AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನ ಕಿಟಕಿ ಬದಿ ಕುಳಿತಿದ್ದ ಯುವಕ ಚಳಿಯಿಂದ ಸಾವು; 300 ಕಿ.ಮಿ ಪ್ರಯಾಣಿಸುವವರೆಗೂ ಯಾರಿಗೂ ಗೊತ್ತೇಯಿಲ್ಲ

ರೈಲಿನ ಕಿಟಕಿಯ ಬಳಿಯ ಸೀಟಿನಲ್ಲಿ ಕುಳಿತಿದ್ದ ಯುವಕ ಚಳಿಯಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರೈಲು ಹತ್ತಿದಾಗಿನಿಂದ ಸಿಂಗಲ್​​ ಸೀಟಿನಲ್ಲಿ ಕಿವಿಗೆ ಇಯರ್​​​ ಫೋನ್​​ ಹಾಕಿ ಕುಳಿತಿದ್ದರಿಂದ ಆತ ಮಲಗಿರುವುದಾಗಿ ಇತರ ಪ್ರಯಾಣಿಕರು ತಿಳಿದುಕೊಂಡಿದ್ದರು. ಆದರೆ ಈತ ಸಾವನ್ನಪ್ಪಿರುವ ವಿಷಯ 300 ಕಿಲೋಮೀಟರ್ ದೂರ ಕ್ರಮಿಸಿದ ನಂತರ ಬೆಳಕಿಗೆ ಬಂದಿದೆ.

ರೈಲಿನ ಕಿಟಕಿ ಬದಿ ಕುಳಿತಿದ್ದ ಯುವಕ ಚಳಿಯಿಂದ ಸಾವು; 300 ಕಿ.ಮಿ ಪ್ರಯಾಣಿಸುವವರೆಗೂ ಯಾರಿಗೂ ಗೊತ್ತೇಯಿಲ್ಲ
ಸಾಂದರ್ಭಿಕ ಚಿತ್ರImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on:Dec 20, 2023 | 11:09 AM

ಮಧ್ಯಪ್ರದೇಶ: ಬೈತುಲ್ ಮೂಲದ ಯುವಕ ಕಾಮಯಾನಿ ಎಕ್ಸ್‌ಪ್ರೆಸ್‌ ರೈಲಿನ ಜನರಲ್ ಕಂಪಾರ್ಟ್ ಮೆಂಟ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಳಿಯಿಂದ ಸ್ಥಳದಲ್ಲೇ ಸಾವನ್ನಪ್ಪಿರುವುದು ತಿಳಿದುಬಂದಿದೆ. ಆದರೆ ಆಘಾತಕಾರಿ ವಿಷಯವೆಂದರೆ ರೈಲಿನಲ್ಲಿದ್ದ ಇತರ ಪ್ರಯಾಣಿಕರಿಗೆ ಈ ಬಗ್ಗೆ ತಿಳಿದಿಲ್ಲ. ರೈಲು ಹತ್ತಿದಾಗಿನಿಂದ ಸಿಂಗಲ್​​ ಸೀಟಿನಲ್ಲಿ ಕಿವಿಗೆ ಇಯರ್​​​ ಫೋನ್​​ ಹಾಕಿ ಕುಳಿತಿದ್ದರಿಂದ ಆತ ಮಲಗಿರುವುದಾಗಿ ಇತರ ಪ್ರಯಾಣಿಕರು ತಿಳಿದುಕೊಂಡಿದ್ದಾರೆ.

300 ಕಿಲೋಮೀಟರ್ ಪ್ರಯಾಣದ ನಂತರ ಭಯಾನಕ ಸತ್ಯ ಬೆಳಕಿಗೆ:

ರೈಲು ಸುಮಾರು 303 ಕಿಲೋಮೀಟರ್ ದೂರವನ್ನು ಕ್ರಮಿಸಿದ ನಂತರ ಯುವಕ ಇನ್ನೂ ಕೂಡ ದೇಹದಲ್ಲಿ ಯಾವುದೇ ಚಲನೆಯಿಂದಲೇ ಮಲಗಿರುವುದರಿಂದ ಅದೇ ಕಂಪಾರ್ಟ್ ಮೆಂಟ್ ನಲ್ಲಿರುವ ಪ್ರಯಾಣಿಕರಿಗೆ ಅನುಮಾನ ಹುಟ್ಟಿಕೊಂಡಿದೆ. ಅನುಮಾನಗೊಂಡು ಪರಿಶೀಲಿಸಿದಾಗ ಆತ ಮೃತಪಟ್ಟಿರುವುದು ಜನರ ಗಮನಕ್ಕೆ ಬಂದಿದೆ. ಕೂಡಲೇ ರೈಲ್ವೆ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿ ನಂತರ ಸೋಮವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ದಾಮೋಹ್ ನಿಲ್ದಾಣದಲ್ಲಿ ಯುವಕನ ಶವವನ್ನು ರೈಲಿನಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವೇಳೆ ಕೆಲ ಘಂಟೆಗಳ ಮೊದಲೇ ಚಳಿಯಿಂದಾಗಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: 3000 ವರ್ಷಗಳಷ್ಟು ಹಳೆಯದಾದ ವಿಗ್ರಹದಲ್ಲಿ QR ಕೋಡ್ ಪತ್ತೆ; ಫೋಟೋ ವೈರಲ್​​

ಇದಾದ ನಂತರ ಯುವಕನ ಬಳಿ ಇದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಸಾವಿನ ಬಗ್ಗೆ ಆತನ ಮನೆಯವರಿಗೆ ಮಾಹಿತಿ ನೀಡಿ, ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಮೃತ ಯುವಕ ಎಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಅದೇ ಕೆಲಸದ ನಿಮಿತ್ತ ಚನ್ನೇರಿಗೆ ಹೋಗಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಾಪಸು ಬರುವಾಗ ರೈಲಿನಲ್ಲಿದ್ದಾಗ ಮನೆಯವರ ಜೊತೆ ಫೋನ್ ನಲ್ಲಿ ಮಾತನಾಡಿರುವುದಾಗಿ ತಿಳಿದುಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:28 pm, Tue, 19 December 23

ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?