AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 5 ಜೀವಂತ ಹಾವುಗಳನ್ನು ತನ್ನ ಎದೆಯಬಳಿ ಅಡಗಿಸಿಟ್ಟುಕೊಂಡಿದ್ದ ಮಹಿಳೆ

China : ಮಹಿಳೆಯ ದೇಹ ಅಸಹಜ ರೀತಿಯಲ್ಲಿರುವುದನ್ನು ಅನುಮಾನಿಸಿದ ಅಧಿಕಾರಿಗಳು ಆಕೆಯ ಇಡೀ ದೇಹವನ್ನು ಪರೀಕ್ಷಿಸಿದರು. ಆಕೆ ಸ್ಟಾಕಿನ್ಸ್​ ಒಳಗೆ ಜೀವಂತ ಹಾವುಗಳನ್ನು ಸುತ್ತಿಟ್ಟುಕೊಂಡಿದ್ದಳು. ಆ ಫೋಟೋ ಇದೀಗ ವೈರಲ್.

Viral: 5 ಜೀವಂತ ಹಾವುಗಳನ್ನು ತನ್ನ ಎದೆಯಬಳಿ ಅಡಗಿಸಿಟ್ಟುಕೊಂಡಿದ್ದ ಮಹಿಳೆ
ಸಾಂದರ್ಭಿಕ ಚಿತ್ರ, ಸೌಜನ್ಯ : ಅಂತರ್ಜಾಲ
Follow us
ಶ್ರೀದೇವಿ ಕಳಸದ
|

Updated on:Jul 11, 2023 | 4:46 PM

Smuggling : ಪೊಲೀಸರು ಚಾಪೆಯ ಕೆಳಗೆ ತೂರಿದರೆ ಕಳ್ಳರು ರಂಗೋಲಿ ಕೆಳಗೆ ತೂರಿಕೊಳ್ಳುತ್ತಾರೆ. ಪ್ರತೀ ಸಲ ಕಳ್ಳಸಾಗಾಣಿಕೆದಾರರನ್ನು ಬಂಧಿಸಿದಾಗ ಅವರ ಚೌರ್ಯಚಾತುರ್ಯ ಅಚ್ಚರಿ ಮೂಡಿಸುವಂತಿರುತ್ತದೆ. ವಿಮಾನ ಮತ್ತು ಇತರೇ ಸಾರಿಗೆ ವ್ಯವಸ್ಥೆಯ ಭದ್ರತಾ ಸಿಬ್ಬಂದಿಗೆ ಚಳ್ಳೆಹಣ್ಣು ತಿನ್ನಿಸುವಲ್ಲಿ ಸಿದ್ಧಹಸ್ತರಾದ ಇವರು ಆಗೊಮ್ಮೆ ಈಗೊಮ್ಮೆ ಸಿಕ್ಕಿಹಾಕಿಕೊಳ್ಳುತ್ತಾರೆ. ಇದೀಗ ವೈರಲ್ ಆಗುತ್ತಿರುವ ಈ ಪ್ರಕರಣ ಗಮನಿಸಿ. ಚೀನಾದ ಗಡಿಯಲ್ಲಿ 5 ಜೀವಂತ ಹಾವುಗಳನ್ನು (Live Snakes) ತನ್ನ ಎದೆಭಾಗದ ಬಳಿ ಬಚ್ಚಿಟ್ಟುಕೊಂಡು ಕಳ್ಳಸಾಗಾಣಿಕೆ ಮಾಡುತ್ತಿದ್ದ ಮಹಿಳೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಚೀನಾದ ಗುವಾಂಗ್‌ಡಾಂಗ್ (Guangdong) ಪ್ರಾಂತ್ಯದ ಶೆನ್‌ಝೆನ್​ನ ಫ್ಯೂಟಿಯನ್ ಬಂದರಿನಲ್ಲಿ (Futian Port,  Shenzhen) ಗಡಿ ದಾಟುತ್ತಿದ್ದಾಗ ಈಕೆಯನ್ನು ಅಧಿಕಾರಿಗಳು ಅನುಮಾನಿಸಿ ತಡೆಹಿಡಿದಿದ್ದಾರೆ. ತಕ್ಷಣವೇ ಈಕೆಯ ಇಡೀ ದೇಹವನ್ನು ತಪಾಸಣೆಗೆ ಒಳಪಡಿಸಿದಾಗ ಸ್ಟಾಕಿಂಗ್ಸ್​ನಲ್ಲಿ ಐದು ಹಾವುಗಳನ್ನು ಸುತ್ತಿಕೊಂಡು ತನ್ನ ಎದೆಯ ಭಾಗದಲ್ಲಿ ಈಕೆ ಇಟ್ಟುಕೊಂಡಿರುವುದು ಪತ್ತೆಯಾಗಿದೆ.

ಇದನ್ನೂ ಓದಿ : Viral Video: ಇಡೀ ಹಳ್ಳಿಗೇ ಮೊಮೊ ಪಾರ್ಟಿ ಕೊಟ್ಟ ಯೂಟ್ಯೂಬರ್​

ಈ ಘಟನೆಯು ಕೆಲ ದಿನಗಳ ಹಿಂದೆ ನಡೆದಿದ್ದು, ಮಹಿಳೆಯ ದೇಹದ ಆಕಾರ ಅಸಹಜ ರೀತಿಯಲ್ಲಿ ಇದ್ದುದನ್ನು ಕಂಡು ಅಧಿಕಾರಿಗಳಿಗೆ ಅನುಮಾನ ಉಂಟಾಗಿ ನಂತರದ ಪ್ರಕ್ರಿಯೆಗೆ ಮುಂದಾಗಿದ್ದಾರೆ. ಆಕೆ ಕಳ್ಳಸಾಗಣೆ ಮಾಡಲು ಯತ್ನಿಸಿದ ಹಾವುಗಳನ್ನು ಕಾರ್ನ್​ ಹಾವುಗಳು (Corn Snakes) ಎಂದು ಗುರುತಿಸಲಾಗಿದ್ದು ಸಂಬಂಧಿಸಿದ ಇಲಾಖೆಗೆ ರವಾನಿಸಲಾಗಿದೆ.

ನೆಟ್ಟಿಗರು ಅಪಾಯಕಾರಿ ಮತ್ತು ಹೀನ ಕೃತ್ಯದ ಬಗ್ಗೆ ದಿಗ್ಭ್ರಮೆ, ಕೋಪವನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:42 pm, Tue, 11 July 23

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು