AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೇದಾರನಾಥ ಶಿವಲಿಂಗದ ಮೇಲೆ ನೋಟುಗಳನ್ನು ತೂರಿದ ಮಹಿಳೆಯ ವಿರುದ್ಧ ಪ್ರಕರಣ ದಾಖಲು

Kedarnath : ''ಎಲ್ಲ ತಪ್ಪೂ ಪುರೋಹಿತರದ್ದೇ. ಅವರು ಹಣಕ್ಕಾಗಿ ಹಪಹಪಿಸುತ್ತಾರೆ. ಹಣಕ್ಕಾಗಿಯೇ ಇಂಥದಕ್ಕೆಲ್ಲ ಅನುಮತಿ ನೀಡುತ್ತಾರೆ, ಅವರಿಗೆ ನಾಚಿಕೆಯಾಗಬೇಕು. ಹಾಗೆಯೇ ಈಕೆಯನ್ನೂ ಬಂಧಿಸಬೇಕು'' ನೆಟ್ಟಿಗರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Viral Video: ಕೇದಾರನಾಥ ಶಿವಲಿಂಗದ ಮೇಲೆ ನೋಟುಗಳನ್ನು ತೂರಿದ ಮಹಿಳೆಯ ವಿರುದ್ಧ ಪ್ರಕರಣ ದಾಖಲು
ಕೇದಾರನಾಥದ ಶಿವಲಿಂಗದ ಮೇಲೆ ನೋಟುಗಳನ್ನು ತೂರುತ್ತಿರುವ ಮಹಿಳೆ
TV9 Web
| Edited By: |

Updated on:Jun 20, 2023 | 12:57 PM

Share

Shivling : ಕೇದಾರನಾಥ (Kedarnath) ದೇಸ್ಥಾನದ ಗರ್ಭಗುಡಿಯಲ್ಲಿರುವ ಶಿವಲಿಂಗದ ಮೇಲೆ ಮಹಿಳೆಯೊಬ್ಬಳು ನೋಟುಗಳನ್ನು ತೂರುತ್ತಿರುವ ದೃಶ್ಯ ಇದೀಗ ವೈರಲ್ ಆಗಿದೆ. ಬಿಳಿ ಸೀರೆ ಉಟ್ಟಿರುವ ಈಕೆ ಶಿವಲಿಂಗದ ಮೇಲೆ  ಆಕ್ಷೇಪಾರ್ಹ ರೀತಿಯಲ್ಲಿ ನೋಟುಗಳನ್ನು ಎಸೆಯುತ್ತಿರುವಾಗ ಉಳಿದವರು ಪ್ರಾರ್ಥನೆಯಲ್ಲಿ ತಲ್ಲೀನರಾಗಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ಮಹಿಳೆಯ ವಿರುದ್ಧ ದೇವಸ್ಥಾನದ ಆಡಳಿತ ಮಂಡಳಿಯು ಸೋನ್​ಪ್ರಯಾಗ ಪೊಲೀಸ್​ ಠಾಣೆಯಲ್ಲಿ ದೂರು ಸಲ್ಲಿಸಿದೆ. ತಕ್ಷಣವೇ ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದೆ.

ದೂರಿನನ್ವಯ ಪೊಲೀಸರು ಐಪಿಸಿ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಘಟನೆಯ ಬಗ್ಗೆ ತನಿಖೆ ಶುರು ಮಾಡಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಮಹಿಳೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಉತ್ತರಾಖಂಡ ಪೊಲೀಸರು ಕೂಡ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ಈ ಮಹಿಳೆಯು ಧಾರ್ಮಿಕ ಭಾವನೆಗಳನ್ನು ಗಾಸಿಗೊಳಿಸಿದ್ದಕ್ಕಾಗಿ ಆಕೆಯ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ : Viral Video: ಈ ಸಾಹಸಕ್ಕೆ ಕಾರಣರಾದ ರೈಲ್ವೇ ಸಚಿವರಿಗೆ ಬಹುಮಾನ ಕೊಡಬೇಕಲ್ಲ, ಯಾರಲ್ಲಿ?

ದೇವಾಲಯದೊಳಗೆ ಛಾಯಾಗ್ರಹಣವನ್ನು ನಿಷೇಧಿಸಲಾಗಿದೆ. ಆದರೂ ಈ ವಿಡಿಯೋ ಅನ್ನು ವ್ಯಕ್ತಿಯೊಬ್ಬರು ರೆಕಾರ್ಡ್ ಮಾಡಿದ್ದಾರೆ. ಎಲ್ಲ ತಪ್ಪೂ ಪುರೋಹಿತರದ್ದೇ. ಅವರು ಹಣಕ್ಕಾಗಿ ಹಪಹಪಿಸುತ್ತಾರೆ. ಹಣಕ್ಕಾಗಿಯೇ ಇಂಥದಕ್ಕೆಲ್ಲ ಅನುಮತಿ ನೀಡುತ್ತಾರೆ, ಅವರಿಗೆ ನಾಚಿಕೆಯಾಗಬೇಕು. ಹಾಗೆಯೇ ಈಕೆಯನ್ನೂ ಬಂಧಿಸಬೇಕು ಎಂದು ಒಬ್ಬರು ಕಿಡಿಕಾರಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:56 pm, Tue, 20 June 23

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ