AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 5 ಜೀವಂತ ಹಾವುಗಳನ್ನು ತನ್ನ ಎದೆಯಬಳಿ ಅಡಗಿಸಿಟ್ಟುಕೊಂಡಿದ್ದ ಮಹಿಳೆ

China : ಮಹಿಳೆಯ ದೇಹ ಅಸಹಜ ರೀತಿಯಲ್ಲಿರುವುದನ್ನು ಅನುಮಾನಿಸಿದ ಅಧಿಕಾರಿಗಳು ಆಕೆಯ ಇಡೀ ದೇಹವನ್ನು ಪರೀಕ್ಷಿಸಿದರು. ಆಕೆ ಸ್ಟಾಕಿನ್ಸ್​ ಒಳಗೆ ಜೀವಂತ ಹಾವುಗಳನ್ನು ಸುತ್ತಿಟ್ಟುಕೊಂಡಿದ್ದಳು. ಆ ಫೋಟೋ ಇದೀಗ ವೈರಲ್.

Viral: 5 ಜೀವಂತ ಹಾವುಗಳನ್ನು ತನ್ನ ಎದೆಯಬಳಿ ಅಡಗಿಸಿಟ್ಟುಕೊಂಡಿದ್ದ ಮಹಿಳೆ
ಸಾಂದರ್ಭಿಕ ಚಿತ್ರ, ಸೌಜನ್ಯ : ಅಂತರ್ಜಾಲ
ಶ್ರೀದೇವಿ ಕಳಸದ
|

Updated on:Jul 11, 2023 | 4:46 PM

Share

Smuggling : ಪೊಲೀಸರು ಚಾಪೆಯ ಕೆಳಗೆ ತೂರಿದರೆ ಕಳ್ಳರು ರಂಗೋಲಿ ಕೆಳಗೆ ತೂರಿಕೊಳ್ಳುತ್ತಾರೆ. ಪ್ರತೀ ಸಲ ಕಳ್ಳಸಾಗಾಣಿಕೆದಾರರನ್ನು ಬಂಧಿಸಿದಾಗ ಅವರ ಚೌರ್ಯಚಾತುರ್ಯ ಅಚ್ಚರಿ ಮೂಡಿಸುವಂತಿರುತ್ತದೆ. ವಿಮಾನ ಮತ್ತು ಇತರೇ ಸಾರಿಗೆ ವ್ಯವಸ್ಥೆಯ ಭದ್ರತಾ ಸಿಬ್ಬಂದಿಗೆ ಚಳ್ಳೆಹಣ್ಣು ತಿನ್ನಿಸುವಲ್ಲಿ ಸಿದ್ಧಹಸ್ತರಾದ ಇವರು ಆಗೊಮ್ಮೆ ಈಗೊಮ್ಮೆ ಸಿಕ್ಕಿಹಾಕಿಕೊಳ್ಳುತ್ತಾರೆ. ಇದೀಗ ವೈರಲ್ ಆಗುತ್ತಿರುವ ಈ ಪ್ರಕರಣ ಗಮನಿಸಿ. ಚೀನಾದ ಗಡಿಯಲ್ಲಿ 5 ಜೀವಂತ ಹಾವುಗಳನ್ನು (Live Snakes) ತನ್ನ ಎದೆಭಾಗದ ಬಳಿ ಬಚ್ಚಿಟ್ಟುಕೊಂಡು ಕಳ್ಳಸಾಗಾಣಿಕೆ ಮಾಡುತ್ತಿದ್ದ ಮಹಿಳೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಚೀನಾದ ಗುವಾಂಗ್‌ಡಾಂಗ್ (Guangdong) ಪ್ರಾಂತ್ಯದ ಶೆನ್‌ಝೆನ್​ನ ಫ್ಯೂಟಿಯನ್ ಬಂದರಿನಲ್ಲಿ (Futian Port,  Shenzhen) ಗಡಿ ದಾಟುತ್ತಿದ್ದಾಗ ಈಕೆಯನ್ನು ಅಧಿಕಾರಿಗಳು ಅನುಮಾನಿಸಿ ತಡೆಹಿಡಿದಿದ್ದಾರೆ. ತಕ್ಷಣವೇ ಈಕೆಯ ಇಡೀ ದೇಹವನ್ನು ತಪಾಸಣೆಗೆ ಒಳಪಡಿಸಿದಾಗ ಸ್ಟಾಕಿಂಗ್ಸ್​ನಲ್ಲಿ ಐದು ಹಾವುಗಳನ್ನು ಸುತ್ತಿಕೊಂಡು ತನ್ನ ಎದೆಯ ಭಾಗದಲ್ಲಿ ಈಕೆ ಇಟ್ಟುಕೊಂಡಿರುವುದು ಪತ್ತೆಯಾಗಿದೆ.

ಇದನ್ನೂ ಓದಿ : Viral Video: ಇಡೀ ಹಳ್ಳಿಗೇ ಮೊಮೊ ಪಾರ್ಟಿ ಕೊಟ್ಟ ಯೂಟ್ಯೂಬರ್​

ಈ ಘಟನೆಯು ಕೆಲ ದಿನಗಳ ಹಿಂದೆ ನಡೆದಿದ್ದು, ಮಹಿಳೆಯ ದೇಹದ ಆಕಾರ ಅಸಹಜ ರೀತಿಯಲ್ಲಿ ಇದ್ದುದನ್ನು ಕಂಡು ಅಧಿಕಾರಿಗಳಿಗೆ ಅನುಮಾನ ಉಂಟಾಗಿ ನಂತರದ ಪ್ರಕ್ರಿಯೆಗೆ ಮುಂದಾಗಿದ್ದಾರೆ. ಆಕೆ ಕಳ್ಳಸಾಗಣೆ ಮಾಡಲು ಯತ್ನಿಸಿದ ಹಾವುಗಳನ್ನು ಕಾರ್ನ್​ ಹಾವುಗಳು (Corn Snakes) ಎಂದು ಗುರುತಿಸಲಾಗಿದ್ದು ಸಂಬಂಧಿಸಿದ ಇಲಾಖೆಗೆ ರವಾನಿಸಲಾಗಿದೆ.

ನೆಟ್ಟಿಗರು ಅಪಾಯಕಾರಿ ಮತ್ತು ಹೀನ ಕೃತ್ಯದ ಬಗ್ಗೆ ದಿಗ್ಭ್ರಮೆ, ಕೋಪವನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:42 pm, Tue, 11 July 23

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ