AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 5 ಜೀವಂತ ಹಾವುಗಳನ್ನು ತನ್ನ ಎದೆಯಬಳಿ ಅಡಗಿಸಿಟ್ಟುಕೊಂಡಿದ್ದ ಮಹಿಳೆ

China : ಮಹಿಳೆಯ ದೇಹ ಅಸಹಜ ರೀತಿಯಲ್ಲಿರುವುದನ್ನು ಅನುಮಾನಿಸಿದ ಅಧಿಕಾರಿಗಳು ಆಕೆಯ ಇಡೀ ದೇಹವನ್ನು ಪರೀಕ್ಷಿಸಿದರು. ಆಕೆ ಸ್ಟಾಕಿನ್ಸ್​ ಒಳಗೆ ಜೀವಂತ ಹಾವುಗಳನ್ನು ಸುತ್ತಿಟ್ಟುಕೊಂಡಿದ್ದಳು. ಆ ಫೋಟೋ ಇದೀಗ ವೈರಲ್.

Viral: 5 ಜೀವಂತ ಹಾವುಗಳನ್ನು ತನ್ನ ಎದೆಯಬಳಿ ಅಡಗಿಸಿಟ್ಟುಕೊಂಡಿದ್ದ ಮಹಿಳೆ
ಸಾಂದರ್ಭಿಕ ಚಿತ್ರ, ಸೌಜನ್ಯ : ಅಂತರ್ಜಾಲ
ಶ್ರೀದೇವಿ ಕಳಸದ
|

Updated on:Jul 11, 2023 | 4:46 PM

Share

Smuggling : ಪೊಲೀಸರು ಚಾಪೆಯ ಕೆಳಗೆ ತೂರಿದರೆ ಕಳ್ಳರು ರಂಗೋಲಿ ಕೆಳಗೆ ತೂರಿಕೊಳ್ಳುತ್ತಾರೆ. ಪ್ರತೀ ಸಲ ಕಳ್ಳಸಾಗಾಣಿಕೆದಾರರನ್ನು ಬಂಧಿಸಿದಾಗ ಅವರ ಚೌರ್ಯಚಾತುರ್ಯ ಅಚ್ಚರಿ ಮೂಡಿಸುವಂತಿರುತ್ತದೆ. ವಿಮಾನ ಮತ್ತು ಇತರೇ ಸಾರಿಗೆ ವ್ಯವಸ್ಥೆಯ ಭದ್ರತಾ ಸಿಬ್ಬಂದಿಗೆ ಚಳ್ಳೆಹಣ್ಣು ತಿನ್ನಿಸುವಲ್ಲಿ ಸಿದ್ಧಹಸ್ತರಾದ ಇವರು ಆಗೊಮ್ಮೆ ಈಗೊಮ್ಮೆ ಸಿಕ್ಕಿಹಾಕಿಕೊಳ್ಳುತ್ತಾರೆ. ಇದೀಗ ವೈರಲ್ ಆಗುತ್ತಿರುವ ಈ ಪ್ರಕರಣ ಗಮನಿಸಿ. ಚೀನಾದ ಗಡಿಯಲ್ಲಿ 5 ಜೀವಂತ ಹಾವುಗಳನ್ನು (Live Snakes) ತನ್ನ ಎದೆಭಾಗದ ಬಳಿ ಬಚ್ಚಿಟ್ಟುಕೊಂಡು ಕಳ್ಳಸಾಗಾಣಿಕೆ ಮಾಡುತ್ತಿದ್ದ ಮಹಿಳೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಚೀನಾದ ಗುವಾಂಗ್‌ಡಾಂಗ್ (Guangdong) ಪ್ರಾಂತ್ಯದ ಶೆನ್‌ಝೆನ್​ನ ಫ್ಯೂಟಿಯನ್ ಬಂದರಿನಲ್ಲಿ (Futian Port,  Shenzhen) ಗಡಿ ದಾಟುತ್ತಿದ್ದಾಗ ಈಕೆಯನ್ನು ಅಧಿಕಾರಿಗಳು ಅನುಮಾನಿಸಿ ತಡೆಹಿಡಿದಿದ್ದಾರೆ. ತಕ್ಷಣವೇ ಈಕೆಯ ಇಡೀ ದೇಹವನ್ನು ತಪಾಸಣೆಗೆ ಒಳಪಡಿಸಿದಾಗ ಸ್ಟಾಕಿಂಗ್ಸ್​ನಲ್ಲಿ ಐದು ಹಾವುಗಳನ್ನು ಸುತ್ತಿಕೊಂಡು ತನ್ನ ಎದೆಯ ಭಾಗದಲ್ಲಿ ಈಕೆ ಇಟ್ಟುಕೊಂಡಿರುವುದು ಪತ್ತೆಯಾಗಿದೆ.

ಇದನ್ನೂ ಓದಿ : Viral Video: ಇಡೀ ಹಳ್ಳಿಗೇ ಮೊಮೊ ಪಾರ್ಟಿ ಕೊಟ್ಟ ಯೂಟ್ಯೂಬರ್​

ಈ ಘಟನೆಯು ಕೆಲ ದಿನಗಳ ಹಿಂದೆ ನಡೆದಿದ್ದು, ಮಹಿಳೆಯ ದೇಹದ ಆಕಾರ ಅಸಹಜ ರೀತಿಯಲ್ಲಿ ಇದ್ದುದನ್ನು ಕಂಡು ಅಧಿಕಾರಿಗಳಿಗೆ ಅನುಮಾನ ಉಂಟಾಗಿ ನಂತರದ ಪ್ರಕ್ರಿಯೆಗೆ ಮುಂದಾಗಿದ್ದಾರೆ. ಆಕೆ ಕಳ್ಳಸಾಗಣೆ ಮಾಡಲು ಯತ್ನಿಸಿದ ಹಾವುಗಳನ್ನು ಕಾರ್ನ್​ ಹಾವುಗಳು (Corn Snakes) ಎಂದು ಗುರುತಿಸಲಾಗಿದ್ದು ಸಂಬಂಧಿಸಿದ ಇಲಾಖೆಗೆ ರವಾನಿಸಲಾಗಿದೆ.

ನೆಟ್ಟಿಗರು ಅಪಾಯಕಾರಿ ಮತ್ತು ಹೀನ ಕೃತ್ಯದ ಬಗ್ಗೆ ದಿಗ್ಭ್ರಮೆ, ಕೋಪವನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:42 pm, Tue, 11 July 23

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ