AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಾಲೀಕ ಬರುತ್ತಿದ್ದಂತೆ ಕದ್ದು ಮುಚ್ಚಿ ಊಟ ಮಾಡಿದ ಕೂಲಿ ಕಾರ್ಮಿಕ, ಕಾರಣ ಇದೇ ನೋಡಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ಕಣ್ಣಂಚಲಿ ಕಣ್ಣೀರು ತರಿಸುತ್ತದೆ. ಇಲ್ಲೊಬ್ಬ ಕೂಲಿ ಮಾಡುವ ಯುವಕನು ಬಡತನ ಮುಚ್ಚಿಡಲು ಮಾಲೀಕನ ಬರುತ್ತಿದ್ದಂತೆ ಕದ್ದು ಮುಚ್ಚಿ ಊಟ ಮಾಡಿದ್ದಾನೆ. ಈ ಹೃದಯ ಸ್ಪರ್ಶಿ ನೋಡಿ ನೆಟ್ಟಿಗರು ಭಾವುಕರನ್ನಾಗಿಸಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮಾಲೀಕ ಬರುತ್ತಿದ್ದಂತೆ ಕದ್ದು ಮುಚ್ಚಿ ಊಟ ಮಾಡಿದ ಕೂಲಿ ಕಾರ್ಮಿಕ, ಕಾರಣ ಇದೇ ನೋಡಿ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: Sep 02, 2026 | 3:39 PM

Share

ಗಂಡು ಮಕ್ಕಳ ಜೀವನ ಹೇಳಿದ್ದಷ್ಟು ಸುಲಭ. ಎಷ್ಟೇ ಕಷ್ಟ ಆದ್ರೂ ಹೇಳಿಕೊಳ್ಳೋ ಆಗಿಲ್ಲ. ಜವಾಬ್ದಾರಿಗಳ ನಡುವೆ ಯಾರಿಗೂ ತೋರಿಸಿಕೊಳ್ಳದೇ ಸಹಿಸಿಕೊಂಡು ಹೋಗಬೇಕಷ್ಟೇ. ಇದಕ್ಕೆ ಉದಾಹರಣೆಯಂತಿದೆ ಈ ದೃಶ್ಯ. ಕೂಲಿ ಮಾಡುವ ಯುವಕನೊಬ್ಬ (young man) ಕದ್ದು ಮುಚ್ಚಿ ಊಟ ಮಾಡುತ್ತಿರುವ ದೃಶ್ಯವು ಕರುಳು ಹಿಂಡುವಂತಿದೆ. ಇದರ ಹಿಂದಿನ ಕಾರಣ ತಿಳಿದ್ರೆ ನಿಮ್ಮ ಕರುಳು ಚುರ್ ಅನ್ನುತ್ತೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರ ಕಣ್ಣು ತುಂಬಿ ಬಂದಿದೆ.

ಕದ್ದು ಮುಚ್ಚಿ ಊಟ ಮಾಡಿದ ಕೂಲಿ ಕಾರ್ಮಿಕ

ರುದ್ರ ಯಾಧವ್ (Rudra Yadav) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ತನ್ನ ಬಡತನ ಮುಚ್ಚಿಡಲು ಯುವಕನೊಬ್ಬ ಮಾಡಿದ ಕೆಲಸವನ್ನು ಕಾಣಬಹುದು. ಕೂಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಹೊಟ್ಟೆ ಹಸಿವಿನಿಂದ ಊಟ ಮಾಡಲು ಮುಂದಾಗಿದ್ದಾನೆ. ಇದೇ ವೇಳೆ ಆತನ ಹತ್ತಿರ ಮಾಲೀಕನು ಬಂದಿದ್ದು, ಕೈಯಲ್ಲಿದ್ದ ಆಹಾರವನ್ನು ಮುಚ್ಚಿಟ್ಟಿದ್ದಾನೆ. ಓನರ್ ಏನು ತಿನ್ನುತ್ತಿದ್ದೀಯಾ, ತೋರಿಸು?, ಎಂದು ಕೇಳಿದ್ದಾರೆ. ತನ್ನ ಕೈಯಲ್ಲಿದ್ದ ಒಣ ರೊಟ್ಟಿ ಹಾಗೂ ಹಸಿ ಈರುಳ್ಳಿಯನ್ನು ತೋರಿಸಿ ಮುಖ ಸಣ್ಣಗೆ ಮಾಡಿದ್ದಾನೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮನೆಗೆ ಬಂತು ಸ್ಮಾರ್ಟ್ ಟಿವಿ; ಡೆಲಿವರಿ ಬಾಯ್ ಕೆಲಸ ಮಾಡಿ ಅಮ್ಮನಿಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ಮಗ

ಯುವಕನ ಅಸಹಾಯಕತೆಗೆ ಕಣ್ಣೀರು ಹಾಕಿದ ನೆಟ್ಟಿಗರು

ಈ ವಿಡಿಯೋ ಎರಡೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಇಂತಹ ಜೀವನ ತುಂಬಾನೇ ಕಷ್ಟಕರ ಎಂದಿದ್ದಾರೆ. ಇನ್ನೊಬ್ಬರು, ಈ ದೃಶ್ಯ ನೋಡಿ ಕಣ್ಣು ತುಂಬಿ ಬಂತು ಎಂದು ಹೇಳಿದ್ದಾರೆ. ಮತ್ತೊಬ್ಬರು, ಜೀವನ ಅಂದ್ರೆ ಏನು ಎನ್ನುವುದು ಈ ವಿಡಿಯೋ ತೋರಿಸುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ