AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನ ಕಿಟಕಿ ಬದಿ ಕುಳಿತಿದ್ದ ಯುವಕ ಚಳಿಯಿಂದ ಸಾವು; 300 ಕಿ.ಮಿ ಪ್ರಯಾಣಿಸುವವರೆಗೂ ಯಾರಿಗೂ ಗೊತ್ತೇಯಿಲ್ಲ

ರೈಲಿನ ಕಿಟಕಿಯ ಬಳಿಯ ಸೀಟಿನಲ್ಲಿ ಕುಳಿತಿದ್ದ ಯುವಕ ಚಳಿಯಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರೈಲು ಹತ್ತಿದಾಗಿನಿಂದ ಸಿಂಗಲ್​​ ಸೀಟಿನಲ್ಲಿ ಕಿವಿಗೆ ಇಯರ್​​​ ಫೋನ್​​ ಹಾಕಿ ಕುಳಿತಿದ್ದರಿಂದ ಆತ ಮಲಗಿರುವುದಾಗಿ ಇತರ ಪ್ರಯಾಣಿಕರು ತಿಳಿದುಕೊಂಡಿದ್ದರು. ಆದರೆ ಈತ ಸಾವನ್ನಪ್ಪಿರುವ ವಿಷಯ 300 ಕಿಲೋಮೀಟರ್ ದೂರ ಕ್ರಮಿಸಿದ ನಂತರ ಬೆಳಕಿಗೆ ಬಂದಿದೆ.

ರೈಲಿನ ಕಿಟಕಿ ಬದಿ ಕುಳಿತಿದ್ದ ಯುವಕ ಚಳಿಯಿಂದ ಸಾವು; 300 ಕಿ.ಮಿ ಪ್ರಯಾಣಿಸುವವರೆಗೂ ಯಾರಿಗೂ ಗೊತ್ತೇಯಿಲ್ಲ
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on:Dec 20, 2023 | 11:09 AM

Share

ಮಧ್ಯಪ್ರದೇಶ: ಬೈತುಲ್ ಮೂಲದ ಯುವಕ ಕಾಮಯಾನಿ ಎಕ್ಸ್‌ಪ್ರೆಸ್‌ ರೈಲಿನ ಜನರಲ್ ಕಂಪಾರ್ಟ್ ಮೆಂಟ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಳಿಯಿಂದ ಸ್ಥಳದಲ್ಲೇ ಸಾವನ್ನಪ್ಪಿರುವುದು ತಿಳಿದುಬಂದಿದೆ. ಆದರೆ ಆಘಾತಕಾರಿ ವಿಷಯವೆಂದರೆ ರೈಲಿನಲ್ಲಿದ್ದ ಇತರ ಪ್ರಯಾಣಿಕರಿಗೆ ಈ ಬಗ್ಗೆ ತಿಳಿದಿಲ್ಲ. ರೈಲು ಹತ್ತಿದಾಗಿನಿಂದ ಸಿಂಗಲ್​​ ಸೀಟಿನಲ್ಲಿ ಕಿವಿಗೆ ಇಯರ್​​​ ಫೋನ್​​ ಹಾಕಿ ಕುಳಿತಿದ್ದರಿಂದ ಆತ ಮಲಗಿರುವುದಾಗಿ ಇತರ ಪ್ರಯಾಣಿಕರು ತಿಳಿದುಕೊಂಡಿದ್ದಾರೆ.

300 ಕಿಲೋಮೀಟರ್ ಪ್ರಯಾಣದ ನಂತರ ಭಯಾನಕ ಸತ್ಯ ಬೆಳಕಿಗೆ:

ರೈಲು ಸುಮಾರು 303 ಕಿಲೋಮೀಟರ್ ದೂರವನ್ನು ಕ್ರಮಿಸಿದ ನಂತರ ಯುವಕ ಇನ್ನೂ ಕೂಡ ದೇಹದಲ್ಲಿ ಯಾವುದೇ ಚಲನೆಯಿಂದಲೇ ಮಲಗಿರುವುದರಿಂದ ಅದೇ ಕಂಪಾರ್ಟ್ ಮೆಂಟ್ ನಲ್ಲಿರುವ ಪ್ರಯಾಣಿಕರಿಗೆ ಅನುಮಾನ ಹುಟ್ಟಿಕೊಂಡಿದೆ. ಅನುಮಾನಗೊಂಡು ಪರಿಶೀಲಿಸಿದಾಗ ಆತ ಮೃತಪಟ್ಟಿರುವುದು ಜನರ ಗಮನಕ್ಕೆ ಬಂದಿದೆ. ಕೂಡಲೇ ರೈಲ್ವೆ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿ ನಂತರ ಸೋಮವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ದಾಮೋಹ್ ನಿಲ್ದಾಣದಲ್ಲಿ ಯುವಕನ ಶವವನ್ನು ರೈಲಿನಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವೇಳೆ ಕೆಲ ಘಂಟೆಗಳ ಮೊದಲೇ ಚಳಿಯಿಂದಾಗಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: 3000 ವರ್ಷಗಳಷ್ಟು ಹಳೆಯದಾದ ವಿಗ್ರಹದಲ್ಲಿ QR ಕೋಡ್ ಪತ್ತೆ; ಫೋಟೋ ವೈರಲ್​​

ಇದಾದ ನಂತರ ಯುವಕನ ಬಳಿ ಇದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಸಾವಿನ ಬಗ್ಗೆ ಆತನ ಮನೆಯವರಿಗೆ ಮಾಹಿತಿ ನೀಡಿ, ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಮೃತ ಯುವಕ ಎಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಅದೇ ಕೆಲಸದ ನಿಮಿತ್ತ ಚನ್ನೇರಿಗೆ ಹೋಗಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಾಪಸು ಬರುವಾಗ ರೈಲಿನಲ್ಲಿದ್ದಾಗ ಮನೆಯವರ ಜೊತೆ ಫೋನ್ ನಲ್ಲಿ ಮಾತನಾಡಿರುವುದಾಗಿ ತಿಳಿದುಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:28 pm, Tue, 19 December 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ