AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 14 ಜನರಲ್ಲಿ ಯಾರನ್ನು ಮದುವೆಯಾಗಲಿ?; ನೆಟ್ಟಿಗರ ಸಹಾಯ ಕೋರಿದ ಯುವತಿ

Marriage : ಸದ್ಯ ನಿರುದ್ಯೋಗಿಯಾಗಿರುವ ಈ ಹುಡುಗಿ ಟಿಸಿಎಸ್​, ಬೈಜೂಸ್​, ಡೆಲಾಯಿಟ್​ ಮುಂತಾದ ಕಂಪೆನಿಗಳಲ್ಲಿ ರೂ. 14ರಿಂದ 45 ಲಕ್ಷ ಆದಾಯವಿರುವ 14ರ ಹುಡುಗರ ಪಟ್ಟಿ ಮಾಡಿಕೊಂಡಿದ್ದಾಳೆ. ಆದರೆ ಆಯ್ಕೆಯ ಗೊಂದಲಕ್ಕೆ ಬಿದ್ದಿದ್ದಾಳೆ.

Viral: 14 ಜನರಲ್ಲಿ ಯಾರನ್ನು ಮದುವೆಯಾಗಲಿ?; ನೆಟ್ಟಿಗರ ಸಹಾಯ ಕೋರಿದ ಯುವತಿ
ಸೌಜನ್ಯ : ಅಂತರ್ಜಾಲ
ಶ್ರೀದೇವಿ ಕಳಸದ
|

Updated on:Jul 19, 2023 | 11:50 AM

Share

Matrimonial : ತನ್ನ ನಿರೀಕ್ಷೆಗೆ ತಕ್ಕಂಥ ಸಂಗಾತಿ ಬೇಕೆಂದು ಹುಡುಗನೂ ಬಯಸುತ್ತಾನೆ, ಹುಡುಗಿಯೂ. ಇದಕ್ಕೆ ಆನ್​ಲೈನ್​ ಮ್ಯಾಟ್ರಿಮೋನಿಯಲ್​ ವೆಬ್​ಸೈಟ್​ಗಳು ಸಾಥ್​ ಕೊಡುತ್ತ ಮೂರು ದಶಕಗಳೇ ಕಳೆದವು. ಸಾಕಷ್ಟು ಜನರ ಮದುವೆಗೂ (Marriage) ಇವು ಸಾಕ್ಷಿಯಾದವು ಮತ್ತು ಆಗುತ್ತಲೇ ಇವೆ. ಆದರೆ ಇಲ್ಲೊಬ್ಬಳು ಹುಡುಗಿ ಆಯ್ಕೆಯ ಗೊಂದಲದಲ್ಲಿದ್ದಾಳೆ. 14 ಹುಡುಗರನ್ನು ಶಾರ್ಟ್​ಲಿಸ್ಟ್ ಮಾಡಿದ ಆಕೆ ಯಾವ ಹುಡುಗನನ್ನು ಮದುವೆಯಾದರೆ ಒಳ್ಳೆಯದು ಎಂದು ನೆಟ್ಟಿಗರಲ್ಲಿ ಸಲಹೆ ಕೇಳಿದ್ದಾಳೆ. ಈಕೆ ಲಿಸ್ಟ್ ಮಾಡಿದ ಹುಡುಗರು ಬೈಜೂಸ್​, ಡೆಲಾಯ್ಡ್​, ಟಿಸಿಎಸ್​ ಮುಂತಾದ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರೆಲ್ಲರ ವಾರ್ಷಿಕ ಆದಾಯ ರೂ. 14 ಲಕ್ಷದಿಂದ ರೂ 45 ಲಕ್ಷ.

‘ನನಗೆ 29 ವರ್ಷ. ಬಿಕಾಂ ಓದಿದ್ದೇನೆ ಆದರೆ ಸದ್ಯ ಉದ್ಯೋಗದಲ್ಲಿಲ್ಲ. ಈ 14 ಹುಡುಗರೊಂದಿಗೆ ಸಂವಹನ ನಡೆಸುತ್ತಿದ್ದೇನೆ. ಆದರೆ ಮದುವೆಯಾಗಲು ಯಾರನ್ನು ಆಯ್ಕೆ ಮಾಡಬೇಕು ಎಂಬ ಗೊಂದಲದಲ್ಲಿದ್ದೇನೆ, ದಯವಿಟ್ಟು ಸಹಾಯ ಮಾಡಿ’ ತಪ್ಪೊಪ್ಪಿಗೆ ಎಂಬ ಶೀರ್ಷಿಕೆಯಡಿ ಈಕೆ ಆ ವಿವಾಹಾಕಾಂಕ್ಷಿಗಳ ವಯಸ್ಸು, ಊರು, ಕಂಪೆನಿ, ವಾರ್ಷಿಕ ಆದಾಯವನ್ನು ಪಟ್ಟಿ ಮಾಡಿದ್ದಾಳೆ. ಈ ಪಟ್ಟಿ  ಅಂತರ್ಜಾಲದಲ್ಲಿ ಭಾರೀ ಚರ್ಚೆಗೀಡು ಮಾಡುತ್ತಿದೆ.

ಇದನ್ನೂ ಓದಿ : Viral Video: ಸಂಚಾರಿ ನಿಯಮ ಮುರಿದ ಜೋಡಿ; ವಿಡಿಯೋಗೆ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು

ಆದರೆ ರೂ. 45 ಲಕ್ಷ ವಾರ್ಷಿಕ ಆದಾಯವಿರುವ ವ್ಯಕ್ತಿಗಳು,  ವೈದ್ಯರುಗಳು ನಿರುದ್ಯೋಗಿಯಾಗಿರುವ ಈ ಹುಡುಗಿಯೆಡೆ ಆಸಕ್ತಿ ತೋರಿಸುತ್ತಿದ್ದಾರೆಂದರೆ, ಅವರಿಗೆ ತುಂಬಾ ಮುಖ್ಯವಾದಂಥ ಯಾವುದೇ ನ್ಯೂನತೆಗಳು ಇಲ್ಲ ತಾನೇ? ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಅಷ್ಟಕ್ಕೂ ಈಕೆ ಯಾಕೆ ಉದ್ಯೋಗದಲ್ಲಿಲ್ಲ? ಈಕೆ ತಾನು ಮದುವೆಯಾಗಬಯಸುವ ಹುಡುಗರಿಂದ ಏನನ್ನು ನಿರೀಕ್ಷಿಸುತ್ತಿದ್ದಾಳೆ? ಎಂದೂ ಕೇಳುತ್ತಿದ್ಧಾರೆ.

ನೀವೇನಂತೀರಿ?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:49 am, Wed, 19 July 23

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!