Viral Video: ಬರೀಗೈಯಲ್ಲಿ ಎರಡು ಹಾವುಗಳನ್ನು ಹಿಡಿದ ಮಹಿಳೆಯ ವಿಡಿಯೋ ವೈರಲ್

Woman : ಅವುಗಳ ಪಾಡಿಗೆ ಅವು ಆಟವಾಡಿಕೊಂಡಿವೆ. ಈಕೆ ಯಾಕೆ ಇಂಥ ದುಃಸ್ಸಾಹಸಕ್ಕೆ ಕೈಹಾಕಬೇಕು ಎಂದು ಕೆಲವರು. ಆಕೆ ಅವುಗಳನ್ನು ಧೈರ್ಯದಿಂದ ರಕ್ಷಿಸಿದ್ದಾಳೆ ಎಂದು ಕೆಲವರು. ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

Viral Video: ಬರೀಗೈಯಲ್ಲಿ ಎರಡು ಹಾವುಗಳನ್ನು ಹಿಡಿದ ಮಹಿಳೆಯ ವಿಡಿಯೋ ವೈರಲ್
ಎರಡು ಹಾವುಗಳನ್ನು ಹಿಡಿಯುತ್ತಿರುವ ಮಹಿಳೆ
Follow us
|

Updated on: Aug 07, 2023 | 11:35 AM

Snakes : ಈಕೆಗೆ ಕಸದರಾಶಿಯ ನಡುವೆ ಎರಡು ಹಾವುಗಳು ಕಂಡಿವೆ. ನುಗ್ಗಿದವಳೇ ಬರೀಗೈಯಲ್ಲಿ ಎರಡೂ ಹಾವುಗಳನ್ನು ಹಿಡಿದಿದ್ದಾಳೆ. ಹಾವುಗಳು ಆಕೆಯ ಹಿಡಿತದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿವೆ. ಆಕೆಯ ಮೇಲೆ ದಾಳಿ ಮಾಡಲು ಕೂಡ ಯತ್ನಿಸಿವೆ. ಆದರೂ ಆಕೆ ಅವುಗಳ ಬಾಲವನ್ನು ಗಟ್ಟಿಯಾಗಿ ಹಿಡಿದೆಳೆದು ಅವುಗಳೆರಡನ್ನೂ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾಳೆ. ಏ. 18ರಂದು @dekhbhai ಎಂಬ ಇನ್​ಸ್ಟಾಗ್ರಾಂ ಪುಟದಲ್ಲಿ ಇದನ್ನು ಪೋಸ್ಟ್ ಮಾಡಲಾಗಿದ್ದು ಈ ಹಳೆಯ ವಿಡಿಯೋ ಮತ್ತೆ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Dekh Bhai | Funny Memes | Videos by Om Patel (@dekhbhai)

ಈತನಕ ಸುಮಾರು 1 ಮಿಲಿಯನ್​ ಜನರು ಈ ವಿಡಿಯೋ ನೋಡಿದ್ದಾರೆ. ಈ ವಿಡಿಯೋ ನೋಡಿದ ಹೆಚ್ಚಿನ ಪಾಲು ಜನ ಈ ಮಹಿಳೆಯನ್ನು ಬೈದಿದ್ದಾರೆ. ತಮ್ಮ ಪಾಡಿಗೆ ತಾವು ಆಟವಾಡಿಕೊಂಡಿದ್ದ ಹಾವುಗಳನ್ನು ಈಕೆ ಹೀಗೆ ಹೋಗಿ ಹಿಡಿದದ್ದು ಸರಿಯಲ್ಲ. ಅಕಸ್ಮಾತ್​ ಏನಾದರೂ ಹೆಚ್ಚೂಕಡಿಮೆಯಾಗಿದ್ದರೆ? ಎಂದು ಕೇಳಿದ್ದಾರೆ. ಇನ್ನುಳಿದಂತೆ ಈಕೆಯ ಧೈರ್ಯವನ್ನು ಮೆಚ್ಚಿ ಕೊಂಡಾಡಿದ್ದಾರೆ.

ಇದನ್ನೂ ಓದಿ : Viral: ಪಾಸ್​ಪೋರ್ಟ್​ ಹುಡುಕಿ; ಹದ್ದಿನ ಕಣ್ಣುಳ್ಳವರು ನೀವಾಗಿದ್ದರೆ ಖಂಡಿತ ಹುಡುಕುತ್ತೀರಿ

ಅಯ್ಯೋ  ನನಗೆ ಈ ವಿಡಿಯೋ ನೋಡಿ ಆತಂಕ ಹೆಚ್ಚಾಗುತ್ತಿದೆ ಎಂದಿದ್ದಾರೆ ಒಬ್ಬರು. ಈಕೆಗೆ ಹಾವು ಹಿಡಿಯುವಲ್ಲಿ ಪರಿಣತಿ ಇರಬೇಕು ಅದಕ್ಕೆ ಹೀಗೆ ಎರಡೆರಡು ಹಾವುಗಳನ್ನು ಹಿಡಿದಿದ್ದಾರೆ, ಇಲ್ಲವಾದಲ್ಲಿ ಈಕೆ ಇಂಥ ಸಾಹಸಕ್ಕೆ ಮುನ್ನುಗ್ಗಿರಲಾರಳು ಎಂದಿದ್ದಾರೆ ಇನ್ನೊಬ್ಬರು. ಕನಸಿನಲ್ಲಿ ಹಾವು ಕಂಡರೇ ನಾನು ಸುಧಾರಿಸಿಕೊಳ್ಳೋಕೆ ಬಹಳ ದಿನಗಳನ್ನು ತೆಗೆದುಕೊಳ್ಳುತ್ತೇನೆ, ಇನ್ನು ಈಕೆ… ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ಧಾರೆ.

ಇದನ್ನೂ ಓದಿ : Viral Video: ಅಲ್ಝೈಮರ್​; ಅಪ್ಪಾ, ನಮ್ಮ ನೌಕಾಯಾನದ ನೆನಪಿದೆಯೇ, ಈ ಟ್ಯಾಟೂ ನೋಡಿ

ಯಾಕೋ ಅಕಾರಣವಾಗಿ ಈಕೆಯ ಮೇಲೆ ದ್ವೇಷ ಹುಟ್ಟುತ್ತಿದೆ ಎಂದು ಒಬ್ಬರು ಹೇಳಿದ್ದಾರೆ. ಹೌದು, ಪ್ರಕೃತಿಸಹಜವಾಗಿ ಆ ಹಾವುಗಳು ಒಂದಾಗಿದ್ದವು. ಈಕೆ ಅವುಗಳಿಗೆ ತೊಂದರೆ ನೀಡಿದಳು ಎಂದಿದ್ದಾರೆ ಮತ್ತೊಬ್ಬರು. ನಗರಪ್ರದೇಶದ ಜನರಿಗೆ ತಿಳಿವಳಿಕೆ ಇದೆ, ಆಕೆ ಅವುಗಳನ್ನು ರಕ್ಷಿಸಿದ್ದಾಳೆ ಎಂದು ಮಗದೊಬ್ಬರು ಹೇಳಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?