AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾಯಕದಲ್ಲೇ ಖುಷಿ ಕಾಣುವ ವ್ಯಕ್ತಿಯ ಚಿತ್ರ ಬಿಡಿಸಿ ಮೊಗದಲ್ಲಿ ನಗು ಮೂಡಿಸಿದ ಯುವಕಲಾವಿದ

ಕಲಾವಿದರೇ ಹಾಗೆ, ಅಪರಿಚಿತ ವ್ಯಕ್ತಿಯ ಚಿತ್ರವನ್ನು ಬಿಡಿಸಿ ಅವರ ಮೊಗದಲ್ಲಿ ನಗು ಮೂಡಿಸುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ಮನೆ ಮನೆಗೆ ಪೇಪರ್ ಹಾಕುತ್ತಿರುವ ವ್ಯಕ್ತಿಯ ಚಿತ್ರ ಬಿಡಿಸಿ, ಮೊಗದಲ್ಲಿ ನಗು ತರಿಸಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ ನೋಡಿ.

Video: ಕಾಯಕದಲ್ಲೇ ಖುಷಿ ಕಾಣುವ ವ್ಯಕ್ತಿಯ ಚಿತ್ರ ಬಿಡಿಸಿ ಮೊಗದಲ್ಲಿ ನಗು ಮೂಡಿಸಿದ ಯುವಕಲಾವಿದ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on:Dec 03, 2025 | 3:50 PM

Share

ಅಪರಿಚಿತ ವ್ಯಕ್ತಿಗಳ ಮೊಗದಲ್ಲಿ ನಗು ಮೂಡಿಸುವ ವ್ಯಕ್ತಿಗಳನ್ನು ಕಂಡಾಗ ಖುಷಿಯಾಗುತ್ತದೆ. ಈ ವಿಚಾರದಲ್ಲಿ ಕಲಾವಿದರು (artists) ಒಂದು ಹೆಜ್ಜೆ ಮುಂದೆ ಇರುತ್ತಾರೆ. ಕೈಯಲ್ಲಿ ಪೇಪರ್, ಪೆನ್ನು ಹಿಡಿದು ದಾರಿಹೋಕರು ಅಥವಾ ಅಪರಿಚಿತ ವ್ಯಕ್ತಿಗಳ ಚಿತ್ರ ಬಿಡಿಸಿ ಅವರ ಮುಖದಲ್ಲಿ ನಗು ಮೂಡಿಸುತ್ತಾರೆ. ಆದರೆ ಯುವಕಲಾವಿದನೊಬ್ಬ ಪೇಪರ್ ರಾಜಣ್ಣನ (Paper Rajanna) ಚಿತ್ರ ಬಿಡಿಸಿ ಅವರನ್ನು ಖುಷಿ ಪಡಿಸಿದ್ದಾನೆ. ತನ್ನ ಸ್ಕೆಚ್ ನೋಡುತ್ತಿದ್ದಂತೆ ವೃದ್ಧ ವ್ಯಕ್ತಿ ಖುಷಿಪಟ್ಟಿದ್ದಾರೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ವೈರಲ್ ಆಗಿದೆ.

Tilak kulal ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾದ ವಿಡಿಯೋದಲ್ಲಿ ಯುವಕಲಾವಿದ ತಿಲಕ್‌ ಕುಲಾಲ್‌,  ದುಡಿಮೆಯಲ್ಲಿ ಖುಷಿ ಕಾಣುತ್ತಿರುವ ವ್ಯಕ್ತಿಯ ಚಿತ್ರವನ್ನು ಬಿಡಿಸಿದ್ದು, ಈ ಸ್ಕೆಚ್ ಆ ವ್ಯಕ್ತಿಯ ಕೈಗೆ ನೀಡುತ್ತಿದ್ದಂತೆ ಖುಷಿಯಿಂದಲೇ ನಗೆ ಬೀರುವುದನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ: ಜೀವನಕ್ಕಾಗಿ ಲಾರಿ ಓಡಿಸುವ ಕಾಯಕ; ಬದುಕಿಗೆ ಸ್ಫೂರ್ತಿ ಗೋವಿಂದಣ್ಣನ ಮಾತು

ಈ ವಿಡಿಯೋ ಇದುವರೆಗೆ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ನಮ್ಮ ಪಾಪದ ಪೇಪರ್ ರಾಜಣ್ಣ ಎಂದಿದ್ದಾರೆ. ಇನ್ನೊಬ್ಬರು, ಪೇಪರ್ ರಾಜಣ್ಣ ಮುಖದಲ್ಲಿ ನಗು ನೋಡಿ ಖುಷಿಯಾಯ್ತು. ಪರಿಶುದ್ಧ ಮನಸ್ಸಿನ ವ್ಯಕ್ತಿ ಎಂದು ಹೇಳಿದ್ದಾರೆ. ಇನ್ನು ಕೆಲವರು ಸೂಪರ್ ಎನ್ನುತ್ತಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Wed, 3 December 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ