AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಣವನ್ನು ಲೆಕ್ಕಿಸದೆ ರೈಲ್ವೇ ಹಳಿಗಳ ಮಧ್ಯೆ ಮಲಗಿದ ಮಹಿಳೆ; ಹುಚ್ಚು ಸಾಹಸವೆಂದ ನೆಟ್ಟಿಗರು

ಏಪ್ರಿಲ್ 12 ರಂದು ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು ಟ್ವಿಟರ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದು ಸುಮಾರು 94,000 ವೀಕ್ಷಣೆ ಪಡೆದಿದ್ದು, ಸುಮಾರು 3,300 ಲೈಕ್‌ಗಳೊಂದಿಗೆ ವೈರಲ್ ಆಗುತ್ತಿದೆ.

ಪ್ರಾಣವನ್ನು ಲೆಕ್ಕಿಸದೆ ರೈಲ್ವೇ ಹಳಿಗಳ ಮಧ್ಯೆ ಮಲಗಿದ ಮಹಿಳೆ; ಹುಚ್ಚು ಸಾಹಸವೆಂದ ನೆಟ್ಟಿಗರು
ರೈಲ್ವೇ ಹಳಿಗಳ ಮಧ್ಯೆ ಮಲಗಿದ ಮಹಿಳೆ
TV9 Web
| Edited By: |

Updated on: Apr 14, 2022 | 8:38 PM

Share

ಹರಿಯಾಣ: ನಾವು ನೀವು ರೈಲ್ವೆ ಹಳಿಯನ್ನು ದಾಟುತ್ತಿರುವಾಗ ಒಂದು ವೇಳೆ ಅದೇ ಮಾರ್ಗದಲ್ಲಿ ರೈಲು (Train) ಬಂದರೇ ನಾವೇನು ಮಾಡುತ್ತೇವೆ? ಸುರಕ್ಷಿತವಾಗಿ ಬದಿಗೆ ಓಡಿ ಹೋಗಿ ನಮ್ಮ ಪ್ರಾಣವನ್ನು ಉಳಿಸಿಕೊಳ್ಳುತ್ತೇವೆ. ಆದರೆ ಇಲ್ಲೊಬ್ಬಳು ಮಹಿಳೆ ರೈಲು ಬರುತ್ತಿರುವುದು ಗೊತ್ತಿದ್ದರೂ ರೈಲಿನ ಕೆಳಗೆ ಮಲಗಿರುವಂತಹ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ವಿಡಿಯೋವನ್ನು ನೋಡಿದ ನೆಟ್ಟಿಗರು ಇದು ಹುಚ್ಚು ಸಾಹಸವೆನ್ನುತ್ತಿದ್ದಾರೆ. ಇದು ಹರಿಯಾಣದ ರೋಹ್ಟಕ್‌ ವಿಡಿಯೋ ಎನ್ನಲಾಗುತ್ತಿದ್ದು, ಏಪ್ರಿಲ್ 12 ರಂದು ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು ಟ್ವಿಟರ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದು ಸುಮಾರು 94,000 ವೀಕ್ಷಣೆ ಪಡೆದಿದ್ದು, ಸುಮಾರು 3,300 ಲೈಕ್‌ಗಳೊಂದಿಗೆ ವೈರಲ್ ಆಗುತ್ತಿದೆ.

ಮಹಿಳೆಯೊಂದಿಗೆ ಮಾತನಾಡುತ್ತಿರುವುದನ್ನು ಆಲಿಸಿದ ಪುರುಷನೊಬ್ಬ ನಿಲ್ದಾಣದಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿರುವಂತೆ ಕಾಣುತ್ತದೆ. ವಿಡಿಯೋ ಪ್ರಾರಂಭವಾಗುತ್ತಿದ್ದಂತೆ, ಗೂಡ್ಸ್ ರೈಲು ವೇಗದಲ್ಲಿ ಹಾದುಹೋಗುವುದನ್ನು ನಾವು ನೋಡುತ್ತೇವೆ. ರೈಲು ಹೋದ ನಂತರ, ಕೆಂಪು ಕುರ್ತಾ ಮತ್ತು ಮುಖಕ್ಕೆ ಸ್ಕಾರ್ಫ್ ಧರಿಸಿರುವ ಮಹಿಳೆಯನ್ನು ನಾವು ನೋಡುತ್ತೇವೆ. ರೈಲು ತನ್ನ ಮೇಲೆ ಹಾದು ಹೋಗುತ್ತಿರುವುದನ್ನು ಕಂಡು ಯಾವುದೇ ಭಯವಿಲ್ಲದೆ ಮಹಿಳೆ ರೈಲ್ವೆ ಹಳಿಗಳ ಮೇಲೆ ಮಲಗಿದ್ದಾಳೆ. ರೈಲು ಹೊರಟ ತಕ್ಷಣ, ಮಹಿಳೆ ಹಳಿಗಳ ಮೇಲೆ ಎದ್ದು ಕುಳಿತುಕೊಳ್ಳುತ್ತಾಳೆ. ಸಾಮಾನ್ಯವಾಗಿ ಏನೂ ಆಗಿಲ್ಲ ಎಂಬಂತೆ ಯಾರೊಂದಿಗೊ ಫೋನ್​ನಲ್ಲಿ ಮಾತನಾಡುತ್ತ ಟ್ರ್ಯಾಕ್‌ಗಳಿಂದ ನಡೆದು ಪ್ಲಾಟ್‌ಫಾರ್ಮ್‌ಗೆ ಬರುತ್ತಾಳೆ.

ಫೋನ್​ನಲ್ಲಿ ಹರಟೆ ಹೊಡೆಯುವುದು ಹೆಚ್ಚು ಮುಖ್ಯ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಟ್ವೀಟ್ ಮಾಡಲಾಗಿದೆ. ಇದು ನೆಟ್ಟಿಗರನ್ನು ದಿಗ್ಭ್ರಮೆಗೊಳಿಸಿದೆ. ಅವರಲ್ಲಿ ಹಲವರು ವಿಡಿಯೋವನ್ನು ಉಲ್ಲಾಸಕರವಾಗಿ ನೋಡಿದರೆ, ಮತ್ತೆ ಕೆಲ ಟ್ವಿಟ್ಟರ್ ಬಳಕೆದಾರರು ಮಹಿಳೆ ಪ್ರತಿದಿನ ಹೀಗೆಯೇ ವರ್ತಿಸುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:

Viral Video: ವಧುವಿನ ವೇಷದಲ್ಲಿ ಕಚಾ ಬಾದಮ್ ಹಾಡು ಹಾಡಿದ ಇಂಟರ್ನೆಟ್ ಸೆನ್ಸೇಷನ್ ರಾಣು ಮಂಡಲ್

ಮಿಯಾಮಿಯಲ್ಲಿ ಅಕ್ವೇರಿಯಂ ಪ್ರದರ್ಶನದ ವೇಳೆ ತರಬೇತುದಾರನ ಮೇಲೆ ದಾಳಿ ಮಾಡಿದ ಡಾಲ್ಫಿನ್; ಇಲ್ಲಿದೆ ವೈರಲ್ ವಿಡಿಯೋ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು