AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹರಿಯಾಣ; 13 ಗಂಟೆಗಳ ಕ್ಯಾಬ್​ರೈಡ್​; ಚಾಲಕನಿಗೆ ಹಣ ಕೊಡಲು ನಿರಾಕರಿಸಿದ ಮಹಿಳೆ

Cabs : ರಾತ್ರಿಯಿಡೀ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಚಾಲಕನಿಗೆ ಹೇಳುತ್ತಲೇ ಹೋಗಿದ್ದಾಳೆ. ಬೇಸತ್ತ ಚಾಲಕ ಹಣ ಪಾವತಿಸುವಂತೆ ಕೇಳಿದಾಗ, ಆತನ ಮೇಲೆಯೇ ಸುಳ್ಳು ಕೇಸ್​ ದಾಖಲಿಸುವುದಾಗಿ ಬೆದರಿಸಿದ್ದಾಳೆ.

Viral Video: ಹರಿಯಾಣ; 13 ಗಂಟೆಗಳ ಕ್ಯಾಬ್​ರೈಡ್​; ಚಾಲಕನಿಗೆ ಹಣ ಕೊಡಲು ನಿರಾಕರಿಸಿದ ಮಹಿಳೆ
ಕ್ಯಾಬ್​ ಹಣ ಪಾವತಿಸದೆ ರಸ್ತೆಯಲ್ಲಿ ಜಗಳಕ್ಕಿಳಿದ ಗುರುಗ್ರಾಮ್​ನ ಜ್ಯೋತಿ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jul 27, 2023 | 2:55 PM

Share

Haryana : ಹರಿಯಾಣದ ಗುರುಗ್ರಾಮ್​ನ (Gurugram) ಈ ಮಹಿಳೆ 13 ಗಂಟೆಗಳ ಕಾಲ ಕ್ಯಾಬ್​ನಲ್ಲಿ ಸುತ್ತಾಡಿ ಕ್ಯಾಬ್​ ಚಾಲಕನಿಗೆ ಹಣ ಪಾವತಿಸಲು ನಿರಾಕರಿಸಿದ್ದಾಳೆ. ಇಷ್ಟೇ ಅಲ್ಲ, ಅವನು ಕಿರುಕುಳ ನೀಡಿದ್ಧಾನೆಂದು ಸುಳ್ಳು ಕೇಸ್​​ ಹಾಕುವುದಾಗಿ ಬೆದರಿಸಿ ರಸ್ತೆಯಲ್ಲಿ ಗಲಾಟೆ ಸೃಷ್ಟಿಸಿದ್ದಾಳೆ. ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಆಕೆ  ಕ್ಯಾಬ್​ ಚಾಲಕ, ಪೊಲೀಸ್​ ಮತ್ತು ಪತ್ರಕರ್ತೆಯೊಂದಿಗೆ ಜಗಳವಾಡಿದ್ದಾಳೆ. ಪತ್ರಕರ್ತೆ ದೀಪಿಕಾ ನಾರಾಯಣ ಭಾರದ್ವಾಜ್ ಈ ವಿಡಿಯೋ​ ಟ್ವೀಟ್ ಮಾಡಿ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ.

ಕ್ಯಾಬ್​ ಚಾಲಕ ದೀಪಕ್​ ನೀಡಿದ ಮಾಹಿತಿಯ ಪ್ರಕಾರ ಈ ಮಹಿಳೆಯನ್ನು ಜ್ಯೋತಿ ಎಂದು ಗುರುತಿಸಲಾಗಿದೆ. ರಾತ್ರಿ 9ರಸುಮಾರಿಗೆ ಮೇದಾಂತ ಆಸ್ಪತ್ರೆಯ ಬಳಿ ಈಕೆ ಓಲಾ ಆ್ಯಪ್​ ಮೂಲಕ ಕ್ಯಾಬ್​ ಬುಕ್ ಮಾಡಿದ್ದಾಳೆ. ಮರುದಿನ 9ಗಂಟೆಯತನಕ ಗುರುಗ್ರಾಮ್​ನ ವಿವಿಧ ಜಾಗಗಳಿಗೆ ಪ್ರಯಾಣಿಸಿದ್ದಾಳೆ. ನಂತರ ರೂ. 2000 ಕ್ಯಾಬ್​ ಶುಲ್ಕ ಭರಿಸಲು ಚಾಲಕ ಕೇಳಿಕೊಂಡಾಗ ಆತನನ್ನೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ಧಾಳೆ.

ಇದನ್ನೂ ಓದಿ : Viral: ಮುಂಬೈ: ಮರಾಠಿ ಧಾರಾವಾಹಿ ಸೆಟ್​ನಲ್ಲಿ ಕಾಣಿಸಿಕೊಂಡ ಮರಿಚಿರತೆ

ಕ್ಯಾಬ್​ ಚಾಲಕ ದೀಪಕ್​, ‘ಆಕೆ ನಿಖರವಾಗಿ ತಾನು ಯಾವ ಸ್ಥಳಕ್ಕೆ ಹೋಗಬೇಕು ಎನ್ನುವುದನ್ನು ತಿಳಿಸದೆ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಸೂಚಿನೆ ನೀಡುತ್ತಿದ್ದಳು. ನನಗೆ ಸಾಕಾಗಿ ಟ್ರಿಪ್​ ಮುಗಿಸುವಂತೆ ಆಕೆಗೆ ಕೇಳಿಕೊಂಡೆ. ಅಲ್ಲದೆ, ರೂ. 2,000 ಪ್ರಯಾಣ ಶುಲ್ಕವನ್ನೂ ಭರಿಸುವಂತೆ ಹೇಳಿದೆ. ಯುಪಿಐ ಮೂಲಕ ಭರಿಸುವುದಾಗಿ ಹೇಳುತ್ತಿದ್ದಳೇ ವಿನಾ 2 ಗಂಟೆ ಸಮಯ ಕಳೆದರೂ ನನ್ನ ಅಕೌಂಟ್​​ಗೆ ಹಣ ಬರಲಿಲ್ಲ. ಮತ್ತೆ ಮತ್ತೆ ಹಣ ಕೇಳಿದ್ದಕ್ಕೆ ನನ್ನ ಮೇಲೆಯೇ ಸುಳ್ಳು ಕೇಸ್​ ಹಾಕಿ ಸಿಲುಕಿಸುತ್ತೇನೆ ಎಂದು ಬೆದರಿಸಿದಳು’ ಎಂದಿದ್ದಾನೆ.

ಇದನ್ನೂ ಓದಿ : Viral Video: ಕೈಲಾಸ ಪರ್ವತದಲ್ಲಿ ಶಿವ; ಈಕೆ ಪಾರ್ವತಿಯ ಅವತಾರ, ಗಾಢನಿದ್ರೆಯಿಂದ ನಮ್ಮೆಲ್ಲರನ್ನು ಎಚ್ಚರಿಸುತ್ತಿದ್ದಾರೆ

ಪತ್ರಕರ್ತೆ ದೀಪಿಕಾ ನಾರಾಯಣ ಭಾರದ್ವಾಜ ಈ ಪ್ರಕರಣವನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಳ್ಳಲು ಶುರು ಮಾಡುತ್ತಿದ್ದಂತೆ ಅವರೊಂದಿಗೂ ಜ್ಯೋತಿ ಜಗಳಕ್ಕೆ ಇಳಿದಿದ್ಧಾಳೆ. ರಸ್ತೆಯಲ್ಲಿ ಜಗಳ ತಾರಕಕ್ಕೆ ಏರುತ್ತಿದ್ದಂತೆ ಗುರುಗ್ರಾಮ್​ ಪೊಲೀಸರ ತಂಡವು ಮಧ್ಯಪ್ರವೇಶಿಸಿ, ಈ ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದೆ.

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 2:41 pm, Thu, 27 July 23

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!