AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನಿಜವಾದ ಪ್ರೀತಿ ಎನ್ನುತ್ತಿದ್ದಾರೆ ನೆಟ್ಟಿಗರು, ನೋಡಿ ವೈರಲ್​ ವಿಡಿಯೋ

Love and Care : ಇದು ಕರ್ನಾಟಕದ ಯಾವುದೋ ಬಸ್​ಸ್ಟ್ಯಾಂಡಿನಲ್ಲಿ ಸೆರೆಹಿಡಿಯಲಾದ ದೃಶ್ಯ. ಅನಾರೋಗ್ಯಕ್ಕೆ ತುತ್ತಾದ ಆಕೆಯನ್ನು ತೊಡೆಯ ಮೇಲೆ ಮಲಗಿಸಿಕೊಂಡ ಈ ವ್ಯಕ್ತಿಯ ಮುಖ ನೋಡಿದರೆ ಸಾಕು ಪ್ರೀತಿಯ ಆಳ ಅರ್ಥವಾಗುತ್ತದೆ.

ಇದು ನಿಜವಾದ ಪ್ರೀತಿ ಎನ್ನುತ್ತಿದ್ದಾರೆ ನೆಟ್ಟಿಗರು, ನೋಡಿ ವೈರಲ್​ ವಿಡಿಯೋ
ಮಹಿಳೆಯನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡ ಪುರುಷ
TV9 Web
| Edited By: |

Updated on:Nov 24, 2022 | 3:42 PM

Share

Viral Video : ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ತನ್ನ ತೊಡೆಯ ಮೇಲೆ ಈ ಮಹಿಳೆಯನ್ನು ಈ ವ್ಯಕ್ತಿ ಮಲಗಿಸಿಕೊಂಡಿದ್ದಾರೆ. ಬಹುಶಃ ಆರೋಗ್ಯ ಸಮಸ್ಯೆ ಇದ್ದಿರಬಹುದು, ಆಕೆಯ ತಲೆಯನ್ನು ತಟ್ಟುತ್ತಿರುವ ಈ ವ್ಯಕ್ತಿಯ ಮುಖದಲ್ಲಿ ಕಾಳಜಿ ಸ್ಫುರಿಸುತ್ತಿದೆ ಜೊತೆಗೆ ನೋವೂ ಮಡುಗಟ್ಟಿದಂತಿದೆ. ನೆಟ್ಟಿಗರು ಈ ವಿಡಿಯೋ ನೋಡಿ ಇದು ನಿಜವಾದ ಪ್ರೀತಿ ಎಂದು ಭಾವುಕರಾಗುತ್ತಿದ್ದಾರೆ. ಇದು ಕರ್ನಾಟಕದ ಯಾವುದೋ ಬಸ್​ಸ್ಟ್ಯಾಂಡಿನಲ್ಲಿ ಸೆರೆಹಿಡಿದ ವಿಡಿಯೋ.

ಜಿಂದಗೀ ಗುಲ್ಝಾರ್ ಹೈ ಎಂಬ ಅಕೌಂಟ್​ನಿಂದ ಈ ವಿಡಿಯೋ ಟ್ವೀಟ್ ಆಗಿದೆ. ಅತ್ಯಂತ ಪ್ರೀತಿಯಿಂದ ಈತ ಈಕೆಯನ್ನು ತೊಡೆಯ ಮೇಲೆ ಮಲಗಿಸಿಕೊಂಡಿದ್ದಾರೆ. ಹೊರಗಿನ ಗದ್ದಲ, ಬೆಳಕು ಆಕೆಗೆ ತೊಂದರೆ ಉಂಟುಮಾಡದಂತೆ ಆಕೆಯನ್ನು ಅತ್ಯಂತ ಕಾಳಜಿಯಿಂದ ನೋಡಿಕೊಳ್ಳುತ್ತಿದ್ದಾರೆ.

ಈ ವಿಡಿಯೋ ಅನ್ನು 58,000ಕ್ಕಿಂತಲೂ ಹೆಚ್ಚು ಜನ ನೋಡಿದ್ಧಾರೆ. 4,700 ಜನರು ಇಷ್ಟಪಟ್ಟಿದ್ದಾರೆ. ದಾಂಪತ್ಯವೆಂದರೆ ಇದು ಎಂದು ಅನೇಕರು ಹೇಳಿದ್ದಾರೆ. ಶ್ರದ್ಧಾ ಪ್ರಕರಣದ ನಂತರ ಈ ದೃಶ್ಯ ನ್ಯೂಸ್​ ಚಾನೆಲ್​ನವರಿಗೆ ಕಾಣುತ್ತಿಲ್ಲವೆ? ಎಂದಿದ್ದಾರೆ ಇನ್ನೂ ಒಬ್ಬರು. ಇದು ಕರ್ನಾಟಕದ ಬಸ್​ ನಿಲ್ದಾಣದಲ್ಲಿ ಸೆರೆಹಿಡಿದ ದೃಶ್ಯ ಎಂದಿದ್ದಾರೆ ಯಾರೋ ಒಬ್ಬರು. ಇದು ಶತಮಾನದ ವಿಡಿಯೋ ಎಂದಿದ್ದಾರೆ ಮಗದೊಬ್ಬರು. ಸಂಬಂಧವೆಂದರೆ ಇದೇ ಎಂದಿದ್ದಾರೆ ಮತ್ತೂ ಒಬ್ಬರು. ಪ್ರೀತಿಯ ಮೇಲೆ ನಂಬಿಕೆಯನ್ನು ಕಳೆದುಕೊಳ್ಳದಂತೆ ಮಾಡುತ್ತಿದೆ ಈ ವಿಡಿಯೋ ಎಂದಿದ್ದಾರೆ.

ಇದನ್ನು ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:42 pm, Thu, 24 November 22

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ