AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಸಿವು ನೀಗಿಸಿ, ಬಟ್ಟೆ ಕೊಡಿಸಿ ವೃದ್ಧೆಯ ಪಾಲಿಗೆ ದೇವರಾದ ಯುವಕ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವಿಡಿಯೋಗಳು ಹೃದಯಕ್ಕೆ ಹತ್ತಿರವಾಗುತ್ತದೆ. ಗುರುತು ಪರಿಚಿಯವಿಲ್ಲದ ವ್ಯಕ್ತಿಗಳಿಗೆ ಸಹಾಯ ಮಾಡುವ ವ್ಯಕ್ತಿಗಳನ್ನು ಕಂಡಾಗ ಒಳ್ಳೆಯ ಜನರು ಇದ್ದಾರೆ ಎನಿಸುತ್ತದೆ. ಇದೀಗ ಯುವಕನೊಬ್ಬ ಭಿಕ್ಷೆ ಬೇಡುತ್ತಿರುವ ಅಜ್ಜಿಯ ಹೊಟ್ಟೆಯ ಹಸಿವು ನೀಗಿಸಿ ಪುಣ್ಯಾತ್ಮ ಎನಿಸಿಕೊಂಡಿದ್ದಾನೆ. ಈ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಕಣ್ಣನ್ನು ಒದ್ದೆಯಾಗಿಸಿದೆ.

Video: ಹಸಿವು ನೀಗಿಸಿ, ಬಟ್ಟೆ ಕೊಡಿಸಿ ವೃದ್ಧೆಯ ಪಾಲಿಗೆ ದೇವರಾದ ಯುವಕ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Dec 01, 2025 | 5:03 PM

Share

ಒಳ್ಳೆಯ ಕೆಲಸಗಳು ನಮ್ಮನ್ನು ಸದಾ ಕಾಯುತ್ತದೆ ಎನ್ನುವ ಮಾತಿದೆ. ಹೀಗಾಗಿ ಕೆಲವರು ಕಷ್ಟದಲ್ಲಿರುವವರಿಗೆ, ವೃದ್ಧರಿಗೆ, ಕೈಲಾದವರಿಗೆ ತಮ್ಮ ಕೈಲಾದಷ್ಟು ಸಹಾಯ (help) ಮಾಡಿ ದೊಡ್ಡವರೆನಿಸಿಕೊಳ್ಳುತ್ತಾರೆ. ಇದೀಗ ಇಂತಹದ್ದೇ ಹೃದಯಸ್ಪರ್ಶಿ ದೃಶ್ಯ ಇಲ್ಲಿದೆ. ಯುವಕನೊಬ್ಬ ಅಜ್ಜಿಯ (old woman) ಹಸಿವು ನೀಗಿಸಿ, ಬಟ್ಟೆ ಕೊಡಿಸಿ ಆಕೆಯ ಪಾಲಿಗೆ ದೇವರಾಗಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

whomakeshappy ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಯುವಕನೊಬ್ಬ ಅಜ್ಜಿಗೆ ಸಹಾಯ ಮಾಡುವುದನ್ನು ನೋಡಬಹುದು. ಹೌದು, ಸಿಗ್ನಲ್‌ನಲ್ಲಿ ನಿಂತ ವಾಹನ ಸವಾರರ ಬಳಿ ಅಜ್ಜಿಯೊಬ್ಬರು ಭಿಕ್ಷೆ ಬೇಡುತ್ತಿರುವುದನ್ನು ಕಾಣಬಹುದು. ಈ ವೇಳೆ ಯುವಕನೊಬ್ಬ ಅಜ್ಜಿಯನ್ನು ಕರೆದು ಏನು ಬೇಕು ಎಂದು ಕೇಳಿ ಕೊನೆಗೆ ತನ್ನ ಕೈಯಲ್ಲಿದ್ದ ಹಣ್ಣನ್ನು ನೀಡಿದ್ದಾನೆ. ಆ ಬಳಿಕ ಇಲ್ಲೇ ಇರಿ ನಾನು ಏನಾದ್ರು ತರ್ತೇವೆ ಎಂದು ಹೇಳಿ ಚಳಿಗೆ ಸ್ವೆಟರ್ ತಂದು ಅಜ್ಜಿಯ ಕೈಯಲ್ಲಿ ಇಟ್ಟಿದ್ದಾನೆ. ಈ ಹಿರಿಜೀವ ಕೈ ಮುಗಿದು ಕೃತಜ್ಞತೆಯನ್ನು ಸಲ್ಲಿಸಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:ಜೀವನಕ್ಕಾಗಿ ಮೆಕ್ಯಾನಿಕ್ ಕೆಲಸ, ಪ್ರಾಣಿಗಳೇ ಈತನ ಪ್ರಪಂಚ; ಇದು ಕುದುರೆಮುಖದ ರೂಬನ್ ಜೀವನದ ಕಥೆ

ಈ ವಿಡಿಯೋ ಇದುವರೆಗೆ ನಲವತ್ತೇಳು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಒಳ್ಳೆಯ ಕೆಲಸ ಎಂದಿದ್ದಾರೆ. ಇನ್ನೊಬ್ಬರು, ಆ ದೇವ್ರು ಒಳ್ಳೆಯ ಕೆಲಸ ಮಾಡಲು ಇನ್ನಷ್ಟು ಶಕ್ತಿ ನೀಡಲಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ಈ ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ