AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾಯಕದಲ್ಲೇ ಖುಷಿ ಕಾಣುವ ವ್ಯಕ್ತಿಯ ಚಿತ್ರ ಬಿಡಿಸಿ ಮೊಗದಲ್ಲಿ ನಗು ಮೂಡಿಸಿದ ಯುವಕಲಾವಿದ

ಕಲಾವಿದರೇ ಹಾಗೆ, ಅಪರಿಚಿತ ವ್ಯಕ್ತಿಯ ಚಿತ್ರವನ್ನು ಬಿಡಿಸಿ ಅವರ ಮೊಗದಲ್ಲಿ ನಗು ಮೂಡಿಸುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ಮನೆ ಮನೆಗೆ ಪೇಪರ್ ಹಾಕುತ್ತಿರುವ ವ್ಯಕ್ತಿಯ ಚಿತ್ರ ಬಿಡಿಸಿ, ಮೊಗದಲ್ಲಿ ನಗು ತರಿಸಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ ನೋಡಿ.

Video: ಕಾಯಕದಲ್ಲೇ ಖುಷಿ ಕಾಣುವ ವ್ಯಕ್ತಿಯ ಚಿತ್ರ ಬಿಡಿಸಿ ಮೊಗದಲ್ಲಿ ನಗು ಮೂಡಿಸಿದ ಯುವಕಲಾವಿದ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on:Dec 03, 2025 | 3:50 PM

Share

ಅಪರಿಚಿತ ವ್ಯಕ್ತಿಗಳ ಮೊಗದಲ್ಲಿ ನಗು ಮೂಡಿಸುವ ವ್ಯಕ್ತಿಗಳನ್ನು ಕಂಡಾಗ ಖುಷಿಯಾಗುತ್ತದೆ. ಈ ವಿಚಾರದಲ್ಲಿ ಕಲಾವಿದರು (artists) ಒಂದು ಹೆಜ್ಜೆ ಮುಂದೆ ಇರುತ್ತಾರೆ. ಕೈಯಲ್ಲಿ ಪೇಪರ್, ಪೆನ್ನು ಹಿಡಿದು ದಾರಿಹೋಕರು ಅಥವಾ ಅಪರಿಚಿತ ವ್ಯಕ್ತಿಗಳ ಚಿತ್ರ ಬಿಡಿಸಿ ಅವರ ಮುಖದಲ್ಲಿ ನಗು ಮೂಡಿಸುತ್ತಾರೆ. ಆದರೆ ಯುವಕಲಾವಿದನೊಬ್ಬ ಪೇಪರ್ ರಾಜಣ್ಣನ (Paper Rajanna) ಚಿತ್ರ ಬಿಡಿಸಿ ಅವರನ್ನು ಖುಷಿ ಪಡಿಸಿದ್ದಾನೆ. ತನ್ನ ಸ್ಕೆಚ್ ನೋಡುತ್ತಿದ್ದಂತೆ ವೃದ್ಧ ವ್ಯಕ್ತಿ ಖುಷಿಪಟ್ಟಿದ್ದಾರೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ವೈರಲ್ ಆಗಿದೆ.

Tilak kulal ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾದ ವಿಡಿಯೋದಲ್ಲಿ ಯುವಕಲಾವಿದ ತಿಲಕ್‌ ಕುಲಾಲ್‌,  ದುಡಿಮೆಯಲ್ಲಿ ಖುಷಿ ಕಾಣುತ್ತಿರುವ ವ್ಯಕ್ತಿಯ ಚಿತ್ರವನ್ನು ಬಿಡಿಸಿದ್ದು, ಈ ಸ್ಕೆಚ್ ಆ ವ್ಯಕ್ತಿಯ ಕೈಗೆ ನೀಡುತ್ತಿದ್ದಂತೆ ಖುಷಿಯಿಂದಲೇ ನಗೆ ಬೀರುವುದನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ: ಜೀವನಕ್ಕಾಗಿ ಲಾರಿ ಓಡಿಸುವ ಕಾಯಕ; ಬದುಕಿಗೆ ಸ್ಫೂರ್ತಿ ಗೋವಿಂದಣ್ಣನ ಮಾತು

ಈ ವಿಡಿಯೋ ಇದುವರೆಗೆ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ನಮ್ಮ ಪಾಪದ ಪೇಪರ್ ರಾಜಣ್ಣ ಎಂದಿದ್ದಾರೆ. ಇನ್ನೊಬ್ಬರು, ಪೇಪರ್ ರಾಜಣ್ಣ ಮುಖದಲ್ಲಿ ನಗು ನೋಡಿ ಖುಷಿಯಾಯ್ತು. ಪರಿಶುದ್ಧ ಮನಸ್ಸಿನ ವ್ಯಕ್ತಿ ಎಂದು ಹೇಳಿದ್ದಾರೆ. ಇನ್ನು ಕೆಲವರು ಸೂಪರ್ ಎನ್ನುತ್ತಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Wed, 3 December 25

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್