AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತನ್ನ ಒಡತಿಯ ಜನ್ಮದಿನಕ್ಕೆ ಚಪ್ಪಾಳೆ ತಟ್ಟಿ ಶುಭಾಶಯ ಹೇಳಿದ ಶ್ವಾನ; ಮುದ್ದಾದ ವಿಡಿಯೋ ಇಲ್ಲಿದೆ

Trending Video: ಪ್ರೀತಿಯಿಂದ ಸಾಕಿದ ಶ್ವಾನವೊಂದು ನಿಮ್ಮ ಹುಟ್ಟುಹಬ್ಬಕ್ಕೆ ಕೈತಟ್ಟಿ ಶುಭಾಶಯ ಸಲ್ಲಿಸಿದರೆ ಹೇಗಿದ್ದೀತು? ಅಂಥದ್ದೇ ಒಂದು ಅಪರೂಪದ ವಿಡಿಯೋ ಇಲ್ಲಿದೆ. ನೋಡಿ.

Viral Video: ತನ್ನ ಒಡತಿಯ ಜನ್ಮದಿನಕ್ಕೆ ಚಪ್ಪಾಳೆ ತಟ್ಟಿ ಶುಭಾಶಯ ಹೇಳಿದ ಶ್ವಾನ; ಮುದ್ದಾದ ವಿಡಿಯೋ ಇಲ್ಲಿದೆ
ವಿಡಿಯೋದಿಂದ ಸೆರೆಹಿಡಿಯಲಾದ ಚಿತ್ರ
Follow us
TV9 Web
| Updated By: shivaprasad.hs

Updated on:Dec 17, 2021 | 3:44 PM

ಆನ್​ಲೈನ್​ನಲ್ಲಿ ವಿವಿಧ ಮಾದರಿಯ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಅದರಲ್ಲೂ ಪ್ರಾಣಿಗಳಿರುವ ವಿಡಿಯೋಗಳೆಂದರೆ ಹೆಚ್ಚು ಜನರನ್ನು ಆಕರ್ಷಿಸುತ್ತದೆ. ಬಹಳಷ್ಟು ಜನ ತಾವು ಸಾಕಿದ ಸಾಕುಪ್ರಾಣಿಗಳ ಮುದ್ದಾದ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇಂತಹ ವಿಡಿಯೋಗಳು ಜನರಿಗೆ ನೋಡುಗರ ಮುಖದಲ್ಲಿ ನಗು ಮೂಡಿಸೋದು ಸುಳ್ಳಲ್ಲ. ಸದ್ಯ ಅಂತರ್ಜಾಲದಲ್ಲಿ ಮನೆಯಲ್ಲಿ ಸಾಕಿದ ಮುದ್ದಾದ ಶ್ವಾನವೊಂದರ ಪ್ರೀತಿ ಎಲ್ಲರ ಮನಸೆಳೆದಿದೆ. ವಿಡಿಯೋ ನೋಡಿದ ಜನರು ನಾಯಿಯ ಬುದ್ಧಿಮತ್ತೆಗೆ ಫಿದಾ ಆಗಿದ್ದಾರೆ. ಅಷ್ಟಕ್ಕೂ ಏನು ಸಮಾಚಾರ ಅಂತೀರಾ? ಮುಂದೆ ಓದಿ.

ಮನೆಯಲ್ಲಿ ಸಾಕಿದ ಶ್ವಾನವೊಂದು ತನ್ನ ಒಡತಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದೆ. ಹೌದು. ಆ ಮಹಿಳೆಗೆ ನೆರೆದಿರುವ ಎಲ್ಲರೂ ಶುಭಾಶಯ ಹೇಳುತ್ತಿರುವಂತೆಯೇ ಶ್ವಾನ ಕೂಡ ಎದ್ದು ನಿಂತು ತನ್ನ ಮುಂದಿನ ಕಾಲುಗಳನ್ನು ತಟ್ಟಿ ಪ್ರೀತಿ ತೋರಿದೆ. ಅಷ್ಟೇ ಅಲ್ಲದೇ, ತನ್ನ ಒಡತಿಗೆ ಶುಭಾಶಯ ಹೇಳುವಂತೆ ಸಂಭ್ರಮದಲ್ಲಿ ಭಾಗಿಯಾಗಿದೆ. ಇದು ವಿಡಿಯೋದಲ್ಲಿ ಸೆರೆಯಾಗಿದ್ದು, ಫೇಸ್​ಬುಕ್​ನಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್ ಆಗಿರುವ ವಿಡಿಯೋ:

ಫೇಸ್​ಬುಕ್​ನಲ್ಲಿ ಆರುಣಿಮಾ ಎಂಬ ಖಾತೆಯಿಂದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಸದ್ಯ ವೈರಲ್ ಆಗಿರುವ ಈ ವಿಡಿಯೋ ನೋಡಿ, ಪ್ರಾಣಿಪ್ರಿಯರು ಅಚ್ಚರಿ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೇ, ಆ ಶ್ವಾನದ ಬುದ್ಧಿ ಮತ್ತೆಗೆ ಶಹಬ್ಬಾಸ್ ಅಂದಿದ್ದಾರೆ.

ಫೇಸ್​ಬುಕ್​ನಲ್ಲಿ ಹಂಚಿಕೊಳ್ಳಲಾದ ವಿಡಿಯೋಗೆ, ‘‘ಯಾರು ಹೇಳಿದ್ದು, ಅವನಿಗೆ ಚಪ್ಪಾಳೆ ತಟ್ಟಲು ಬರೋದಿಲ್ಲ ಅಂತಾ…’ ಎಂದು ಕ್ಯಾಪ್ಶನ್ ಬರೆಯಲಾಗಿದೆ. ವಿಡಿಯೋ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದ್ದು, ಸುಮಾರು ಇಪ್ಪತ್ತು ಸಾವಿರ ಇಷ್ಟಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಸುಮಾರು ಇಷ್ಟೇ ಸಂಖ್ಯೆಯ ಜನರು ವಿಡಿಯೋವನ್ನು ಹಂಚಿಕೊಂಡು ಪ್ರೀತಿ ತೋರಿದ್ದಾರೆ. ಇದನ್ನು ನೋಡಿದ ನಿಮಗೇನನ್ನಿಸಿತು?

ಇದನ್ನೂ ಓದಿ:

ಸಿಂಹದಂತೆ ಘರ್ಜಿಸಿದ ರಾಯನ್​ ರಾಜ್​ ಸರ್ಜಾ; ಚಿರು ಪುತ್ರನ ವಿಡಿಯೋ ವೈರಲ್​

ಕಾಡುಕುರಿಯನ್ನು ಹೊಂಚು ಹಾಕಿ ಭೇಟೆಯಾಡಿದ ಚಿರತೆ! ವೈರಲ್ ವಿಡಿಯೋ ಇಲ್ಲಿದೆ ನೋಡಿ

Published On - 3:43 pm, Fri, 17 December 21

Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ