Viral Video: 12 ಅಡಿ ಕಾಳಿಂಗ ಸರ್ಪದ ತಲೆಗೆ ಮುತ್ತು ಕೊಟ್ಟ ಯುವಕ

King Cobra : 'ವೈಯಕ್ತಿಕವಾಗಿ ನಿಮ್ಮ ಪರಿಚಯ ನನಗಿಲ್ಲ. ಆದರೆ ನೀವು ಈ ಸಮಯವನ್ನು ಬಹುವಾಗಿ ಆನಂದಿಸಿದ್ದೀರಿ ಮತ್ತು ಹೀಗೊಂದು ಯಶಸ್ವಿ ಚುಂಬನಕ್ಕೆ ಸಾಕಷ್ಟು ಕಷ್ಟಪಟ್ಟಿರುತ್ತೀರಿ. ನಿಮ್ಮ ಸುರಕ್ಷತೆಯ ಬಗ್ಗೆ ಗಮನವಿರಲಿ'

Viral Video: 12 ಅಡಿ ಕಾಳಿಂಗ ಸರ್ಪದ ತಲೆಗೆ ಮುತ್ತು ಕೊಟ್ಟ ಯುವಕ
ಕಾಳಿಂಗ ಸರ್ಪಕ್ಕೆ ಮುತ್ತು ಕೊಡುತ್ತಿರುವ ಯುವಕ
Follow us
| Updated By: ಶ್ರೀದೇವಿ ಕಳಸದ

Updated on: May 17, 2023 | 10:12 AM

Viral Video : ಈ ಹಿಂದೆ ಕೇರಳದ ಉರಗಪ್ರಿಯ ಸುರೇಶ ಹಾವಿಗೆ ಮುತ್ತು ಕೊಟ್ಟ ವಿಡಿಯೋ ನೋಡಿದ ನೆನಪಿರಬಹುದು. ಇದೀಗ ನಿಕ್​ ಎಂಬಾತ ಕೆರೆದಂಡೆಯ  ಮೇಲೆ ಕುಳಿತು ಕಾಳಿಂಗ ಸರ್ಪದ ತಲೆಗೆ ಮುತ್ತಿಟ್ಟು ಸುದ್ದಿಯಲ್ಲಿದ್ದಾನೆ. ದೂರದಿಂದ ಹಾವನ್ನು ಕಂಡರೆ ಅಥವಾ ನೆನಪಿಸಿಕೊಂಡರೆ ಬೆಚ್ಚಿಬೀಳುವ ಅನೇಕರಿಗೆ ಈ ಮುತ್ತುಕೊಡುವ ಪರಿ ಕನಸಿನಲ್ಲಿಯೂ ಕಾಡಬಹುದೇ? ನೋಡಿ ಈ ವಿಡಿಯೋ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ವಿಡಿಯೋ ಅನ್ನು ಕಳೆದವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಲಾಗಿದೆ. ಈ ಕಾಳಿಂಗ ಸರ್ಪ ಬರೋಬ್ಬರಿ 12 ಅಡಿ ಉದ್ದ ಇದೆ. ನಿಧಾನವಾಗಿ ಚಲಿಸುವ ಅದನ್ನು ನಿಕ್​ ಹಿಡಿಯುತ್ತಾನೆ. ಅದು ಹೆಡೆಯೆತ್ತಿ ನಿಲ್ಲುತ್ತದೆ. ಅದು ಅವನಿಗೆ ಬೆನ್ನು ಮಾಡಿದಾಗ ಮೆಲ್ಲಗೆ ಅವ ಅದರ ತಲೆಗೆ ಮುತ್ತನ್ನು ಕೊಡುತ್ತಾನೆ. ನೆಟ್ಟಿಗರು ಈ ವಿಡಿಯೋ ನೋಡಿ ಬೆಚ್ಚಿದ್ದಾರೆ. ಅನೇಕ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿ : ಟರ್ಕಿ: ‘ನೀನೇ ನನ್ನನ್ನು ರಕ್ಷಿಸಿದ್ದು, ಈಗ ಹೊರಟು ನಿಂತರೆ?’ ಬೆಕ್ಕಿನ ವಿಡಿಯೋ ವೈರಲ್

ಇಂಡಿಯಾನಾ ಜೋನ್ಸ್​ ಸಿನೆಮಾದ ದೃಶ್ಯಗಳು ನೆನಪಾಗುತ್ತಿವೆ ಎಂದು ಕೆಲವರು ಹೇಳಿದ್ದಾರೆ. ಓಹ್​ ಎಷ್ಟೊಂದು ನಿರಾಯಾಸವಾಗಿ ನೀವು ಚುಂಬಿಸಿದ್ದೀರಿ ಎಂದಿದ್ದಾರೆ ಮತ್ತೂ ಕೆಲವರು. ಇದೊಂದು ಝೆನ್​ಸಮಯ! ಆಹಾ ಎಂದಿದ್ದಾರೆ ಒಬ್ಬರು. ವೈಯಕ್ತಿಕವಾಗಿ ನಿಮ್ಮ ಪರಿಚಯ ನನಗಿಲ್ಲ. ಆದರೆ ನೀವು ಈ ಸಮಯವನ್ನು ಬಹುವಾಗಿ ಆನಂದಿಸಿದ್ದೀರಿ ಮತ್ತು ಹೀಗೊಂದು ಯಶಸ್ವಿ ಚುಂಬನಕ್ಕೆ ಸಾಕಷ್ಟು ಕಷ್ಟಪಟ್ಟಿರುತ್ತೀರಿ. ಆದರೆ ನಿಮ್ಮ ಸುರಕ್ಷತೆಯ ಬಗ್ಗೆ ಗಮನವಿರಲಿ ಎಂದಿದ್ದಾರೆ ಒಬ್ಬರು.

ಇದನ್ನೂ ಓದಿ : ಅಮ್ಮ ಎಲ್ಲಿ ಹೋದಳೋ?; ಪರ್ವಾಗಿಲ್ಲ, ಫೀಡಿಂಗ್​ ಟಂಬ್ಲರಮ್ಮ ಇದಾಳಲ್ಲ

ಹೀಗೆಲ್ಲ ಹುಚ್ಚು ಸಾಹಸಗಳನ್ನು ಮಾಡಿ ಸಾಧಿಸುವುದಾದರೂ ಏನಿದೆ? ಹೀಗೆಲ್ಲ ಪ್ರಾಣವನ್ನು ಪಣಕ್ಕಿಡಬೇಡಿ ಎಂದು ಕೆಲವರು ಬುದ್ಧಿ ಹೇಳಿದ್ದಾರೆ. ನೀವೇನು ಹೇಳುತ್ತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ