುರಿದ ಮಳೆಯಿಂದಾಗಿ ಸಾಕಷ್ಟು ಹಾನಿಗೊಳಗಾಗಿದೆ. ಈ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಹಲವು ಭಾಗಗಳು ಮುಳುಗಡೆಯಾಗಿದೆ. ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಈಗಾಗಲೇ ಕೋಪಗೊಂಡಿದ್ದ ಮಹಿಳೆ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲು ಶಾಸಕರು ಬರುತ್ತಿದ್ದಂತೆ ಶಾಸಕರನ್ನು ಶಪಿಸುತ್ತಾ ಸಾರ್ವಜನಿಕರ ಮುಂದೆಯೇ ಹೊಡೆದಿದ್ದಾರೆ. “ನೀನು ಈಗ ಯಾಕೆ ಬಂದೆ?” ಎಂದು ಮಹಿಳೆ ಹೇಳುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಧಾರಾಕಾರ ಮಳೆ; ವಿಡಿಯೋ ಕಾಲ್​​ ಮೂಲಕ ನೆರವೇರಿದ ಮದುವೆ

ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯಿಸಿದ ಶಾಸಕ ಈಶ್ವರ್ ಸಿಂಗ್‌ ‘ಮಹಿಳೆ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಮಹಿಳೆ ಸಾಕಷ್ಟು ನೊಂದಿದ್ದರಿಂದ ನನ್ನ ಮೇಲೆ ಕೋಪಗೊಂಡಿದ್ದರು’ ಎಂದು ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿ
ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿ
ಅಂಥ ಟ್ರಿಕ್ಸ್ ನನ್ನ ಹತ್ರ ಬೇಡ: ಮಾಧ್ಯಮಗಳ ಎದುರು ಶಿವರಾಜ್​ಕುಮಾರ್ ಗರಂ
ಅಂಥ ಟ್ರಿಕ್ಸ್ ನನ್ನ ಹತ್ರ ಬೇಡ: ಮಾಧ್ಯಮಗಳ ಎದುರು ಶಿವರಾಜ್​ಕುಮಾರ್ ಗರಂ
ಸುರೇಶ್ ರೈನಾಗೆ ಓಂ ಸಿನಿಮಾ ರೀತಿ ಲಾಂಗ್ ಹಿಡಿಯೋದು ಕಲಿಸಿದ ಶಿವಣ್ಣ
ಸುರೇಶ್ ರೈನಾಗೆ ಓಂ ಸಿನಿಮಾ ರೀತಿ ಲಾಂಗ್ ಹಿಡಿಯೋದು ಕಲಿಸಿದ ಶಿವಣ್ಣ
Weekly Horoscope: ಜೂನ್​ 2 ರಿಂದ 8 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 2 ರಿಂದ 8 ರವರೆಗಿನ ವಾರ ಭವಿಷ್ಯ
Daily Devotional: ಮನೆಗೆ ಬರುವ ಅತಿಥಿಗಳ ಉಪಚಾರ ಹೇಗಿರಬೇಕು?
Daily Devotional: ಮನೆಗೆ ಬರುವ ಅತಿಥಿಗಳ ಉಪಚಾರ ಹೇಗಿರಬೇಕು?
Daily Horoscope: ಈ ರಾಶಿಯವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವುದು ಬೇಡ
Daily Horoscope: ಈ ರಾಶಿಯವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವುದು ಬೇಡ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು