Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನಿಜವಾದ ಪ್ರೀತಿ ಎನ್ನುತ್ತಿದ್ದಾರೆ ನೆಟ್ಟಿಗರು, ನೋಡಿ ವೈರಲ್​ ವಿಡಿಯೋ

Love and Care : ಇದು ಕರ್ನಾಟಕದ ಯಾವುದೋ ಬಸ್​ಸ್ಟ್ಯಾಂಡಿನಲ್ಲಿ ಸೆರೆಹಿಡಿಯಲಾದ ದೃಶ್ಯ. ಅನಾರೋಗ್ಯಕ್ಕೆ ತುತ್ತಾದ ಆಕೆಯನ್ನು ತೊಡೆಯ ಮೇಲೆ ಮಲಗಿಸಿಕೊಂಡ ಈ ವ್ಯಕ್ತಿಯ ಮುಖ ನೋಡಿದರೆ ಸಾಕು ಪ್ರೀತಿಯ ಆಳ ಅರ್ಥವಾಗುತ್ತದೆ.

ಇದು ನಿಜವಾದ ಪ್ರೀತಿ ಎನ್ನುತ್ತಿದ್ದಾರೆ ನೆಟ್ಟಿಗರು, ನೋಡಿ ವೈರಲ್​ ವಿಡಿಯೋ
ಮಹಿಳೆಯನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡ ಪುರುಷ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Nov 24, 2022 | 3:42 PM

Viral Video : ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ತನ್ನ ತೊಡೆಯ ಮೇಲೆ ಈ ಮಹಿಳೆಯನ್ನು ಈ ವ್ಯಕ್ತಿ ಮಲಗಿಸಿಕೊಂಡಿದ್ದಾರೆ. ಬಹುಶಃ ಆರೋಗ್ಯ ಸಮಸ್ಯೆ ಇದ್ದಿರಬಹುದು, ಆಕೆಯ ತಲೆಯನ್ನು ತಟ್ಟುತ್ತಿರುವ ಈ ವ್ಯಕ್ತಿಯ ಮುಖದಲ್ಲಿ ಕಾಳಜಿ ಸ್ಫುರಿಸುತ್ತಿದೆ ಜೊತೆಗೆ ನೋವೂ ಮಡುಗಟ್ಟಿದಂತಿದೆ. ನೆಟ್ಟಿಗರು ಈ ವಿಡಿಯೋ ನೋಡಿ ಇದು ನಿಜವಾದ ಪ್ರೀತಿ ಎಂದು ಭಾವುಕರಾಗುತ್ತಿದ್ದಾರೆ. ಇದು ಕರ್ನಾಟಕದ ಯಾವುದೋ ಬಸ್​ಸ್ಟ್ಯಾಂಡಿನಲ್ಲಿ ಸೆರೆಹಿಡಿದ ವಿಡಿಯೋ.

ಜಿಂದಗೀ ಗುಲ್ಝಾರ್ ಹೈ ಎಂಬ ಅಕೌಂಟ್​ನಿಂದ ಈ ವಿಡಿಯೋ ಟ್ವೀಟ್ ಆಗಿದೆ. ಅತ್ಯಂತ ಪ್ರೀತಿಯಿಂದ ಈತ ಈಕೆಯನ್ನು ತೊಡೆಯ ಮೇಲೆ ಮಲಗಿಸಿಕೊಂಡಿದ್ದಾರೆ. ಹೊರಗಿನ ಗದ್ದಲ, ಬೆಳಕು ಆಕೆಗೆ ತೊಂದರೆ ಉಂಟುಮಾಡದಂತೆ ಆಕೆಯನ್ನು ಅತ್ಯಂತ ಕಾಳಜಿಯಿಂದ ನೋಡಿಕೊಳ್ಳುತ್ತಿದ್ದಾರೆ.

ಈ ವಿಡಿಯೋ ಅನ್ನು 58,000ಕ್ಕಿಂತಲೂ ಹೆಚ್ಚು ಜನ ನೋಡಿದ್ಧಾರೆ. 4,700 ಜನರು ಇಷ್ಟಪಟ್ಟಿದ್ದಾರೆ. ದಾಂಪತ್ಯವೆಂದರೆ ಇದು ಎಂದು ಅನೇಕರು ಹೇಳಿದ್ದಾರೆ. ಶ್ರದ್ಧಾ ಪ್ರಕರಣದ ನಂತರ ಈ ದೃಶ್ಯ ನ್ಯೂಸ್​ ಚಾನೆಲ್​ನವರಿಗೆ ಕಾಣುತ್ತಿಲ್ಲವೆ? ಎಂದಿದ್ದಾರೆ ಇನ್ನೂ ಒಬ್ಬರು. ಇದು ಕರ್ನಾಟಕದ ಬಸ್​ ನಿಲ್ದಾಣದಲ್ಲಿ ಸೆರೆಹಿಡಿದ ದೃಶ್ಯ ಎಂದಿದ್ದಾರೆ ಯಾರೋ ಒಬ್ಬರು. ಇದು ಶತಮಾನದ ವಿಡಿಯೋ ಎಂದಿದ್ದಾರೆ ಮಗದೊಬ್ಬರು. ಸಂಬಂಧವೆಂದರೆ ಇದೇ ಎಂದಿದ್ದಾರೆ ಮತ್ತೂ ಒಬ್ಬರು. ಪ್ರೀತಿಯ ಮೇಲೆ ನಂಬಿಕೆಯನ್ನು ಕಳೆದುಕೊಳ್ಳದಂತೆ ಮಾಡುತ್ತಿದೆ ಈ ವಿಡಿಯೋ ಎಂದಿದ್ದಾರೆ.

ಇದನ್ನು ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:42 pm, Thu, 24 November 22

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!