AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನಿರ್ಜನ ದಾರಿ ಮಧ್ಯೆ ಪ್ರಜ್ಞೆ ತಪ್ಪಿದ ಚಾಲಕ; 10 ಕಿಮೀ ದೂರ ಬಸ್​ ಓಡಿಸಿ ಆತನ ಪ್ರಾಣ ರಕ್ಷಿಸಿ, ಪ್ರಯಾಣಿಕರನ್ನು ಕಾಪಾಡಿದ ಮಹಿಳೆ

ನನಗೆ ಕಾರು ಡ್ರೈವ್ ಮಾಡುವುದು ಗೊತ್ತಿತ್ತು. ಅದೇ ಧೈರ್ಯದ ಮೇಲೆ ಈ ಬಸ್​ ಓಡಿಸಲು ಮುಂದಾದೆ. ಎಲ್ಲಕ್ಕಿಂತ ಮುಖ್ಯವಾಗಿ ಚಾಲಕನಿಗೆ ಮೊದಲು ಚಿಕಿತ್ಸೆ ಕೊಡಿಸಬೇಕಿತ್ತು ಎಂದು ಯೋಗಿತಾ ಹೇಳಿದ್ದಾರೆ.

Video: ನಿರ್ಜನ ದಾರಿ ಮಧ್ಯೆ ಪ್ರಜ್ಞೆ ತಪ್ಪಿದ ಚಾಲಕ; 10 ಕಿಮೀ ದೂರ ಬಸ್​ ಓಡಿಸಿ ಆತನ ಪ್ರಾಣ ರಕ್ಷಿಸಿ, ಪ್ರಯಾಣಿಕರನ್ನು ಕಾಪಾಡಿದ ಮಹಿಳೆ
ಬಸ್ ಓಡಿಸಿದ ಮಹಿಳೆ
Follow us
TV9 Web
| Updated By: Lakshmi Hegde

Updated on:Jan 16, 2022 | 3:07 PM

ಪುಣೆಯ 42 ವರ್ಷ ಮಹಿಳೆಯೊಬ್ಬರು ತಾವು ಮಾಡಿದ ಒಂದು ಒಳ್ಳೆಯ ಕೆಲಸದಿಂದ ಭರ್ಜರಿ ಸುದ್ದಿಯಾಗುತ್ತಿದ್ದಾರೆ. ಬಸ್​​ನಲ್ಲಿ ಹೋಗುತ್ತಿದ್ದಾಗ, ಆ ಬಸ್​​ನ ಚಾಲಕ ತೀವ್ರ ಅಸ್ವಸ್ಥರಾಗುತ್ತಾರೆ.  ಆಗ ಈ ಮಹಿಳೆ ತಮ್ಮ ಸಮಯಪ್ರಜ್ಞೆಯಿಂದ ಬಸ್​ ಓಡಿಸಿ, ಚಾಲಕನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಅದರೊಂದಿಗೆ ಪ್ರಯಾಣಿಕರನ್ನೂ ಅಪಾಯದಿಂದ ಪಾರು ಮಾಡಿದ್ದಾರೆ.  ಮಹಾರಾಷ್ಟ್ರದ ಪುಣೆಯಲ್ಲಿ ಜನವರಿ 7ರಂದು ಘಟನೆ ನಡೆದಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಸಿಕ್ಕಾಪಟೆ ವೈರಲ್​ ಆಗುತ್ತಿದೆ.

ಮಹಿಳೆಯ ಹೆಸರು ಯೋಗಿತಾ ಸಾತವ್​. ಯೋಗಿತಾ ಮತ್ತು ಇತರ ಮಹಿಳೆಯರು, ಮಕ್ಕಳೊಂದಿಗೆ ಪುಣೆಯ ಸಮೀಪ ಇರುವ ಶಿರೂರಿನ ಕೃಷಿ ಪ್ರವಾಸೋದ್ಯಮ ಕೇಂದ್ರಕ್ಕೆ ಪಿಕ್ನಿಕ್​ಗೆ ತೆರಳಿದ್ದರು. ಈ ಪಿಕ್ನಿಕ್ ಮುಗಿಸಿ ವಾಪಸ್​ ಬರುತ್ತಿದ್ದ ವೇಳೆ ಚಾಲಕ ಅಸ್ವಸ್ಥನಾಗಿದ್ದಾನೆ. ಅಷ್ಟೇ ಅಲ್ಲ, ನಿರ್ಜನ ಪ್ರದೇಶವೊಂದರಲ್ಲಿ ಮಿನಿ ಬಸ್​ ನಿಲ್ಲಿಸಿ ಪ್ರಜ್ಞೆ ತಪ್ಪಿದ್ದಾನೆ. ಹೀಗೆ, ಚಾಲಕ ಮೂರ್ಛೆ ಹೋದಕೂಡಲೇ ಮುಂದೇನು ಮಾಡಬೇಕು ಎಂದು ತಿಳಿಯದೆ ಬಸ್​​ನಲ್ಲಿದ್ದ ಮಕ್ಕಳು, ಮಹಿಳೆಯರು ಗಾಬರಿಯಾಗಿದ್ದಾರೆ. ಕೆಲವರಂತೂ ಅಳಲೂ ಶುರು ಮಾಡಿದ್ದರು. ಆದರೆ ಯೋಗಿತಾ, ಕೂಡಲೇ ತಾವೇ ಮುಂದಾಗಿ ಬಸ್​ ಓಡಿಸಿದ್ದಾರೆ. ಸುಮಾರು 10 ಕಿಮೀ ದೂರ ಬಸ್​ ಡ್ರೈವ್​ ಮಾಡಿ, ಚಾಲಕನನ್ನು ಆಸ್ಪತ್ರೆಗೆ ಸೇರಿಸಿದ ಅವರು, ಬಳಿಕ ಉಳಿದ ಪ್ರಯಾಣಿಕರನ್ನು ಅವರವರ ಮನೆಗಳಿಗೆ ಬಿಟ್ಟಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಯೋಗಿತಾ, ನನಗೆ ಕಾರು ಡ್ರೈವ್ ಮಾಡುವುದು ಗೊತ್ತಿತ್ತು. ಅದೇ ಧೈರ್ಯದ ಮೇಲೆ ಈ ಬಸ್​ ಓಡಿಸಲು ಮುಂದಾದೆ. ಎಲ್ಲಕ್ಕಿಂತ ಮುಖ್ಯವಾಗಿ ಚಾಲಕನಿಗೆ ಮೊದಲು ಚಿಕಿತ್ಸೆ ಕೊಡಿಸಬೇಕಿತ್ತು. ಹಾಗಾಗಿ ಮೊದಲು ಒಂದು ಆಸ್ಪತ್ರೆಗೆ ಹೋದೆವು ಎಂದು ಹೇಳಿದ್ದಾರೆ. ಹೀಗೆ, ಚಾಲಕನ ಜೀವ ಉಳಿಸಿ, ಉಳಿದ ಪ್ರಯಾಣಿಕರನ್ನೂ ಸುರಕ್ಷಿತ ಮಾಡಿದ ಯೋಗಿತಾರ ಬಗ್ಗೆ ನೆಟ್ಟಿಗರು ಅಪಾರ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ.

ಇದನ್ನೂ ಓದಿ: Viral Video: 63.7 ಕೆಜಿ ಜೇನುನೊಣಗಳನ್ನು ಮೈಮೇಲೆ ಬಿಟ್ಟುಕೊಂಡು ದಾಖಲೆ ನಿರ್ಮಿಸಿದ ವ್ಯಕ್ತಿ

Published On - 3:06 pm, Sun, 16 January 22

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!