AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 12 ಅಡಿ ಕಾಳಿಂಗ ಸರ್ಪದ ತಲೆಗೆ ಮುತ್ತು ಕೊಟ್ಟ ಯುವಕ

King Cobra : 'ವೈಯಕ್ತಿಕವಾಗಿ ನಿಮ್ಮ ಪರಿಚಯ ನನಗಿಲ್ಲ. ಆದರೆ ನೀವು ಈ ಸಮಯವನ್ನು ಬಹುವಾಗಿ ಆನಂದಿಸಿದ್ದೀರಿ ಮತ್ತು ಹೀಗೊಂದು ಯಶಸ್ವಿ ಚುಂಬನಕ್ಕೆ ಸಾಕಷ್ಟು ಕಷ್ಟಪಟ್ಟಿರುತ್ತೀರಿ. ನಿಮ್ಮ ಸುರಕ್ಷತೆಯ ಬಗ್ಗೆ ಗಮನವಿರಲಿ'

Viral Video: 12 ಅಡಿ ಕಾಳಿಂಗ ಸರ್ಪದ ತಲೆಗೆ ಮುತ್ತು ಕೊಟ್ಟ ಯುವಕ
ಕಾಳಿಂಗ ಸರ್ಪಕ್ಕೆ ಮುತ್ತು ಕೊಡುತ್ತಿರುವ ಯುವಕ
TV9 Web
| Edited By: |

Updated on: May 17, 2023 | 10:12 AM

Share

Viral Video : ಈ ಹಿಂದೆ ಕೇರಳದ ಉರಗಪ್ರಿಯ ಸುರೇಶ ಹಾವಿಗೆ ಮುತ್ತು ಕೊಟ್ಟ ವಿಡಿಯೋ ನೋಡಿದ ನೆನಪಿರಬಹುದು. ಇದೀಗ ನಿಕ್​ ಎಂಬಾತ ಕೆರೆದಂಡೆಯ  ಮೇಲೆ ಕುಳಿತು ಕಾಳಿಂಗ ಸರ್ಪದ ತಲೆಗೆ ಮುತ್ತಿಟ್ಟು ಸುದ್ದಿಯಲ್ಲಿದ್ದಾನೆ. ದೂರದಿಂದ ಹಾವನ್ನು ಕಂಡರೆ ಅಥವಾ ನೆನಪಿಸಿಕೊಂಡರೆ ಬೆಚ್ಚಿಬೀಳುವ ಅನೇಕರಿಗೆ ಈ ಮುತ್ತುಕೊಡುವ ಪರಿ ಕನಸಿನಲ್ಲಿಯೂ ಕಾಡಬಹುದೇ? ನೋಡಿ ಈ ವಿಡಿಯೋ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ವಿಡಿಯೋ ಅನ್ನು ಕಳೆದವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಲಾಗಿದೆ. ಈ ಕಾಳಿಂಗ ಸರ್ಪ ಬರೋಬ್ಬರಿ 12 ಅಡಿ ಉದ್ದ ಇದೆ. ನಿಧಾನವಾಗಿ ಚಲಿಸುವ ಅದನ್ನು ನಿಕ್​ ಹಿಡಿಯುತ್ತಾನೆ. ಅದು ಹೆಡೆಯೆತ್ತಿ ನಿಲ್ಲುತ್ತದೆ. ಅದು ಅವನಿಗೆ ಬೆನ್ನು ಮಾಡಿದಾಗ ಮೆಲ್ಲಗೆ ಅವ ಅದರ ತಲೆಗೆ ಮುತ್ತನ್ನು ಕೊಡುತ್ತಾನೆ. ನೆಟ್ಟಿಗರು ಈ ವಿಡಿಯೋ ನೋಡಿ ಬೆಚ್ಚಿದ್ದಾರೆ. ಅನೇಕ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿ : ಟರ್ಕಿ: ‘ನೀನೇ ನನ್ನನ್ನು ರಕ್ಷಿಸಿದ್ದು, ಈಗ ಹೊರಟು ನಿಂತರೆ?’ ಬೆಕ್ಕಿನ ವಿಡಿಯೋ ವೈರಲ್

ಇಂಡಿಯಾನಾ ಜೋನ್ಸ್​ ಸಿನೆಮಾದ ದೃಶ್ಯಗಳು ನೆನಪಾಗುತ್ತಿವೆ ಎಂದು ಕೆಲವರು ಹೇಳಿದ್ದಾರೆ. ಓಹ್​ ಎಷ್ಟೊಂದು ನಿರಾಯಾಸವಾಗಿ ನೀವು ಚುಂಬಿಸಿದ್ದೀರಿ ಎಂದಿದ್ದಾರೆ ಮತ್ತೂ ಕೆಲವರು. ಇದೊಂದು ಝೆನ್​ಸಮಯ! ಆಹಾ ಎಂದಿದ್ದಾರೆ ಒಬ್ಬರು. ವೈಯಕ್ತಿಕವಾಗಿ ನಿಮ್ಮ ಪರಿಚಯ ನನಗಿಲ್ಲ. ಆದರೆ ನೀವು ಈ ಸಮಯವನ್ನು ಬಹುವಾಗಿ ಆನಂದಿಸಿದ್ದೀರಿ ಮತ್ತು ಹೀಗೊಂದು ಯಶಸ್ವಿ ಚುಂಬನಕ್ಕೆ ಸಾಕಷ್ಟು ಕಷ್ಟಪಟ್ಟಿರುತ್ತೀರಿ. ಆದರೆ ನಿಮ್ಮ ಸುರಕ್ಷತೆಯ ಬಗ್ಗೆ ಗಮನವಿರಲಿ ಎಂದಿದ್ದಾರೆ ಒಬ್ಬರು.

ಇದನ್ನೂ ಓದಿ : ಅಮ್ಮ ಎಲ್ಲಿ ಹೋದಳೋ?; ಪರ್ವಾಗಿಲ್ಲ, ಫೀಡಿಂಗ್​ ಟಂಬ್ಲರಮ್ಮ ಇದಾಳಲ್ಲ

ಹೀಗೆಲ್ಲ ಹುಚ್ಚು ಸಾಹಸಗಳನ್ನು ಮಾಡಿ ಸಾಧಿಸುವುದಾದರೂ ಏನಿದೆ? ಹೀಗೆಲ್ಲ ಪ್ರಾಣವನ್ನು ಪಣಕ್ಕಿಡಬೇಡಿ ಎಂದು ಕೆಲವರು ಬುದ್ಧಿ ಹೇಳಿದ್ದಾರೆ. ನೀವೇನು ಹೇಳುತ್ತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ