Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೆರಡು ಬಾರಿ ಪವಾಡಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಕೇರಳದ ಬಾಲಕ; ವೈರಲ್ ವಿಡಿಯೋ ನೋಡಿ ಹೌಹಾರಿದ ನೆಟ್ಟಿಗರು

ಅದೃಷ್ಟವೆಂಬಂತೆ ಬಾಲಕನಿಗೆ ಸಣ್ಣಪುಟ್ಟ ತೆರಚಿದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ವಿಡಿಯೋ ನೋಡಿದ ಪ್ರತಿಯೊಬ್ಬರೂ ಬಾಲಕನ ಅದೃಷ್ಟ ನೆಟ್ಟಗಿತ್ತು, ಆತನಿಗೆ ಇದು ಮರುಜನ್ಮ ಅಂತಾ ಮಾತನಾಡಿಕೊಳ್ಳುತ್ತಿದ್ದಾರೆ.

ಎರಡೆರಡು ಬಾರಿ ಪವಾಡಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಕೇರಳದ ಬಾಲಕ; ವೈರಲ್ ವಿಡಿಯೋ ನೋಡಿ ಹೌಹಾರಿದ ನೆಟ್ಟಿಗರು
ಪವಾಡಸದೃಶ್ಯ ರೀತಿಯಲ್ಲಿ ಪಾರಾದ ಬಾಲಕ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Mar 26, 2022 | 11:42 AM

ಭಯಾನಕ ಘಟನೆಯೊಂದರಲ್ಲಿ, ಕೇರಳ (Kerala)ದಲ್ಲಿ ಎಂಟು ವರ್ಷದ ಬಾಲಕ ಕೆಲವೇ ಸೆಕೆಂಡುಗಳಲ್ಲಿ ಒಂದಲ್ಲ ಎರಡು ಬಾರಿ ಪವಾಡಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋ ನೋಡಿದ ಪ್ರತಿಯೊಬ್ಬರೂ ಒಂದು ಕ್ಷಣ ಗಾಬರಿ ಬೀಳುತ್ತಾರೆ. ಏಕೆಂದರೆ ಇದು ಎದೆ ಝಲ್ಲೆನ್ನಿಸುವ ದೃಶ್ಯವಾಗಿದೆ. ಭಯಾನಕ ಅಪಘಾತದಿಂದ ಬಾಲಕ ಸ್ವಲ್ಪದರಲ್ಲೇ ಪಾರಾಗಿರುವುದನ್ನು ನೋಡಿ ನೆಟ್ಟಿಗರನ್ನು ಬೆಚ್ಚಿ ಬೀದಿದ್ದಾರೆ. ಬಿಡುವಿಲ್ಲದ ರಸ್ತೆಯಲ್ಲಿ ಬಾಲಕ ಸೈಕಲ್ ಓಡಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಅವನು ವೇಗವಾಗಿ ಬರುವಾಗ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸೈಕಲ್‌ನಿಂದ ಹಾರಿ ಬಾಲಕ ರಸ್ತೆಯಿಂದ ಪಕ್ಕಕ್ಕೆ ಹೋಗಿ ಬೀದಿದ್ದಾನೆ. ಅವನು ರಸ್ತೆಯಿಂದ ಸ್ಕಿಡ್ ಆಗುತ್ತಿದ್ದಂತೆ, ಮೋಟಾರ್‌ಬೈಕ್‌ನ ಹಿಂದೆ ಬಂದ ಕೇರಳ ರಾಜ್ಯ ಬಸ್ ಹುಡುಗನ ಸೈಕಲ್ ಮೇಲೆ ಹರಿದುಹೋಗಿದೆ. ಬಸ್ಸಿನ ರಭಸಕ್ಕೆ ಸೈಕಲ್ ಸಂಪೂರ್ಣ ನಜ್ಜುಗುಜ್ಜಾಗಿ ಹೋಗಿದೆ. ಬಾಲಕ ಪ್ರಾಣಾಪಾಯದಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದಾನೆ.

ಅದೃಷ್ಟವೆಂಬಂತೆ ಬಾಲಕ (Miraculous Escape)ನಿಗೆ ಸಣ್ಣಪುಟ್ಟ ತೆರಚಿದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ವಿಡಿಯೋ ನೋಡಿದ ಪ್ರತಿಯೊಬ್ಬರೂ ಬಾಲಕನ ಅದೃಷ್ಟ ನೆಟ್ಟಗಿತ್ತು, ಆತನಿಗೆ ಇದು ಮರುಜನ್ಮ ಅಂತಾ ಮಾತನಾಡಿಕೊಳ್ಳುತ್ತಿದ್ದಾರೆ.

ಬಸ್ ಸೈಕಲ್​ ಮೇಲೆ ಹರಿದು ಹೋದ ನಂತರ ಅದರ ಹಿಂದೆಯೇ ಕಾರೊಂದು ಬಂದಿದೆ. ರಸ್ತೆಯ ಇನ್ನೊಂದು ಬದಿಗೆ ಉರುಳಿದ ಹುಡುಗ ಗಾಬರಿಯಿಂದ  ಎದ್ದು ಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಸ್ಥಳೀಯ ವರದಿಗಳ ಪ್ರಕಾರ, ಕೇರಳದ ಕಣ್ಣೂರಿನ ತಳಿಪರಂಬ ಬಳಿಯ ಚೋರುಕ್ಕಲಾ ಎಂಬಲ್ಲಿ ಭಾನುವಾರ ಸಂಜೆ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:

ದೇಶದಲ್ಲಿ 24ಗಂಟೆಯಲ್ಲಿ 4100 ಮಂದಿ ಕೊರೊನಾದಿಂದ ಸಾವು; ಮೃತರ ಸಂಖ್ಯೆಯಲ್ಲಿ ಏಕಾಏಕಿ ಏರಿಕೆಯಾಗಲು ಕಾರಣವೇನು?

ಹಿಜಾಬ್ ಧರಿಸಿಕೊಂಡು ಬಂದ್ರೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಇಲ್ಲ ಎಂಟ್ರಿ; ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆದೇಶ

ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ