AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೆರಡು ಬಾರಿ ಪವಾಡಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಕೇರಳದ ಬಾಲಕ; ವೈರಲ್ ವಿಡಿಯೋ ನೋಡಿ ಹೌಹಾರಿದ ನೆಟ್ಟಿಗರು

ಅದೃಷ್ಟವೆಂಬಂತೆ ಬಾಲಕನಿಗೆ ಸಣ್ಣಪುಟ್ಟ ತೆರಚಿದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ವಿಡಿಯೋ ನೋಡಿದ ಪ್ರತಿಯೊಬ್ಬರೂ ಬಾಲಕನ ಅದೃಷ್ಟ ನೆಟ್ಟಗಿತ್ತು, ಆತನಿಗೆ ಇದು ಮರುಜನ್ಮ ಅಂತಾ ಮಾತನಾಡಿಕೊಳ್ಳುತ್ತಿದ್ದಾರೆ.

ಎರಡೆರಡು ಬಾರಿ ಪವಾಡಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಕೇರಳದ ಬಾಲಕ; ವೈರಲ್ ವಿಡಿಯೋ ನೋಡಿ ಹೌಹಾರಿದ ನೆಟ್ಟಿಗರು
ಪವಾಡಸದೃಶ್ಯ ರೀತಿಯಲ್ಲಿ ಪಾರಾದ ಬಾಲಕ
TV9 Web
| Edited By: |

Updated on: Mar 26, 2022 | 11:42 AM

Share

ಭಯಾನಕ ಘಟನೆಯೊಂದರಲ್ಲಿ, ಕೇರಳ (Kerala)ದಲ್ಲಿ ಎಂಟು ವರ್ಷದ ಬಾಲಕ ಕೆಲವೇ ಸೆಕೆಂಡುಗಳಲ್ಲಿ ಒಂದಲ್ಲ ಎರಡು ಬಾರಿ ಪವಾಡಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋ ನೋಡಿದ ಪ್ರತಿಯೊಬ್ಬರೂ ಒಂದು ಕ್ಷಣ ಗಾಬರಿ ಬೀಳುತ್ತಾರೆ. ಏಕೆಂದರೆ ಇದು ಎದೆ ಝಲ್ಲೆನ್ನಿಸುವ ದೃಶ್ಯವಾಗಿದೆ. ಭಯಾನಕ ಅಪಘಾತದಿಂದ ಬಾಲಕ ಸ್ವಲ್ಪದರಲ್ಲೇ ಪಾರಾಗಿರುವುದನ್ನು ನೋಡಿ ನೆಟ್ಟಿಗರನ್ನು ಬೆಚ್ಚಿ ಬೀದಿದ್ದಾರೆ. ಬಿಡುವಿಲ್ಲದ ರಸ್ತೆಯಲ್ಲಿ ಬಾಲಕ ಸೈಕಲ್ ಓಡಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಅವನು ವೇಗವಾಗಿ ಬರುವಾಗ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸೈಕಲ್‌ನಿಂದ ಹಾರಿ ಬಾಲಕ ರಸ್ತೆಯಿಂದ ಪಕ್ಕಕ್ಕೆ ಹೋಗಿ ಬೀದಿದ್ದಾನೆ. ಅವನು ರಸ್ತೆಯಿಂದ ಸ್ಕಿಡ್ ಆಗುತ್ತಿದ್ದಂತೆ, ಮೋಟಾರ್‌ಬೈಕ್‌ನ ಹಿಂದೆ ಬಂದ ಕೇರಳ ರಾಜ್ಯ ಬಸ್ ಹುಡುಗನ ಸೈಕಲ್ ಮೇಲೆ ಹರಿದುಹೋಗಿದೆ. ಬಸ್ಸಿನ ರಭಸಕ್ಕೆ ಸೈಕಲ್ ಸಂಪೂರ್ಣ ನಜ್ಜುಗುಜ್ಜಾಗಿ ಹೋಗಿದೆ. ಬಾಲಕ ಪ್ರಾಣಾಪಾಯದಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದಾನೆ.

ಅದೃಷ್ಟವೆಂಬಂತೆ ಬಾಲಕ (Miraculous Escape)ನಿಗೆ ಸಣ್ಣಪುಟ್ಟ ತೆರಚಿದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ವಿಡಿಯೋ ನೋಡಿದ ಪ್ರತಿಯೊಬ್ಬರೂ ಬಾಲಕನ ಅದೃಷ್ಟ ನೆಟ್ಟಗಿತ್ತು, ಆತನಿಗೆ ಇದು ಮರುಜನ್ಮ ಅಂತಾ ಮಾತನಾಡಿಕೊಳ್ಳುತ್ತಿದ್ದಾರೆ.

ಬಸ್ ಸೈಕಲ್​ ಮೇಲೆ ಹರಿದು ಹೋದ ನಂತರ ಅದರ ಹಿಂದೆಯೇ ಕಾರೊಂದು ಬಂದಿದೆ. ರಸ್ತೆಯ ಇನ್ನೊಂದು ಬದಿಗೆ ಉರುಳಿದ ಹುಡುಗ ಗಾಬರಿಯಿಂದ  ಎದ್ದು ಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಸ್ಥಳೀಯ ವರದಿಗಳ ಪ್ರಕಾರ, ಕೇರಳದ ಕಣ್ಣೂರಿನ ತಳಿಪರಂಬ ಬಳಿಯ ಚೋರುಕ್ಕಲಾ ಎಂಬಲ್ಲಿ ಭಾನುವಾರ ಸಂಜೆ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:

ದೇಶದಲ್ಲಿ 24ಗಂಟೆಯಲ್ಲಿ 4100 ಮಂದಿ ಕೊರೊನಾದಿಂದ ಸಾವು; ಮೃತರ ಸಂಖ್ಯೆಯಲ್ಲಿ ಏಕಾಏಕಿ ಏರಿಕೆಯಾಗಲು ಕಾರಣವೇನು?

ಹಿಜಾಬ್ ಧರಿಸಿಕೊಂಡು ಬಂದ್ರೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಇಲ್ಲ ಎಂಟ್ರಿ; ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆದೇಶ

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು