AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನಿಜವಾದ ಪ್ರೀತಿ ಎನ್ನುತ್ತಿದ್ದಾರೆ ನೆಟ್ಟಿಗರು, ನೋಡಿ ವೈರಲ್​ ವಿಡಿಯೋ

Love and Care : ಇದು ಕರ್ನಾಟಕದ ಯಾವುದೋ ಬಸ್​ಸ್ಟ್ಯಾಂಡಿನಲ್ಲಿ ಸೆರೆಹಿಡಿಯಲಾದ ದೃಶ್ಯ. ಅನಾರೋಗ್ಯಕ್ಕೆ ತುತ್ತಾದ ಆಕೆಯನ್ನು ತೊಡೆಯ ಮೇಲೆ ಮಲಗಿಸಿಕೊಂಡ ಈ ವ್ಯಕ್ತಿಯ ಮುಖ ನೋಡಿದರೆ ಸಾಕು ಪ್ರೀತಿಯ ಆಳ ಅರ್ಥವಾಗುತ್ತದೆ.

ಇದು ನಿಜವಾದ ಪ್ರೀತಿ ಎನ್ನುತ್ತಿದ್ದಾರೆ ನೆಟ್ಟಿಗರು, ನೋಡಿ ವೈರಲ್​ ವಿಡಿಯೋ
ಮಹಿಳೆಯನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡ ಪುರುಷ
TV9 Web
| Edited By: ಶ್ರೀದೇವಿ ಕಳಸದ|

Updated on:Nov 24, 2022 | 3:42 PM

Share

Viral Video : ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ತನ್ನ ತೊಡೆಯ ಮೇಲೆ ಈ ಮಹಿಳೆಯನ್ನು ಈ ವ್ಯಕ್ತಿ ಮಲಗಿಸಿಕೊಂಡಿದ್ದಾರೆ. ಬಹುಶಃ ಆರೋಗ್ಯ ಸಮಸ್ಯೆ ಇದ್ದಿರಬಹುದು, ಆಕೆಯ ತಲೆಯನ್ನು ತಟ್ಟುತ್ತಿರುವ ಈ ವ್ಯಕ್ತಿಯ ಮುಖದಲ್ಲಿ ಕಾಳಜಿ ಸ್ಫುರಿಸುತ್ತಿದೆ ಜೊತೆಗೆ ನೋವೂ ಮಡುಗಟ್ಟಿದಂತಿದೆ. ನೆಟ್ಟಿಗರು ಈ ವಿಡಿಯೋ ನೋಡಿ ಇದು ನಿಜವಾದ ಪ್ರೀತಿ ಎಂದು ಭಾವುಕರಾಗುತ್ತಿದ್ದಾರೆ. ಇದು ಕರ್ನಾಟಕದ ಯಾವುದೋ ಬಸ್​ಸ್ಟ್ಯಾಂಡಿನಲ್ಲಿ ಸೆರೆಹಿಡಿದ ವಿಡಿಯೋ.

ಜಿಂದಗೀ ಗುಲ್ಝಾರ್ ಹೈ ಎಂಬ ಅಕೌಂಟ್​ನಿಂದ ಈ ವಿಡಿಯೋ ಟ್ವೀಟ್ ಆಗಿದೆ. ಅತ್ಯಂತ ಪ್ರೀತಿಯಿಂದ ಈತ ಈಕೆಯನ್ನು ತೊಡೆಯ ಮೇಲೆ ಮಲಗಿಸಿಕೊಂಡಿದ್ದಾರೆ. ಹೊರಗಿನ ಗದ್ದಲ, ಬೆಳಕು ಆಕೆಗೆ ತೊಂದರೆ ಉಂಟುಮಾಡದಂತೆ ಆಕೆಯನ್ನು ಅತ್ಯಂತ ಕಾಳಜಿಯಿಂದ ನೋಡಿಕೊಳ್ಳುತ್ತಿದ್ದಾರೆ.

ಈ ವಿಡಿಯೋ ಅನ್ನು 58,000ಕ್ಕಿಂತಲೂ ಹೆಚ್ಚು ಜನ ನೋಡಿದ್ಧಾರೆ. 4,700 ಜನರು ಇಷ್ಟಪಟ್ಟಿದ್ದಾರೆ. ದಾಂಪತ್ಯವೆಂದರೆ ಇದು ಎಂದು ಅನೇಕರು ಹೇಳಿದ್ದಾರೆ. ಶ್ರದ್ಧಾ ಪ್ರಕರಣದ ನಂತರ ಈ ದೃಶ್ಯ ನ್ಯೂಸ್​ ಚಾನೆಲ್​ನವರಿಗೆ ಕಾಣುತ್ತಿಲ್ಲವೆ? ಎಂದಿದ್ದಾರೆ ಇನ್ನೂ ಒಬ್ಬರು. ಇದು ಕರ್ನಾಟಕದ ಬಸ್​ ನಿಲ್ದಾಣದಲ್ಲಿ ಸೆರೆಹಿಡಿದ ದೃಶ್ಯ ಎಂದಿದ್ದಾರೆ ಯಾರೋ ಒಬ್ಬರು. ಇದು ಶತಮಾನದ ವಿಡಿಯೋ ಎಂದಿದ್ದಾರೆ ಮಗದೊಬ್ಬರು. ಸಂಬಂಧವೆಂದರೆ ಇದೇ ಎಂದಿದ್ದಾರೆ ಮತ್ತೂ ಒಬ್ಬರು. ಪ್ರೀತಿಯ ಮೇಲೆ ನಂಬಿಕೆಯನ್ನು ಕಳೆದುಕೊಳ್ಳದಂತೆ ಮಾಡುತ್ತಿದೆ ಈ ವಿಡಿಯೋ ಎಂದಿದ್ದಾರೆ.

ಇದನ್ನು ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:42 pm, Thu, 24 November 22

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’