AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ದುಡಿಮೆಯಲ್ಲೇ ಖುಷಿ ಕಾಣುವ ಹಿರಿಜೀವ; ಕಡಲೆಕಾಯಿ ಮಾರಿ ಜೀವನ ನಡೆಸುವ ಅಜ್ಜಿಗೆ ಸಹಾಯ ಮಾಡಿದ ಯುವಕ

ಸ್ವಾಭಿಮಾನದ ಬದುಕೇ ಹಾಗೆ, ಬೇರೆ ಯಾರ ಬಳಿ ಕೈಯೊಡ್ಡದೇ ಮೂರು ಹೊತ್ತಿನ ಊಟಕ್ಕಾಗಿ ಕಷ್ಟಪಟ್ಟು ದುಡಿಯುತ್ತಾರೆ. ಇದಕ್ಕೆ ಸಾಕ್ಷಿಯಂತಿದೆ ಈ ವಿಡಿಯೋ. ಕಡಲೆಕಾಯಿ ಮಾರಿ ಜೀವನ ನಡೆಸುತ್ತಿರುವ ಅಜ್ಜಿಯ ವಿಡಿಯೋ ವೈರಲ್ ಆಗಿದೆ. ಇಳಿ ವಯಸ್ಸಿನಲ್ಲಿ ದುಡಿಯುವ ಈ ಅಜ್ಜಿ ಎಲ್ಲರಿಗೂ ಮಾದರಿ ಎಂದು ಕಾಮೆಂಟ್ ಮಾಡಿದ್ದಾರೆ.

Video: ದುಡಿಮೆಯಲ್ಲೇ ಖುಷಿ ಕಾಣುವ ಹಿರಿಜೀವ; ಕಡಲೆಕಾಯಿ ಮಾರಿ ಜೀವನ ನಡೆಸುವ ಅಜ್ಜಿಗೆ ಸಹಾಯ ಮಾಡಿದ ಯುವಕ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Dec 15, 2025 | 11:31 AM

Share

ದುಡಿದು ತಿನ್ನುವ ಛಲವಿದ್ದರೆ ವಯಸ್ಸು ಲೆಕ್ಕಕ್ಕೆ ಬರಲ್ಲ. ಮಕ್ಕಳು ನೋಡಿಕೊಳ್ಳಬೇಕಾದ ವಯಸ್ಸಿನಲ್ಲಿ ತಮ್ಮ ದುಡಿಮೆಯನ್ನೇ ಜೀವನಕ್ಕಾಗಿ ನೆಚ್ಚಿಕೊಂಡ ಹಿರಿಜೀವಗಳನ್ನು ಕಂಡಾಗ ಕಣ್ಣಂಚಲಿ ಕಣ್ಣೀರು ಬರುತ್ತದೆ. ವೃದ್ಧೆಯೊಬ್ಬರು (old woman) ಕಡಲೆಕಾಯಿ ಮಾರಿ ಅದರಿಂದ ಬಂದ ಹಣದಿಂದಲೇ ಜೀವನ ಸಾಗಿಸುತ್ತಿದ್ದಾರೆ. ಬರುವ ಅಲ್ಪ ದುಡ್ಡನ್ನೇ ತನ್ನ ಖರ್ಚಿಗಾಗಿ ಇಟ್ಟುಕೊಳ್ಳುವ ಈ ಅಜ್ಜಿಯ ಬದುಕಿನ ಕಥೆ ಕಣ್ಣಲ್ಲಿ ನೀರು ತರಿಸುತ್ತದೆ. ಯುವಕನೊಬ್ಬ ಈ ವೃದ್ಧೆಯನ್ನು ಮಾತನಾಡಿಸಿ ವಿಡಿಯೋ ಮಾಡಿದ್ದಾನೆ.

spreadkindness77 ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋಗೆ ಈ ವಯಸ್ಸಿನಲ್ಲಿ ಇನ್ನೂ ದುಡಿಯುತ್ತಾರೆ. ನನ್ನ ಮನಸ್ಸು ಮೌನವಾಗಿರಲಿಲ್ಲ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ. ವಿಡಿಯೋದಲ್ಲಿ ಯುವಕನೊಬ್ಬ ಕಡಲೆಕಾಯಿ ಮಾರಿ ಜೀವನ ನಡೆಸುತ್ತಿರುವ ಅಜ್ಜಿಯನ್ನು ಮಾತನಾಡಿಸುವ ಪ್ರಯತ್ನ ಮಾಡಿದ್ದಾನೆ. ನನ್ನ ಹೆಸರು ಮಲ್ಲಮ್ಮ. ನನ್ನ ಊರು ಯಾದಗಿರಿ. ನನ್ನ ಗಂಡ ಇದ್ದ ಜಮೀನು ಮಾಡಿ ಸತ್ತೋದ ಎಂದು ಹೇಳುತ್ತಿರುವುದನ್ನು ನೋಡಬಹುದು. ಊಟ ತಿಂಡಿ ಎಲ್ಲಾ ಬಿಟ್ಟು ದಿನಕ್ಕೆ ನೂರು ರೂಪಾಯಿ ಉಳಿಯುತ್ತದೆ ಎಂದು ಅಜ್ಜಿ ವಿಡಿಯೋದಲ್ಲಿ ಹೇಳಿದ್ದಾರೆ. ಮಕ್ಕಳ ಬಗ್ಗೆ ವಿಚಾರಿಸಿದಾಗ ತನಗೆ ಮೂರು ಗಂಡು ಮಕ್ಕಳು ಮೂರು ಹೆಣ್ಣು ಮಕ್ಕಳು ಎಂದು ಹೇಳಿರುವುದನ್ನು ನೋಡಬಹುದು. ಆ ಬಳಿಕ ಈ ಯುವಕನು ಅಜ್ಜಿಗೆ ಹಣ್ಣು ತಂದು ಕೊಟ್ಟು, ಕೈಯಲ್ಲಿ ಒಂದಿಷ್ಟು ಹಣವಿಟ್ಟಿರುವುದನ್ನು ನೋಡಬಹುದು. ಭಾವುಕರಾದ ಅಜ್ಜಿಯೂ ಈ ಯುವಕನಿಗೆ ಕೈ ಮುಗಿದು ಕೃತಜ್ಞತೆ ಸಲ್ಲಿಸಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ: ಇಳಿ ವಯಸ್ಸಿನಲ್ಲೂ ದುಡಿದು ತಿನ್ನುವ ಛಲ, ಅಜ್ಜಿಯ ಕೈರುಚಿಗೆ ಗ್ರಾಹಕರು ಫಿದಾ

ಈ ವಿಡಿಯೋ ಅರವತ್ತೇಳು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಒಂದೊತ್ತು ಕೂಳಿಗಷ್ಟೇ ಸ್ವಾಭಿಮಾನದಿಂದ ದುಡಿದು ತಿಂತಾರೆ ಎಂದು ಹೇಳಿದ್ದಾರೆ. ಮತ್ತೊಬ್ಬರು ನೀವು ಮಾಡಿದ್ದು ಸಣ್ಣ ಸಹಾಯ ಇರಬಹುದು. ಆದರೆ ಆ ಅಜ್ಜಿಯ ಮನಸ್ಸಿನಲ್ಲಿ ಮನೆ ಮಾಡಿದ್ದೀರಾ. ಈ ವಿಡಿಯೋ ನೋಡಿ ಸಾರ್ಥಕ ಆಯ್ತು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು ಪಾಪ ಅಜ್ಜಿ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!