AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ವಿಶ್ವ ದಾಖಲೆ ಮಾಡಿದ ಸಾಮೂಹಿಕ ವಿವಾಹ, ದಾಂಪತ್ಯ ಜೀವನಕ್ಕೆ ಕಾಲಿಟ್ಟ 2,143 ಜೋಡಿಗಳು

ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 2,143 ಜೋಡಿಗಳು ಕೇವಲ 12 ಗಂಟೆಗಳ ಅವಧಿಯಲ್ಲಿ ವಿವಾಹವಾಗುವ ಮೂಲಕ ವಿಶ್ವದಾಖಲೆಯನ್ನು ನಿರ್ಮಿಸಿದೆ. ಹಾಗೂ ಈ ಮೊದಲು 2013ರಲ್ಲಿ 24 ಗಂಟೆಗಳ ಅವಧಿಯಲ್ಲಿ 963 ಜೋಡಿಗಳು ವಿವಾಹವಾದ ದಾಖಲೆಯನ್ನು ಮುರಿದಿದೆ.

Viral News: ವಿಶ್ವ ದಾಖಲೆ ಮಾಡಿದ ಸಾಮೂಹಿಕ ವಿವಾಹ, ದಾಂಪತ್ಯ ಜೀವನಕ್ಕೆ ಕಾಲಿಟ್ಟ 2,143 ಜೋಡಿಗಳು
ವೈರಲ್ ನ್ಯೂಸ್​​
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 12, 2023 | 6:10 PM

ಭಾರತದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತದೆ. ಸರಕಾರದ ವತಿಯಿಂದ ಅಥವಾ ಟ್ರಸ್ಟ್​​ಗಳ ವತಿಯಿಂದ ಹಲವು ಸಾಮೂಹಿಕ ಕಾರ್ಯಕ್ರಮಗಳು ಏರ್ಪಡುತ್ತವೆ. ನೂರಾರು ಸಂಖ್ಯೆಯಲ್ಲಿ ವಧುವರರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಇನ್ನೂ ಆಡಂಬರದ ಮದುವೆ ಕಾರ್ಯಕ್ರಮ ಇಷ್ಟಪಡದವರು ತಮ್ಮ ವಿವಾಹವು ಅತೀ ಸರಳವಾಗಿರಬೇಕೆಂದು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಪ್ತಪದಿ ತುಳಿಯುತ್ತಾರೆ. ಇಲ್ಲೊಂದು ಸಾಮೂಹಿಕ ವಿವಾಹ ಕಾರ್ಯಕ್ರಮವು ವಿಶ್ವದಾಖಲೆಯನ್ನೇ ನಿರ್ಮಿಸಿದೆ. ಮೇ 26ರಂದು ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ನಡೆದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸುಮಾರು 2,143 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ವಿಶ್ವದಾಖಲೆ ನಿರ್ಮಾಣವಾಗಿದೆ.

ಕೇವಲ 12 ಗಂಟೆಯಲ್ಲಿ 2,143 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಈ ಕಾರ್ಯಕ್ರಮ ಗಿನ್ನೆನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ದಾಖಲಾಗಿದೆ. ಜೊತೆಗೆ ಈ ಮೊದಲು 2013 ರಲ್ಲಿ ದಾಖಲಾಗಿದ್ದ, 24 ಗಂಟೆಗಳ ಅವಧಿಯಲ್ಲಿ 963 ಜೋಡಿಗಳು ಮದುವೆಯಾದ ದಾಖಲೆಯನ್ನು ಮುರಿದಿದೆ.

ಗಿನ್ನೆಸ್ ವಿಶ್ವ ದಾಖಲೆಯ ಪ್ರಕಾರ, ಈ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಶ್ರೀ ಮಹಾವೀರ ಗೋಶಾಲಾ ಕಲ್ಯಾಣ ಸಂಸ್ಥಾನವು ಆಯೋಜಿಸಿದೆ. ಇದು ಹಿಂದುಳಿದ ಸಮುದಾಯಗಳಿಗೆ ಸೇವೆ ಸಲ್ಲಿಸಲು ಮೀಸಲಾಗಿರುವ ನೋಂದಾಯಿತ ಟ್ರಸ್ಟ್ ಆಗಿದೆ. ಸಮಾರಂಭದಲ್ಲಿ ಹಿಂದೂ ಹಾಗೂ ಮುಸ್ಲಿಂ ಧರ್ಮದ ಜೋಡಿಗಳು ವಿವಾಹವಾದರು. ಮದುವೆಯ ವಿಧಿವಿಧಾನಗಳನ್ನು ಪ್ರತಿ ದಂಪತಿಯ ಆಯಾ ಸಮುದಾಯದ ಪುರೋಹಿತರು ಹಾಗೂ ಕ್ವಾಜಿಗಳು ನೆರವೆರಿಸಿದರು.

ಇದನ್ನೂ ಓದಿ:Viral Video: 7 ವರ್ಷಗಳ ಹಿಂದೆ ಟ್ವಿಟರ್​​ನಲ್ಲಿ ಹಂಚಿಕೊಂಡ ಫೋಟೋದಲ್ಲಿದ್ದ ಬಾಲಕಿಯನ್ನು ಭೇಟಿಯಾದ ಆನಂದ್ ಮಹೀಂದ್ರಾ

ವಿವಾಹ ವಿಧಿವಿಧಾನಗಳು ಪೂರ್ಣಗೊಂಡ ನಂತರ ರಾಜಸ್ಥಾನ ಸರ್ಕಾರದ ಅಧಿಕಾರಿಗಳು ದಂಪತಿಗಳಿಗೆ ಮದುವೆ ಪ್ರಮಾಣ ಪತ್ರವನ್ನು ನೀಡಿದರು. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಕ್ಯಾಬಿನೆಟ್ ಸಚಿವ ಪ್ರಮೋದ್ ಜೈನ್ ಭಯಾ ಅವರು ನವದಂಪತಿಗಳಿಗೆ ಆಶೀರ್ವಾದವನ್ನು ಮಾಡಿದರು. ನವ ಜೋಡಿಗಳಿಗೆ ಭರ್ಜರಿ ಉಡುಗೊರೆಗಳನ್ನು ಕೂಡಾ ನೀಡಲಾಯಿತು. ವಧುವಿಗೆ ಆಭರಣ, ದಂಪತಿಗಳಿಗೆ ಹಾಸಿಗೆ, ರೆಫ್ರಿಜರೇಟರ್ ಸೇರಿದಂತೆ ಹಲವು ಗೃಹಪಯೋಗಿ ವಸ್ತುಗಳನ್ನು ಉಡುಗೊರೆಯನ್ನಾಗಿ ನೀಡಲಾಯಿತು. ಈ ದಾಖಲೆಯ ಮದುವೆ ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಸೇರಿದ್ದರು. ಇದಲ್ಲದೆ ನವ ದಂಪತಿಗಳಿಗೆ ಹಾಗೂ ಬಂದಂತಹ ಅಥಿತಿಗಳಿಗೆ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಸಾಮೂಹಿಕ ವಿವಾಹ ಕಾರ್ಯಕ್ರಮದ ವೀಡಿಯೋವನ್ನು ಶ್ರೀ ಮಹಾವೀರ ಗೋಶಾಲಾ ಕಲ್ಯಾಣ ಸಂಸ್ಥಾನವು ತನ್ನ ಅಧೀಕೃತ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ