Viral: 5 ಜೀವಂತ ಹಾವುಗಳನ್ನು ತನ್ನ ಎದೆಯಬಳಿ ಅಡಗಿಸಿಟ್ಟುಕೊಂಡಿದ್ದ ಮಹಿಳೆ

China : ಮಹಿಳೆಯ ದೇಹ ಅಸಹಜ ರೀತಿಯಲ್ಲಿರುವುದನ್ನು ಅನುಮಾನಿಸಿದ ಅಧಿಕಾರಿಗಳು ಆಕೆಯ ಇಡೀ ದೇಹವನ್ನು ಪರೀಕ್ಷಿಸಿದರು. ಆಕೆ ಸ್ಟಾಕಿನ್ಸ್​ ಒಳಗೆ ಜೀವಂತ ಹಾವುಗಳನ್ನು ಸುತ್ತಿಟ್ಟುಕೊಂಡಿದ್ದಳು. ಆ ಫೋಟೋ ಇದೀಗ ವೈರಲ್.

Viral: 5 ಜೀವಂತ ಹಾವುಗಳನ್ನು ತನ್ನ ಎದೆಯಬಳಿ ಅಡಗಿಸಿಟ್ಟುಕೊಂಡಿದ್ದ ಮಹಿಳೆ
ಸಾಂದರ್ಭಿಕ ಚಿತ್ರ, ಸೌಜನ್ಯ : ಅಂತರ್ಜಾಲ
Follow us
|

Updated on:Jul 11, 2023 | 4:46 PM

Smuggling : ಪೊಲೀಸರು ಚಾಪೆಯ ಕೆಳಗೆ ತೂರಿದರೆ ಕಳ್ಳರು ರಂಗೋಲಿ ಕೆಳಗೆ ತೂರಿಕೊಳ್ಳುತ್ತಾರೆ. ಪ್ರತೀ ಸಲ ಕಳ್ಳಸಾಗಾಣಿಕೆದಾರರನ್ನು ಬಂಧಿಸಿದಾಗ ಅವರ ಚೌರ್ಯಚಾತುರ್ಯ ಅಚ್ಚರಿ ಮೂಡಿಸುವಂತಿರುತ್ತದೆ. ವಿಮಾನ ಮತ್ತು ಇತರೇ ಸಾರಿಗೆ ವ್ಯವಸ್ಥೆಯ ಭದ್ರತಾ ಸಿಬ್ಬಂದಿಗೆ ಚಳ್ಳೆಹಣ್ಣು ತಿನ್ನಿಸುವಲ್ಲಿ ಸಿದ್ಧಹಸ್ತರಾದ ಇವರು ಆಗೊಮ್ಮೆ ಈಗೊಮ್ಮೆ ಸಿಕ್ಕಿಹಾಕಿಕೊಳ್ಳುತ್ತಾರೆ. ಇದೀಗ ವೈರಲ್ ಆಗುತ್ತಿರುವ ಈ ಪ್ರಕರಣ ಗಮನಿಸಿ. ಚೀನಾದ ಗಡಿಯಲ್ಲಿ 5 ಜೀವಂತ ಹಾವುಗಳನ್ನು (Live Snakes) ತನ್ನ ಎದೆಭಾಗದ ಬಳಿ ಬಚ್ಚಿಟ್ಟುಕೊಂಡು ಕಳ್ಳಸಾಗಾಣಿಕೆ ಮಾಡುತ್ತಿದ್ದ ಮಹಿಳೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಚೀನಾದ ಗುವಾಂಗ್‌ಡಾಂಗ್ (Guangdong) ಪ್ರಾಂತ್ಯದ ಶೆನ್‌ಝೆನ್​ನ ಫ್ಯೂಟಿಯನ್ ಬಂದರಿನಲ್ಲಿ (Futian Port,  Shenzhen) ಗಡಿ ದಾಟುತ್ತಿದ್ದಾಗ ಈಕೆಯನ್ನು ಅಧಿಕಾರಿಗಳು ಅನುಮಾನಿಸಿ ತಡೆಹಿಡಿದಿದ್ದಾರೆ. ತಕ್ಷಣವೇ ಈಕೆಯ ಇಡೀ ದೇಹವನ್ನು ತಪಾಸಣೆಗೆ ಒಳಪಡಿಸಿದಾಗ ಸ್ಟಾಕಿಂಗ್ಸ್​ನಲ್ಲಿ ಐದು ಹಾವುಗಳನ್ನು ಸುತ್ತಿಕೊಂಡು ತನ್ನ ಎದೆಯ ಭಾಗದಲ್ಲಿ ಈಕೆ ಇಟ್ಟುಕೊಂಡಿರುವುದು ಪತ್ತೆಯಾಗಿದೆ.

ಇದನ್ನೂ ಓದಿ : Viral Video: ಇಡೀ ಹಳ್ಳಿಗೇ ಮೊಮೊ ಪಾರ್ಟಿ ಕೊಟ್ಟ ಯೂಟ್ಯೂಬರ್​

ಈ ಘಟನೆಯು ಕೆಲ ದಿನಗಳ ಹಿಂದೆ ನಡೆದಿದ್ದು, ಮಹಿಳೆಯ ದೇಹದ ಆಕಾರ ಅಸಹಜ ರೀತಿಯಲ್ಲಿ ಇದ್ದುದನ್ನು ಕಂಡು ಅಧಿಕಾರಿಗಳಿಗೆ ಅನುಮಾನ ಉಂಟಾಗಿ ನಂತರದ ಪ್ರಕ್ರಿಯೆಗೆ ಮುಂದಾಗಿದ್ದಾರೆ. ಆಕೆ ಕಳ್ಳಸಾಗಣೆ ಮಾಡಲು ಯತ್ನಿಸಿದ ಹಾವುಗಳನ್ನು ಕಾರ್ನ್​ ಹಾವುಗಳು (Corn Snakes) ಎಂದು ಗುರುತಿಸಲಾಗಿದ್ದು ಸಂಬಂಧಿಸಿದ ಇಲಾಖೆಗೆ ರವಾನಿಸಲಾಗಿದೆ.

ನೆಟ್ಟಿಗರು ಅಪಾಯಕಾರಿ ಮತ್ತು ಹೀನ ಕೃತ್ಯದ ಬಗ್ಗೆ ದಿಗ್ಭ್ರಮೆ, ಕೋಪವನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:42 pm, Tue, 11 July 23

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು