AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಭ್ಯ ವರ್ತನೆ ತೋರಿದ್ದಕ್ಕೆ ಸ್ಕೂಟರ್ ಎತ್ತಿ ಚರಂಡಿಗೆ ಎಸೆದ ಮಹಿಳೆ; ನೆಟ್ಟಿಗರಿಂದ ಶ್ಲಾಘನೆ

ಗುಹಾವಟಿಯಲ್ಲಿ ಭಾವನಾ ಕಶ್ಯಪ್ ನಿಂತಿದ್ದರು. ಅಡ್ರೆಸ್ ಕೇಳುವ ನೆಪದಲ್ಲಿ ಬಂದ ಅಪರಿಚಿತ ವ್ಯಕ್ತಿ ಅಸಭ್ಯವರ್ತನೆ ತೋರಿದ್ದಾನೆ.

ಅಸಭ್ಯ ವರ್ತನೆ ತೋರಿದ್ದಕ್ಕೆ ಸ್ಕೂಟರ್ ಎತ್ತಿ ಚರಂಡಿಗೆ ಎಸೆದ ಮಹಿಳೆ; ನೆಟ್ಟಿಗರಿಂದ ಶ್ಲಾಘನೆ
ಅಸಭ್ಯ ವರ್ತನೆ ತೋರಿದ್ದಕ್ಕೆ ಸ್ಕೂಟರ್ ಎತ್ತಿ ಚರಂಡಿಗೆ ಎಸೆದ ಮಹಿಳೆ
TV9 Web
| Edited By: |

Updated on: Aug 02, 2021 | 10:49 AM

Share

ಮಹಿಳೆಯರು ಅವಮಾನ, ಲೈಂಗಿಕ ದೌರ್ಜನ್ಯ ಈ ರೀತಿಯ ಕೃತ್ಯಗಳಿಗೆ ಬಲಿಯಾಗುತ್ತಲೇ ಇದ್ದಾರೆ. ಅವಮಾನಿಸಿದ ವ್ಯಕ್ತಿಗೆ ಇರ್ಲೋರ್ವ ಮಹಿಳೆ ತಕ್ಕ ಪಾಠ ಕಲಿಸಿದ್ದಾಳೆ. ಘಟನೆ ಅಸ್ಸಾಂನಲ್ಲಿ(Assam) ನಡೆದಿದೆ. ಫೊಟೋದ ಜತೆಗೆ, ನಡೆದ ಘಟನೆಯನ್ನು ಸಾಮಾಜಿಕ ಜಾಲತಾಣದಲ್ಲಿ(Social Media) ಹೇಳುತ್ತಿದ್ದಂತೆ ನೆಟ್ಟಿಗರಿಂದ ಶ್ಲಾಘನೆ ವ್ಯಕ್ತವಾಗಿದೆ.

ಗುಹಾವಟಿಯಲ್ಲಿ ಭಾವನಾ ಕಶ್ಯಪ್ ನಿಂತಿದ್ದರು. ಅಡ್ರೆಸ್ ಕೇಳುವ ನೆಪದಲ್ಲಿ ಬಂದ ಅಪರಿಚಿತ ವ್ಯಕ್ತಿ ಅಸಭ್ಯವರ್ತನೆ ತೋರಿದ್ದಾನೆ. ನನಗೆ ಅಡ್ರೆಸ್ ಕುರಿತಾದ ಮಾಹಿತಿ ಇಲ್ಲ ಎಂದು ಹೇಳುತ್ತಿದ್ದಂತೆಯೇ ಮಹಿಳೆಯ ಸ್ತನ ಭಾಗವನ್ನು ಹಿಡಿದ್ದಾನೆ. ಮಹಿಳೆಯೊಂದಿಗೆ ಅಸಭ್ಯದಿಂದ ವರ್ತಿಸಿದ ವ್ಯಕ್ತಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.

ವ್ಯಕ್ತಿಯು ತಪ್ಪಿಸಿಕೊಳ್ಳಲು ನೋಡುತ್ತಿದ್ದಂತೆ, ಮಹಿಳೆ ಆತನನ್ನು ತಡೆ ಹಿಡಿದು ಸ್ಕೂಟರ್​ನ ಹಿಂಭಾಗವನ್ನು ಗಟ್ಟಿಯಾಗಿ ಎಳೆದು ಹಿಡಿದು ನಿಂತಿದ್ದಾಳೆ. ಇಬ್ಬರ ನಡುವೆ ಜಗಳ ಪ್ರಾರಂಭವಾಗಿದೆ. ಆತನ ಸ್ಕೂಟರ್​ಅನ್ನು ಎಳೆದು ತಂದು ಹತ್ತಿರದ ಚರಂಡಿಗೆ ಎಸೆದಿದ್ದಾಳೆ. ನಡೆದ ಎಲ್ಲಾ ಘಟನೆಯನ್ನು ಮಹಿಳೆ ಫೇಸ್ಬುಕ್​ನಲ್ಲಿ ವಿವರಿಸಿದ್ದಾಳೆ.

ಪೊಲೀಸರಿಗೆ ವಿಷಯ ತಿಳಿಯುತ್ತಿದ್ದಂತೆಯೇ, ಕೂಡಲೇ ಅಸ್ಸಾಂ ಪೊಲೀಸರು ಸ್ಥಳಕ್ಕೆ ಆಗಮಿಸಿ ಆತನನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಎಫ್ಐಆರ್ ದಾಖಲಾಗಿದೆ. ವ್ಯಕ್ತಿಯ ಹೆಸರು ಮಧುಸನ ರಾಜಕುಮಾರ್. ಫೊಟೋದ ಜತೆಗೆ ಕೆಲವು ವಿಡಿಯೋಗಳನ್ನು ಮಹಿಳೆ ಫೇಸ್​ಬುಕ್​ನಲ್ಲಿ ಹಂಚಿಕೊಂಡಿದ್ದಾಳೆ.

ಭಾವನಾ ಕಶ್ಯಪ್ ಅವರ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವ್ಯಕ್ತಿಯ ಅಸಭ್ಯ ವರ್ತನೆಗೆ ನೆಟ್ಟಿಗರು ಕೋಪಗೊಂಡಿದ್ದಾರೆ. ಏತನ್ಮಧ್ಯೆ, ಮಹಿಳೆಯ ಧೈರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ನಿಮ್ಮನ್ನು ನೋಡಿ ತುಂಬಾ ಹೆಮ್ಮೆ ಅನಿಸುತ್ತಿದೆ ಎಂದು ಓರ್ವರು ಹೇಳಿದ್ದಾರೆ.

ಇದನ್ನೂ ಓದಿ:

ವಿಧವಾ ವೇತನ ಕೇಳಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆ ಆರೋಪ; ಗ್ರೇಡ್ 2 ತಹಶೀಲ್ದಾರ್​ಗೆ ಬಿತ್ತು ಗೂಸಾ

ಅಸಭ್ಯ ವರ್ತನೆ ತೋರಿದ ಮ್ಯಾನೇಜರ್​ಗೆ ಕಚೇರಿಯಲ್ಲೇ ಬಾರಿಸಿದ ಮಹಿಳೆ; ವಿಡಿಯೋ ವೈರಲ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ