Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೇದಾರನಾಥ ಶಿವಲಿಂಗದ ಮೇಲೆ ನೋಟುಗಳನ್ನು ತೂರಿದ ಮಹಿಳೆಯ ವಿರುದ್ಧ ಪ್ರಕರಣ ದಾಖಲು

Kedarnath : ''ಎಲ್ಲ ತಪ್ಪೂ ಪುರೋಹಿತರದ್ದೇ. ಅವರು ಹಣಕ್ಕಾಗಿ ಹಪಹಪಿಸುತ್ತಾರೆ. ಹಣಕ್ಕಾಗಿಯೇ ಇಂಥದಕ್ಕೆಲ್ಲ ಅನುಮತಿ ನೀಡುತ್ತಾರೆ, ಅವರಿಗೆ ನಾಚಿಕೆಯಾಗಬೇಕು. ಹಾಗೆಯೇ ಈಕೆಯನ್ನೂ ಬಂಧಿಸಬೇಕು'' ನೆಟ್ಟಿಗರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Viral Video: ಕೇದಾರನಾಥ ಶಿವಲಿಂಗದ ಮೇಲೆ ನೋಟುಗಳನ್ನು ತೂರಿದ ಮಹಿಳೆಯ ವಿರುದ್ಧ ಪ್ರಕರಣ ದಾಖಲು
ಕೇದಾರನಾಥದ ಶಿವಲಿಂಗದ ಮೇಲೆ ನೋಟುಗಳನ್ನು ತೂರುತ್ತಿರುವ ಮಹಿಳೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Jun 20, 2023 | 12:57 PM

Shivling : ಕೇದಾರನಾಥ (Kedarnath) ದೇಸ್ಥಾನದ ಗರ್ಭಗುಡಿಯಲ್ಲಿರುವ ಶಿವಲಿಂಗದ ಮೇಲೆ ಮಹಿಳೆಯೊಬ್ಬಳು ನೋಟುಗಳನ್ನು ತೂರುತ್ತಿರುವ ದೃಶ್ಯ ಇದೀಗ ವೈರಲ್ ಆಗಿದೆ. ಬಿಳಿ ಸೀರೆ ಉಟ್ಟಿರುವ ಈಕೆ ಶಿವಲಿಂಗದ ಮೇಲೆ  ಆಕ್ಷೇಪಾರ್ಹ ರೀತಿಯಲ್ಲಿ ನೋಟುಗಳನ್ನು ಎಸೆಯುತ್ತಿರುವಾಗ ಉಳಿದವರು ಪ್ರಾರ್ಥನೆಯಲ್ಲಿ ತಲ್ಲೀನರಾಗಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ಮಹಿಳೆಯ ವಿರುದ್ಧ ದೇವಸ್ಥಾನದ ಆಡಳಿತ ಮಂಡಳಿಯು ಸೋನ್​ಪ್ರಯಾಗ ಪೊಲೀಸ್​ ಠಾಣೆಯಲ್ಲಿ ದೂರು ಸಲ್ಲಿಸಿದೆ. ತಕ್ಷಣವೇ ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದೆ.

ದೂರಿನನ್ವಯ ಪೊಲೀಸರು ಐಪಿಸಿ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಘಟನೆಯ ಬಗ್ಗೆ ತನಿಖೆ ಶುರು ಮಾಡಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಮಹಿಳೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಉತ್ತರಾಖಂಡ ಪೊಲೀಸರು ಕೂಡ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ಈ ಮಹಿಳೆಯು ಧಾರ್ಮಿಕ ಭಾವನೆಗಳನ್ನು ಗಾಸಿಗೊಳಿಸಿದ್ದಕ್ಕಾಗಿ ಆಕೆಯ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ : Viral Video: ಈ ಸಾಹಸಕ್ಕೆ ಕಾರಣರಾದ ರೈಲ್ವೇ ಸಚಿವರಿಗೆ ಬಹುಮಾನ ಕೊಡಬೇಕಲ್ಲ, ಯಾರಲ್ಲಿ?

ದೇವಾಲಯದೊಳಗೆ ಛಾಯಾಗ್ರಹಣವನ್ನು ನಿಷೇಧಿಸಲಾಗಿದೆ. ಆದರೂ ಈ ವಿಡಿಯೋ ಅನ್ನು ವ್ಯಕ್ತಿಯೊಬ್ಬರು ರೆಕಾರ್ಡ್ ಮಾಡಿದ್ದಾರೆ. ಎಲ್ಲ ತಪ್ಪೂ ಪುರೋಹಿತರದ್ದೇ. ಅವರು ಹಣಕ್ಕಾಗಿ ಹಪಹಪಿಸುತ್ತಾರೆ. ಹಣಕ್ಕಾಗಿಯೇ ಇಂಥದಕ್ಕೆಲ್ಲ ಅನುಮತಿ ನೀಡುತ್ತಾರೆ, ಅವರಿಗೆ ನಾಚಿಕೆಯಾಗಬೇಕು. ಹಾಗೆಯೇ ಈಕೆಯನ್ನೂ ಬಂಧಿಸಬೇಕು ಎಂದು ಒಬ್ಬರು ಕಿಡಿಕಾರಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:56 pm, Tue, 20 June 23

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್