AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ದುಡಿಮೆಯಲ್ಲೇ ಖುಷಿ ಕಾಣುವ ಹಿರಿಜೀವ; ಕಡಲೆಕಾಯಿ ಮಾರಿ ಜೀವನ ನಡೆಸುವ ಅಜ್ಜಿಗೆ ಸಹಾಯ ಮಾಡಿದ ಯುವಕ

ಸ್ವಾಭಿಮಾನದ ಬದುಕೇ ಹಾಗೆ, ಬೇರೆ ಯಾರ ಬಳಿ ಕೈಯೊಡ್ಡದೇ ಮೂರು ಹೊತ್ತಿನ ಊಟಕ್ಕಾಗಿ ಕಷ್ಟಪಟ್ಟು ದುಡಿಯುತ್ತಾರೆ. ಇದಕ್ಕೆ ಸಾಕ್ಷಿಯಂತಿದೆ ಈ ವಿಡಿಯೋ. ಕಡಲೆಕಾಯಿ ಮಾರಿ ಜೀವನ ನಡೆಸುತ್ತಿರುವ ಅಜ್ಜಿಯ ವಿಡಿಯೋ ವೈರಲ್ ಆಗಿದೆ. ಇಳಿ ವಯಸ್ಸಿನಲ್ಲಿ ದುಡಿಯುವ ಈ ಅಜ್ಜಿ ಎಲ್ಲರಿಗೂ ಮಾದರಿ ಎಂದು ಕಾಮೆಂಟ್ ಮಾಡಿದ್ದಾರೆ.

Video: ದುಡಿಮೆಯಲ್ಲೇ ಖುಷಿ ಕಾಣುವ ಹಿರಿಜೀವ; ಕಡಲೆಕಾಯಿ ಮಾರಿ ಜೀವನ ನಡೆಸುವ ಅಜ್ಜಿಗೆ ಸಹಾಯ ಮಾಡಿದ ಯುವಕ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Dec 15, 2025 | 11:31 AM

Share

ದುಡಿದು ತಿನ್ನುವ ಛಲವಿದ್ದರೆ ವಯಸ್ಸು ಲೆಕ್ಕಕ್ಕೆ ಬರಲ್ಲ. ಮಕ್ಕಳು ನೋಡಿಕೊಳ್ಳಬೇಕಾದ ವಯಸ್ಸಿನಲ್ಲಿ ತಮ್ಮ ದುಡಿಮೆಯನ್ನೇ ಜೀವನಕ್ಕಾಗಿ ನೆಚ್ಚಿಕೊಂಡ ಹಿರಿಜೀವಗಳನ್ನು ಕಂಡಾಗ ಕಣ್ಣಂಚಲಿ ಕಣ್ಣೀರು ಬರುತ್ತದೆ. ವೃದ್ಧೆಯೊಬ್ಬರು (old woman) ಕಡಲೆಕಾಯಿ ಮಾರಿ ಅದರಿಂದ ಬಂದ ಹಣದಿಂದಲೇ ಜೀವನ ಸಾಗಿಸುತ್ತಿದ್ದಾರೆ. ಬರುವ ಅಲ್ಪ ದುಡ್ಡನ್ನೇ ತನ್ನ ಖರ್ಚಿಗಾಗಿ ಇಟ್ಟುಕೊಳ್ಳುವ ಈ ಅಜ್ಜಿಯ ಬದುಕಿನ ಕಥೆ ಕಣ್ಣಲ್ಲಿ ನೀರು ತರಿಸುತ್ತದೆ. ಯುವಕನೊಬ್ಬ ಈ ವೃದ್ಧೆಯನ್ನು ಮಾತನಾಡಿಸಿ ವಿಡಿಯೋ ಮಾಡಿದ್ದಾನೆ.

spreadkindness77 ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋಗೆ ಈ ವಯಸ್ಸಿನಲ್ಲಿ ಇನ್ನೂ ದುಡಿಯುತ್ತಾರೆ. ನನ್ನ ಮನಸ್ಸು ಮೌನವಾಗಿರಲಿಲ್ಲ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ. ವಿಡಿಯೋದಲ್ಲಿ ಯುವಕನೊಬ್ಬ ಕಡಲೆಕಾಯಿ ಮಾರಿ ಜೀವನ ನಡೆಸುತ್ತಿರುವ ಅಜ್ಜಿಯನ್ನು ಮಾತನಾಡಿಸುವ ಪ್ರಯತ್ನ ಮಾಡಿದ್ದಾನೆ. ನನ್ನ ಹೆಸರು ಮಲ್ಲಮ್ಮ. ನನ್ನ ಊರು ಯಾದಗಿರಿ. ನನ್ನ ಗಂಡ ಇದ್ದ ಜಮೀನು ಮಾಡಿ ಸತ್ತೋದ ಎಂದು ಹೇಳುತ್ತಿರುವುದನ್ನು ನೋಡಬಹುದು. ಊಟ ತಿಂಡಿ ಎಲ್ಲಾ ಬಿಟ್ಟು ದಿನಕ್ಕೆ ನೂರು ರೂಪಾಯಿ ಉಳಿಯುತ್ತದೆ ಎಂದು ಅಜ್ಜಿ ವಿಡಿಯೋದಲ್ಲಿ ಹೇಳಿದ್ದಾರೆ. ಮಕ್ಕಳ ಬಗ್ಗೆ ವಿಚಾರಿಸಿದಾಗ ತನಗೆ ಮೂರು ಗಂಡು ಮಕ್ಕಳು ಮೂರು ಹೆಣ್ಣು ಮಕ್ಕಳು ಎಂದು ಹೇಳಿರುವುದನ್ನು ನೋಡಬಹುದು. ಆ ಬಳಿಕ ಈ ಯುವಕನು ಅಜ್ಜಿಗೆ ಹಣ್ಣು ತಂದು ಕೊಟ್ಟು, ಕೈಯಲ್ಲಿ ಒಂದಿಷ್ಟು ಹಣವಿಟ್ಟಿರುವುದನ್ನು ನೋಡಬಹುದು. ಭಾವುಕರಾದ ಅಜ್ಜಿಯೂ ಈ ಯುವಕನಿಗೆ ಕೈ ಮುಗಿದು ಕೃತಜ್ಞತೆ ಸಲ್ಲಿಸಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ: ಇಳಿ ವಯಸ್ಸಿನಲ್ಲೂ ದುಡಿದು ತಿನ್ನುವ ಛಲ, ಅಜ್ಜಿಯ ಕೈರುಚಿಗೆ ಗ್ರಾಹಕರು ಫಿದಾ

ಈ ವಿಡಿಯೋ ಅರವತ್ತೇಳು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಒಂದೊತ್ತು ಕೂಳಿಗಷ್ಟೇ ಸ್ವಾಭಿಮಾನದಿಂದ ದುಡಿದು ತಿಂತಾರೆ ಎಂದು ಹೇಳಿದ್ದಾರೆ. ಮತ್ತೊಬ್ಬರು ನೀವು ಮಾಡಿದ್ದು ಸಣ್ಣ ಸಹಾಯ ಇರಬಹುದು. ಆದರೆ ಆ ಅಜ್ಜಿಯ ಮನಸ್ಸಿನಲ್ಲಿ ಮನೆ ಮಾಡಿದ್ದೀರಾ. ಈ ವಿಡಿಯೋ ನೋಡಿ ಸಾರ್ಥಕ ಆಯ್ತು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು ಪಾಪ ಅಜ್ಜಿ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು