AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನಿಜವಾದ ಪ್ರೀತಿ ಎನ್ನುತ್ತಿದ್ದಾರೆ ನೆಟ್ಟಿಗರು, ನೋಡಿ ವೈರಲ್​ ವಿಡಿಯೋ

Love and Care : ಇದು ಕರ್ನಾಟಕದ ಯಾವುದೋ ಬಸ್​ಸ್ಟ್ಯಾಂಡಿನಲ್ಲಿ ಸೆರೆಹಿಡಿಯಲಾದ ದೃಶ್ಯ. ಅನಾರೋಗ್ಯಕ್ಕೆ ತುತ್ತಾದ ಆಕೆಯನ್ನು ತೊಡೆಯ ಮೇಲೆ ಮಲಗಿಸಿಕೊಂಡ ಈ ವ್ಯಕ್ತಿಯ ಮುಖ ನೋಡಿದರೆ ಸಾಕು ಪ್ರೀತಿಯ ಆಳ ಅರ್ಥವಾಗುತ್ತದೆ.

ಇದು ನಿಜವಾದ ಪ್ರೀತಿ ಎನ್ನುತ್ತಿದ್ದಾರೆ ನೆಟ್ಟಿಗರು, ನೋಡಿ ವೈರಲ್​ ವಿಡಿಯೋ
ಮಹಿಳೆಯನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡ ಪುರುಷ
TV9 Web
| Edited By: ಶ್ರೀದೇವಿ ಕಳಸದ|

Updated on:Nov 24, 2022 | 3:42 PM

Share

Viral Video : ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ತನ್ನ ತೊಡೆಯ ಮೇಲೆ ಈ ಮಹಿಳೆಯನ್ನು ಈ ವ್ಯಕ್ತಿ ಮಲಗಿಸಿಕೊಂಡಿದ್ದಾರೆ. ಬಹುಶಃ ಆರೋಗ್ಯ ಸಮಸ್ಯೆ ಇದ್ದಿರಬಹುದು, ಆಕೆಯ ತಲೆಯನ್ನು ತಟ್ಟುತ್ತಿರುವ ಈ ವ್ಯಕ್ತಿಯ ಮುಖದಲ್ಲಿ ಕಾಳಜಿ ಸ್ಫುರಿಸುತ್ತಿದೆ ಜೊತೆಗೆ ನೋವೂ ಮಡುಗಟ್ಟಿದಂತಿದೆ. ನೆಟ್ಟಿಗರು ಈ ವಿಡಿಯೋ ನೋಡಿ ಇದು ನಿಜವಾದ ಪ್ರೀತಿ ಎಂದು ಭಾವುಕರಾಗುತ್ತಿದ್ದಾರೆ. ಇದು ಕರ್ನಾಟಕದ ಯಾವುದೋ ಬಸ್​ಸ್ಟ್ಯಾಂಡಿನಲ್ಲಿ ಸೆರೆಹಿಡಿದ ವಿಡಿಯೋ.

ಜಿಂದಗೀ ಗುಲ್ಝಾರ್ ಹೈ ಎಂಬ ಅಕೌಂಟ್​ನಿಂದ ಈ ವಿಡಿಯೋ ಟ್ವೀಟ್ ಆಗಿದೆ. ಅತ್ಯಂತ ಪ್ರೀತಿಯಿಂದ ಈತ ಈಕೆಯನ್ನು ತೊಡೆಯ ಮೇಲೆ ಮಲಗಿಸಿಕೊಂಡಿದ್ದಾರೆ. ಹೊರಗಿನ ಗದ್ದಲ, ಬೆಳಕು ಆಕೆಗೆ ತೊಂದರೆ ಉಂಟುಮಾಡದಂತೆ ಆಕೆಯನ್ನು ಅತ್ಯಂತ ಕಾಳಜಿಯಿಂದ ನೋಡಿಕೊಳ್ಳುತ್ತಿದ್ದಾರೆ.

ಈ ವಿಡಿಯೋ ಅನ್ನು 58,000ಕ್ಕಿಂತಲೂ ಹೆಚ್ಚು ಜನ ನೋಡಿದ್ಧಾರೆ. 4,700 ಜನರು ಇಷ್ಟಪಟ್ಟಿದ್ದಾರೆ. ದಾಂಪತ್ಯವೆಂದರೆ ಇದು ಎಂದು ಅನೇಕರು ಹೇಳಿದ್ದಾರೆ. ಶ್ರದ್ಧಾ ಪ್ರಕರಣದ ನಂತರ ಈ ದೃಶ್ಯ ನ್ಯೂಸ್​ ಚಾನೆಲ್​ನವರಿಗೆ ಕಾಣುತ್ತಿಲ್ಲವೆ? ಎಂದಿದ್ದಾರೆ ಇನ್ನೂ ಒಬ್ಬರು. ಇದು ಕರ್ನಾಟಕದ ಬಸ್​ ನಿಲ್ದಾಣದಲ್ಲಿ ಸೆರೆಹಿಡಿದ ದೃಶ್ಯ ಎಂದಿದ್ದಾರೆ ಯಾರೋ ಒಬ್ಬರು. ಇದು ಶತಮಾನದ ವಿಡಿಯೋ ಎಂದಿದ್ದಾರೆ ಮಗದೊಬ್ಬರು. ಸಂಬಂಧವೆಂದರೆ ಇದೇ ಎಂದಿದ್ದಾರೆ ಮತ್ತೂ ಒಬ್ಬರು. ಪ್ರೀತಿಯ ಮೇಲೆ ನಂಬಿಕೆಯನ್ನು ಕಳೆದುಕೊಳ್ಳದಂತೆ ಮಾಡುತ್ತಿದೆ ಈ ವಿಡಿಯೋ ಎಂದಿದ್ದಾರೆ.

ಇದನ್ನು ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:42 pm, Thu, 24 November 22

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!