AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ಎಡವಟ್ಟಿನಿಂದ ಎರಡು ವರ್ಷ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆದ ಮಹಿಳೆ

ವೈದ್ಯರ ಒಂದು ಸಣ್ಣ ನಿರ್ಲಕ್ಷ್ಯಕ್ಕೆ,  ಇಂಗ್ಲೆಂಡ್ ಮೂಲದ ಮಹಿಳೆಯೊಬ್ಬರು ಚರ್ಮದ ಕ್ಯಾನ್ಸರ್​​​ ಬರೋಬ್ಬರಿ ಎರಡು ವರ್ಷಗಳ ಕಾಲ ರೋಗನಿರ್ಣಯವನ್ನು ಪಡೆದುಕೊಳ್ಳುತ್ತಾರೆ. ಆದರೆ ಮತ್ತೊಂದು ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾದಾಗ ಆಕೆಗೆ ಯಾವುದೇ ರೀತಿಯ ಕ್ಯಾನ್ಸರ್ ರೋಗ ಇಲ್ಲವೆಂಬುವುದು ಪತ್ತೆಯಾಗಿದೆ. ಇದರಿಂದ ಆಘಾತಕ್ಕೊಳಗಾದ ಮಹಿಳೆ, ಸುಖಾಸುಮ್ಮನೆ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆಗೆ ಒಳಪಡಿಸಿದ್ದಕ್ಕಾಗಿ ಆಸ್ಪತ್ರೆಯ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿ, ಸತತ ಎರಡು ವರ್ಷಗಳ ಕಾನೂನು ಹೋರಾಟದಲ್ಲಿ ಜಯಗಳಿಸುವ ಮೂಲಕ ಭಾರಿ ಮೊತ್ತದ ಪರಿಹಾರವನ್ನು ಪಡೆದುಕೊಂಡಿದ್ದಾಳೆ.

ವೈದ್ಯರ ಎಡವಟ್ಟಿನಿಂದ ಎರಡು ವರ್ಷ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆದ ಮಹಿಳೆ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Oct 19, 2023 | 6:26 PM

Share

ಕ್ಯಾನ್ಸರ್ ಒಂದು ಮಾರಣಾಂತಿಕ ಕಾಯಿಲೆಯಾಗಿದ್ದು, ಅದಕ್ಕೆ ಸರಿಯಾದ ಸಮಯದಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳದಿದ್ದರೆ ಇದು ಪ್ರಾಣಕ್ಕೆ ಕುತ್ತು ತರುವ ಸಾಧ್ಯತೆಯಿರುತ್ತದೆ.  ಮತ್ತು ಸಮಯಕ್ಕೆ ಸರಿಯಾಗಿ ರೋಗನಿರ್ಣಯಗಳನ್ನು ತೆಗೆದುಕೊಳ್ಳುವ ಮೂಲಕ ಕ್ಯಾನ್ಸರ್  ರೋಗವನ್ನು ಜಯಿಸಬಹುದು. ಆದರೆ ಇಲ್ಲೊಬ್ಬ ಮಹಿಳೆ ಕ್ಯಾನ್ಸರ್ ರೋಗ ಇಲ್ಲದೆಯೇ  ಬರೋಬ್ಬರಿ ಎರಡು ವರ್ಷಗಳ ಕಾಲ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಾರೆ. ಆದರೆ ನಂತರ ಈಕೆಗೆ ಯಾವುದೇ ರೀತಿಯ ಕ್ಯಾನ್ಸರ್  ಇಲ್ಲವೆಂಬುದು ಪತ್ತೆಯಾಗಿದೆ.

ವರದಿಗಳ ಪ್ರಕಾರ, ಯಾರ್ಕ್ಷೈರ್ ಮೂಲದ ಮೇಗನ್ ರಾಯ್ಲ್ ಎಂಬ 33 ವರ್ಷದ ಮಹಿಳೆ  ಲಂಡನ್ ನಲ್ಲಿ ಮೇಕಪ್ ಆರ್ಟಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು, 2019 ರಲ್ಲಿ  ಆಕೆಗೆ ಚರ್ಮದಲ್ಲಿ ವಿಪರೀತ ತುರಿಕೆ ಕಾಣಿಸಿಕೊಂಡ ಕಾರಣ  ಆಕೆ ರಾಯಲ್ ಮಾರ್ಸ್ಡೆನ್ ಎಂಬ ಆಸ್ಪತ್ರೆಗೆ ದಾಖಲಾಗುತ್ತಾರೆ.  ಅಲ್ಲಿ ವೈದ್ಯರು ಈಕೆಗೆ ಚರ್ಮದ ಕ್ಯಾನ್ಸರ್ ಇದೆ ಎಂದು ಹೇಳುತ್ತಾರೆ.  ಹಾಗೂ ಆಕೆ ರೋಗದಿಂದ ಬೇಗ ಗುಣಮುಖವಾಗಲು ರೋಗನಿರ್ಣಯವನ್ನು ಪಡೆದುಕೊಳ್ಳುತ್ತಾಳೆ. ಅಲ್ಲದೆ ಚಿಕಿತ್ಸೆಯ ಭಾಗವಾಗಿ ಆಕೆ ಶಸ್ತ್ರ ಚಿಕಿತ್ಸೆ ಮತ್ತು ಇಮ್ಯುನೊಥೆರಪಿಗೂ ಕೂಡಾ ಒಳಗಾಗುತ್ತಾಳೆ.

ನಂತರ 2021 ರಲ್ಲಿ ಕೋವಿಡ್ ಸಾಂಕ್ರಾಮಿಕ ರೋಗವಿದ್ದ ಕಾರಣ ಆಕೆ ಮತ್ತೊಂದು ಆಸ್ಪತ್ರೆಗೆ ಚಿಕಿತ್ಸೆ ಪಡೆಯಲೆಂದು ಹೋಗುತ್ತಾಳೆ. ಅಲ್ಲಿ  ನಡೆದ ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಗೆ ಯಾವುದೇ  ರೀತಿಯ ಚರ್ಮದ ಕ್ಯಾನ್ಸರ್ ಇಲ್ಲ ಎಂಬುದು ಪತ್ತೆಯಾಗುತ್ತದೆ. ವೈದ್ಯರು ಈ ವಿಷಯವನ್ನು ಮೇಗನ್ ಅವರಿಗೆ ಹೇಳಿದಾಗ ಆಕೆ  ಆಘಾತಕ್ಕೆ ಒಳಗಾಗುತ್ತಾರೆ.

ಇದಾದ ಬಳಿಕ  ವೈದ್ಯರ ನಿರ್ಲಕ್ಷ್ಯಕ್ಕೆ ಆ ಮಹಿಳೆ ಆಸ್ಪತ್ರೆಯ ವಿರುದ್ಧ ಪ್ರಕರಣ ದಾಖಲಿಸುತ್ತಾರೆ.   ಸುಮಾರು ಎರಡು ವರ್ಷಗಳಿಂದ ನಡೆಯುತ್ತಿದ್ದ ಈ ನ್ಯಾಯಾಂಗ ಹೋರಾಟದಲ್ಲಿ ಇದೀಗ ನ್ಯಾಯಾಲಯ ಆಸ್ಪತ್ರೆಯ ಪರವಾನಿಗೆ ರದ್ದುಪಡಿಸಿ , ರಾಯಲ್ ಮಾರ್ಸ್ಡೆನ್  NHS ಫೌಂಡೇಶನ್  ಮತ್ತು ಇಂಪೀರಿಯಲ್ ಕಾಲೇಜ್ ಹೆಲ್ತ್ಕೇರ್  NHS  ಫೌಂಡೇಶನ್ ಟ್ರಸ್ಟ್  ಮೇಗನ್ ಅವರಿಗೆ  ಭಾರೀ ಮೊತ್ತದ ಪರಿಹಾರವನ್ನು   ನೀಡುವಂತೆ ಆದೇಶಿಸಿದೆ.

ಇದನ್ನೂ ಓದಿ: Viral Video: ಈ ಪುಟ್ಟ ಕಂದಮ್ಮನ ಡ್ಯಾನ್ಸ್ ನೋಡಿದ್ರೆ, ನೀವು ಬಾದಲ್ ಬರ್ಸಾ ಬಿಜುಲಿಗೆ ಸ್ಟೆಪ್​​​ ಹಾಕುವುದು ಖಂಡಿತ 

ಎರಡು ವರ್ಷಗಳ ಕಾನೂನು ಹೋರಾಟದಲ್ಲಿ ಜಯಗಳಿಸಿದ ಮೇಗನ್,  ಇಂತಹ ಘಟನೆಗಳು ನಡೆಯಬಹುದು ಎಂದು ಕಲ್ಪನೆ ಮಾಡಲು ಸಾಧ್ಯವಿಲ್ಲ, ಕ್ಯಾನ್ಸರ್ ಇದೆ ಎಂದು ಪತ್ತೆಯಾದಾಗ ನಾನು ಖಿನ್ನತೆಗೆ ಜಾರಿದ್ದೂ ಇದೆ.  ಎರಡು ವರ್ಷಗಳ ಕಾಲ ಚಿಕಿತ್ಸೆಗೆ ಒಳಗಾಗಿದ್ದೇನೆ. ಆದರೆ ನನಗೆ ಕ್ಯಾನ್ಸರ್ ಇಲ್ಲ ಎಂದು ತಿಳಿದಾಗ ತುಂಬಾ ಆಘಾತಕ್ಕೊಳಗಾದೆ. ಅಲ್ಲದೆ ಕೋಪ ಮತ್ತು ಹತಾಶೆಯ ಭಾವನೆಯೂ ಉಂಟಾಯಿತು ಹೇಳಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ